AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

Major Dhyan Chand Khel Ratna Award: ಕ್ರೀಡಾಕ್ಷೇತ್ರದ ಸಾಧಕರಿಗೆ ನೀಡುವ ಈ ಖೇಲ್​ ರತ್ನ ಪ್ರಶಸ್ತಿಗೆ ಭಾರತದ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ನಾಮಕರಣ ಮಾಡುವಂತೆ ಅನೇಕರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು. ಹಾಗಾಗಿ ಇಷ್ಟು ದಿನ ರಾಜೀವ್ ಗಾಂಧಿ ಹೆಸರಿನಲ್ಲಿದ್ದ ಪ್ರಶಸ್ತಿಗೆ ಧ್ಯಾನ್​ ಚಂದ್​ ಹೆಸರಿಡಲಾಗಿದೆ.

Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ
ಹಾಕಿ ಮಾಂತ್ರಿಕ ಧ್ಯಾನ್​ ಚಂದ್​
TV9 Web
| Edited By: |

Updated on:Aug 06, 2021 | 1:03 PM

Share

ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ (Rajeev Gandhi Khel Ratna Award) ಇನ್ನು ಮುಂದೆ ಮೇಜರ್​ ಧ್ಯಾನ್ ಚಂದ್​ ಖೇಲ್​ರತ್ನ ಪ್ರಶಸ್ತಿ (Dhyan Chand Khel Ratna Award) ಯಾಗಿ ಕೊಡಲ್ಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಘೋಷಿಸಿದರು. ಟ್ವೀಟ್ ಮಾಡಿರುವ ಅವರು, ಖೇಲ್ ರತ್ನ ಪ್ರಶಸ್ತಿಗೆ, ಭಾರತೀಯ ಹಾಕಿ ದಿಗ್ಗಜ ಮೇಜರ್​ ಧ್ಯಾನ್​ ಚಂದ್ (Dhyan Chand) ಹೆಸರಿಡುವಂತೆ ಅನೇಕ ನಾಗರಿಕರಿಂದ ನನಗೆ ಮನವಿ ಬಂದಿತ್ತು. ಆ ಕೋರಿಕೆಗಳನ್ನು ಪುರಸ್ಕರಿಸಲಾಗುವುದು. ಖೇಲ್​ ರತ್ನ ಪ್ರಶಸ್ತಿಗೆ ಧ್ಯಾನ್ ಚಂದ್​ ಹೆಸರಿಡಲಾಗುವುದು. ಇನ್ನು ಮುಂದೆ ಮೇಜರ್​ ಧ್ಯಾನ್​ ಚಂದ್​ ಖೇಲ್​ ರತ್ನ ಎಂಬ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ. ಹಾಗೇ ಇಂಥದ್ದೊಂದು ವಿಚಾರವನ್ನು ಹಂಚಿಕೊಂಡ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಹೇಳಿದ್ದಾರೆ. 

ರಾಜೀವ್​ ಗಾಂಧಿ ಖೇಲ್​ರತ್ನ ಪ್ರಶಸ್ತಿ ಕ್ರೀಡಾಕ್ಷೇತ್ರದ ಅತ್ಯುನ್ನತ ಗೌರವವಾಗಿದೆ. ಇಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತದೆ. ಹಾಕಿ ದಿಗ್ಗಜ ಸರ್ದಾರ್​ ಸಿಂಗ್​, ಟೆನ್ನಿಸ್​ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರಿಕೆಟರ್ಸ್​ಗಳಾದ ಮಹೇಂದ್ರ ಸಿಂಗ್​ ಧೋನಿ, ಸಚಿನ್​ ತೆಂಡೂಲ್ಕರ್​, ವಿರಾಟ್ ಕೊಹ್ಲಿ ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಷ್ಟು ದಿನಗಳಿಂದ ಇದು ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತಿತ್ತು. ಆದರೀಗ ರಾಜೀವ್​ ಗಾಂಧಿ ಹೆಸರನ್ನು ತೆಗೆದು, ಹಾಕಿ ದಿಗ್ಗಜ ಧ್ಯಾನ್​ ಚಂದ್​ ನಾಮಕರಣ ಮಾಡಲಾಗಿದೆ.

ಧ್ಯಾನ್​ಚಂದ್​ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿಒಬ್ಬರು. ಅವರು ಭಾರತಕ್ಕೆ ಗೌರವ, ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಖೇಲ್​ ರತ್ನಕ್ಕೆ ಅವರ ಹೆಸರನ್ನಿಡುವುದು ತುಂಬ ಸರಿಯಾದ ಕೆಲಸ. ಹೀಗೊಂದು ದೃಷ್ಟಿಕೋನವನ್ನು ನನಗೆ ತಿಳಿಸಿದವರಿಗೆ ಕೃತಜ್ಞತೆಗಳು ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣಗೆ ನೂತನ ಸಚಿವ ಎಂಟಿಬಿ ನಾಗರಾಜ್ ಫುಲ್​ ಕ್ಲಾಸ್

ಕೊರೊನಾ ನಿಯಂತ್ರಣಕ್ಕೆ ಮತ್ತೆ ಕಠಿಣ ನಿಯಮಾವಳಿ; ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

Published On - 12:47 pm, Fri, 6 August 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್