AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್​​ಗಳ ಸ್ಪಿನ್ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್

ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್​ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್​ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್​ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್​ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್​ಗೆ ಅಂತ್ಯವಾಯ್ತು. ಪಂಜಾಬ್ ಸ್ಪಿನ್ನರ್​ಗಳ ಮೋಡಿಗೆ ಮಂಕಾದ RCB […]

ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್​​ಗಳ ಸ್ಪಿನ್ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್
KUSHAL V
|

Updated on: Oct 16, 2020 | 8:23 AM

Share

ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್​ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್​ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್​ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್​ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್​ಗೆ ಅಂತ್ಯವಾಯ್ತು.

ಪಂಜಾಬ್ ಸ್ಪಿನ್ನರ್​ಗಳ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ, ಎಚ್ಚರಿದಿಂದ ಆಟವಾಡಿದ್ರು. ಎಬಿ ಡಿವಿಲಿಯರ್ಸ್ ಬದಲು ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ವಾಷಿಂಗ್ಟನ್ ಸುಂದರ್ ರನ್ ಗಳಿಸೋದಕ್ಕೆ ಪರದಾಡಿದ್ರು. ಪಂಜಾಬ್ ಸ್ಪಿನ್ನರ್​ಗಳ ಸ್ಪಿನ್ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್​ಗಳು ಬೌಂಡರಿ, ಸಿಕ್ಸರ್​ಗಳನ್ನ ಮರೆತಂತೆ ಆಟವಾಡಿದ್ರು. RCB ಬ್ಯಾಟ್ಸ್​ಮನ್​ಗಳ ಮೈಂಡ್​ಸೆಟ್​ನ್ನ ಅರ್ಥಮಾಡಿಕೊಂಡ ಕ್ಯಾಪ್ಟನ್ ರಾಹುಲ್, ಮೂರು ಸ್ಪಿನ್ನರ್​ಗಳನ್ನ ಕಣಕ್ಕಿಳಿಸಿ ಬೆಂಗಳೂರು ತಂಡದ ರನ್ ವೇಗಕ್ಕೆ ಬ್ರೇಕ್ ಹಾಕಿದ್ರು.

ಸುಂದರ್ 13ರನ್ ಗಳಿಸಿದ್ರೆ, ಶಿವಂ ದುಬೈ 23ರನ್ ಗಳಿಸಿ ಔಟಾದ್ರು. ಅಲ್ಲಿಗೆ, RCB 16ಓವರ್​ಗಳಲ್ಲಿ 4ವಿಕೆಟ್ ಕಳೆದುಕೊಂಡು 127ರನ್ ಗಳಿಸಿತ್ತು. 6ನೇ ಕ್ರಮಾಂಕದಲ್ಲಿ ಕ್ರೀಸ್​ಗಿಳಿದ ಎಬಿ ಡಿವಿಲಿಯರ್ಸ್, ಶಾರ್ಜಾದ ಚಿಕ್ಕ ಗ್ರೌಂಡ್​ನಲ್ಲಿ ಬಿಗ್ ಸ್ಕೋರ್ ಕಲೆಹಾಕ್ತಾರೆ ಅಂತ ಎಲ್ರೂ ಅಂದುಕೊಂಡಿದ್ರು. ಆದ್ರೆ 2ರನ್ ಗಳಿಸಿದ್ದ ಎಬಿಡಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದ್ರು.

ಇದೇ ಓವರ್​ನಲ್ಲೇ 3ಬೌಂಡರಿ ಸಹಿತ 48ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ರು. ಆದ್ರೆ, ಕೊನೇ ಓವರ್​ನಲ್ಲಿ ಇಸುರು ಉದನ ಹಾಗೂ ಕ್ರಿಸ್ ಮೊರಿಸ್ 25ರನ್ ಕಲೆಹಾಕಿದ್ರು. ಇದ್ರೊಂದಿಗೆ ಆರ್​ಸಿಬಿ 171ರನ್ ಗಳಿಸ್ತು.

ಶಾರ್ಜಾದಲ್ಲಿ ರನ್ ಸುನಾಮಿ ಎಬ್ಬಿಸಿದ ಕೆ.ಎಲ್. ರಾಹುಲ್ 172ರನ್​ಗಳ ಸವಾಲಿನ ಗುರಿ ಬೆನ್ನತ್ತಿದ್ದ ಪಂಜಾಬ್​ಗೆ, ಕನ್ನಡಿಗರಾದ ಕೆ.ಎಲ್.ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ 78ರನ್​ಗಳ ಜೊತೆಯಾಟವಾಡಿದ್ರು. RCB ಬೌಲರ್​ಗಳ ಮೇಲೆ ಸವಾರಿ ಮಾಡಿದ ಮಯಾಂಕ್, 25ಬಾಲ್​ಗಳಲ್ಲಿ 45ರನ್ ಗಳಿಸಿ ಚಹಲ್ ಎಸೆತದಲ್ಲಿ ಔಟ್​​ ಆದ್ರು. ಶಾರ್ಜಾದಲ್ಲಿ ರನ್ ಸುನಾಮಿ ಎಬ್ಬಿಸಿದ ಕೆ.ಎಲ್. ರಾಹುಲ್ ಕೊಹ್ಲಿಯ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ್ರು. 49ಎಸೆತಗಳಲ್ಲಿ 5ಭರ್ಜರಿ ಸಿಕ್ಸರ್​ಗಳ ನೆರವಿನಿಂದ ರಾಹುಲ್ ಅಜೇಯ 61ರನ್ ಗಳಿಸಿದ್ರು.

ಇನ್ನೂ ಈ ಸೀಸನ್​ನಲ್ಲಿ ಮೊದಲ ಪಂದ್ಯವಾಡಿದ ಕ್ರಿಸ್ ಗೇಲ್, ಬಿಗ್ ಇನ್ನಿಂಗ್ಸ್ ಕಟ್ಟಿದ್ರು. RCB ಬೌಲರ್​ಗಳ ಎಸೆತಕ್ಕೆ ಮನಬಂದಂತೆ ಚೆಚ್ಚಿದ ಗೇಲ್, 5ಸಿಕ್ಸರ್ ಸಹಿತ 53ರನ್ ಗಳಿಸಿದ್ರು. ಈ ಮೂಲಕ ಟಿ-ಟ್ವೆಂಟಿ ಕ್ರಿಕೆಟ್​ಗೇ ನಾನೆ ಬಾಸ್ ಅನ್ನೋದನ್ನ ಮತ್ತೊಮ್ಮೆ ಸಾಬೀತುಪಡಿಸಿದ್ರು. ಕೊನೇ ಎಸೆತದವರೆಗೂ ರಣರೋಚಕತೆ ಕಾಯ್ದುಕೊಂಡ ಪಂದ್ಯದಲ್ಲಿ ನಿಕೋಲಸ್ ಪೂರನ್, ಭರ್ಜರಿ ಸಿಕ್ಸರ್ ಬಾರಿಸೋದ್ರೊಂದಿಗೆ ಪಂಜಾಬ್​ಗೆ ಗೆಲುವು ತಂದುಕೊಟ್ರು.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ