AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mixed Martial Arts: ಏಷ್ಯನ್ ಮಿಕ್ಸಡ್ ಮಾರ್ಷಲ್ ಆರ್ಟ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕನ್ನಡಿಗ

ಫೈನಲ್​ ಪಂದ್ಯದಲ್ಲಿ ಖಜಕಿಸ್ತಾನ್ ದೇಶದ ಸ್ಪರ್ಧಿ ವಿರುದ್ಧ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಪೈಟಿಂಗ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುನ್ನತ ಸಾಧನೆಯನ್ನು ಮಾಡಿ ಇಂದು ರಾಜ್ಯಕ್ಕೆ ಆಗಮಿಸಿದ್ದಾನೆ.

Mixed Martial Arts: ಏಷ್ಯನ್ ಮಿಕ್ಸಡ್ ಮಾರ್ಷಲ್ ಆರ್ಟ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕನ್ನಡಿಗ
ಚಿನ್ನದ ಪದಕ ಗೆದ್ದ ಕಿಶೋರ್
Follow us
TV9 Web
| Updated By: preethi shettigar

Updated on: Aug 30, 2021 | 2:56 PM

ಬೆಂಗಳೂರು: ಚಿಕ್ಕಂದಿನಿಂದಲೂ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಇಟ್ಟುಕೊಂಡಿದ್ದ ದೇವನಹಳ್ಳಿಯ ಯುವಕ ಕಿಶೋರ್, ಮಿಕ್ಸಡ್ ಮಾರ್ಷಲ್ ಆರ್ಟ್ಸ್​ನಲ್ಲಿ (MMA) ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾನೆ. ಈ ಕ್ಷೇತ್ರದಲ್ಲಿಯೇ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲದಿಂದ ಸದಾ ಅಭ್ಯಾಸದಲ್ಲಿ ತೊಡಗಿದ್ದ ಕಿಶೋರ್, ಏಷ್ಯ ಚಾಂಪಿಯಾನ್​ಶಿಪ್​ನ ಎಂಎಂಎ ಚಾಂಪಿಯನ್​ಶಿಪ್​ನ ಮಿಕ್ಸಡ್ ಮಾರ್ಷಲ್​ನಲ್ಲಿ ಚಿನ್ನದ ಪದಕ ಗೆದ್ದು ದೇಶ ಮತ್ತು ರಾಜ್ಯಕ್ಕೆ ಕಿರ್ತಿ ತಂದಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೇಗೂರು ಗ್ರಾಮದ ಕುಮಾರ್ ಎಂಬುವವರ ಮಗನಾದ ಕಿಶೋರ್, ಚಿಕ್ಕಂದಿನಿಂದಲೂ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲದಿಂದನು. ಇದೀಗ ಕಿರ್ಗಿಸ್ತಾನ್​ನಲ್ಲಿ ನಡೆದ ಏಷ್ಯನ್ ಎಂಎಂಎ ಚಾಂಪಿಯನ್​ಶಿಪ್​ನಲ್ಲಿ ಚಿನ್ನವನ್ನು ಗೆದ್ದು ದೇಶ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.

ಫೈನಲ್​ ಪಂದ್ಯದಲ್ಲಿ ಖಜಕಿಸ್ತಾನ್ ದೇಶದ ಸ್ಪರ್ಧಿ ವಿರುದ್ಧ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಪೈಟಿಂಗ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುನ್ನತ ಸಾಧನೆಯನ್ನು ಮಾಡಿ ಇಂದು ರಾಜ್ಯಕ್ಕೆ ಆಗಮಿಸಿದ್ದಾನೆ.  ಈ ವೇಳೆ ವಿಮಾನ ನಿಲ್ದಾಣದಲ್ಲಿ ಚಿನ್ನದ ಪದಕ ಗೆದ್ದಿರುವ ಕಿಶೋರ್ ಸಂತಸ ವ್ಯಕ್ತಪಡಿಸಿದ್ದಾನೆ.

ಇದೇ ತಿಂಗಳ 24 ರಿಂದ 28 ರ ವರೆಗೂ ಕಿರ್ಗಿಸ್ತಾನ್ ಏಷ್ಯಿಯಾನ್ ಎಂಎಂಎ ಚಾಂಪಿಯಾನ್​ಶಿಪ್​ ಮಿಕ್ಸಡ್ ಮಾರ್ಷಲ್ ಪೈಟಿಂಗ್ ಸ್ಪರ್ಧೆ ನಡೆದಿದ್ದು, ಅದರಲ್ಲಿ 52.2 ಕೆಜಿ ವಿಭಾಗದಲ್ಲಿ ಮೂರು ದೇಶಗಳ ವಿರುದ್ಧ ಕಿಶೋರ್ ಸೆಣಸಾಟ ನಡೆಸಿದ್ದಾನೆ. ಕೊನೆಗೆ ಖಜಕಿಸ್ತಾನ್ ದೇಶದ ವಿರುದ್ಧ ಪೈನಲ್​ನಲ್ಲಿ ಗೆದ್ದ ಈ ಯುವಕ ಚಿನ್ನದ ಪದಕವನ್ನು ಗೆದ್ದು ಇದೀಗ ದೆಹಲಿಗೆ ಆಗಮಿಸಿ ಅಲ್ಲಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾನೆ.

ವಿಮಾನ ನಿಲ್ದಾಣಕ್ಕೆ ಬಂದ ಕಿಶೋರ್​ನನ್ನು ಕುಟುಂಬಸ್ಥರು ಮತ್ತು ಕೆಲ ಅಭಿಮಾನಿಗಳು ಸ್ವಾಗತಿಸಿ ಸಂತಸವನ್ನು ಹಂಚಿಕೊಂಡರು. ಜತೆಗೆ ಮುಂದೆ ಇನ್ನಷ್ಟು ಸಾಧನೆ ಮಾಡುವ ಗುರಿ ಇಟ್ಟುಕೊಂಡಿರುವ ಮಗನಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ಕಿಶೋರ್​ ತಂದೆ ಕುಮಾರ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಮಿಕ್ಸಡ್ ಮಾರ್ಷಲ್​ನಲ್ಲಿ ಕುಸ್ತಿ, ಬಾಕ್ಸಿಂಗ್, ಟೆಕ್ವಾಂಡೋದಲ್ಲಿ ತನ್ನನ್ನು ತಾನು ಕರಗತ ಮಾಡಿಕೊಂಡಿರುವ ಕಿಶೋರ್ ಏಷ್ಯಿಯಾನ್ ಚಾಂಪಿಯಾನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದು ತಾಯ್ನಾಡಿಗೆ ಕೀರ್ತಿ ತಂದಿದ್ದಾನೆ. ಇನ್ನೂ ಮುಂದೆ ವಿಶ್ವ ಚಾಂಪಿಯಾನ್ ಭಾಗವಹಿಸುವ ಗುರಿ ಹೊಂದಿರುವ ಕಿಶೋರ್​ಗೆ ಸರ್ಕಾರ ಮತ್ತಷ್ಟು ಬೆಂಬಲ ನೀಡಲಿ ಎನ್ನುವುದು ಎಲ್ಲರ ಆಶಯ.

ವರದಿ: ನವೀನ್ ಇದನ್ನೂ ಓದಿ:

ಹೊಸ ವಿಶ್ವ ಅಥ್ಲೆಟಿಕ್ಸ್ ರ‍್ಯಾಕಿಂಗ್: ಒಲಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಎರಡನೇ ಸ್ಥಾನ!

Tokyo Paralympics: ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಗ್ರೆಟ್ ಬ್ರಿಟನ್ ದಂಪತಿ

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ