AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mixed Martial Arts: ಏಷ್ಯನ್ ಮಿಕ್ಸಡ್ ಮಾರ್ಷಲ್ ಆರ್ಟ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕನ್ನಡಿಗ

ಫೈನಲ್​ ಪಂದ್ಯದಲ್ಲಿ ಖಜಕಿಸ್ತಾನ್ ದೇಶದ ಸ್ಪರ್ಧಿ ವಿರುದ್ಧ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಪೈಟಿಂಗ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುನ್ನತ ಸಾಧನೆಯನ್ನು ಮಾಡಿ ಇಂದು ರಾಜ್ಯಕ್ಕೆ ಆಗಮಿಸಿದ್ದಾನೆ.

Mixed Martial Arts: ಏಷ್ಯನ್ ಮಿಕ್ಸಡ್ ಮಾರ್ಷಲ್ ಆರ್ಟ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಕನ್ನಡಿಗ
ಚಿನ್ನದ ಪದಕ ಗೆದ್ದ ಕಿಶೋರ್
TV9 Web
| Edited By: |

Updated on: Aug 30, 2021 | 2:56 PM

Share

ಬೆಂಗಳೂರು: ಚಿಕ್ಕಂದಿನಿಂದಲೂ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಇಟ್ಟುಕೊಂಡಿದ್ದ ದೇವನಹಳ್ಳಿಯ ಯುವಕ ಕಿಶೋರ್, ಮಿಕ್ಸಡ್ ಮಾರ್ಷಲ್ ಆರ್ಟ್ಸ್​ನಲ್ಲಿ (MMA) ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾನೆ. ಈ ಕ್ಷೇತ್ರದಲ್ಲಿಯೇ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲದಿಂದ ಸದಾ ಅಭ್ಯಾಸದಲ್ಲಿ ತೊಡಗಿದ್ದ ಕಿಶೋರ್, ಏಷ್ಯ ಚಾಂಪಿಯಾನ್​ಶಿಪ್​ನ ಎಂಎಂಎ ಚಾಂಪಿಯನ್​ಶಿಪ್​ನ ಮಿಕ್ಸಡ್ ಮಾರ್ಷಲ್​ನಲ್ಲಿ ಚಿನ್ನದ ಪದಕ ಗೆದ್ದು ದೇಶ ಮತ್ತು ರಾಜ್ಯಕ್ಕೆ ಕಿರ್ತಿ ತಂದಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೇಗೂರು ಗ್ರಾಮದ ಕುಮಾರ್ ಎಂಬುವವರ ಮಗನಾದ ಕಿಶೋರ್, ಚಿಕ್ಕಂದಿನಿಂದಲೂ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲದಿಂದನು. ಇದೀಗ ಕಿರ್ಗಿಸ್ತಾನ್​ನಲ್ಲಿ ನಡೆದ ಏಷ್ಯನ್ ಎಂಎಂಎ ಚಾಂಪಿಯನ್​ಶಿಪ್​ನಲ್ಲಿ ಚಿನ್ನವನ್ನು ಗೆದ್ದು ದೇಶ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.

ಫೈನಲ್​ ಪಂದ್ಯದಲ್ಲಿ ಖಜಕಿಸ್ತಾನ್ ದೇಶದ ಸ್ಪರ್ಧಿ ವಿರುದ್ಧ ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಪೈಟಿಂಗ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯುನ್ನತ ಸಾಧನೆಯನ್ನು ಮಾಡಿ ಇಂದು ರಾಜ್ಯಕ್ಕೆ ಆಗಮಿಸಿದ್ದಾನೆ.  ಈ ವೇಳೆ ವಿಮಾನ ನಿಲ್ದಾಣದಲ್ಲಿ ಚಿನ್ನದ ಪದಕ ಗೆದ್ದಿರುವ ಕಿಶೋರ್ ಸಂತಸ ವ್ಯಕ್ತಪಡಿಸಿದ್ದಾನೆ.

ಇದೇ ತಿಂಗಳ 24 ರಿಂದ 28 ರ ವರೆಗೂ ಕಿರ್ಗಿಸ್ತಾನ್ ಏಷ್ಯಿಯಾನ್ ಎಂಎಂಎ ಚಾಂಪಿಯಾನ್​ಶಿಪ್​ ಮಿಕ್ಸಡ್ ಮಾರ್ಷಲ್ ಪೈಟಿಂಗ್ ಸ್ಪರ್ಧೆ ನಡೆದಿದ್ದು, ಅದರಲ್ಲಿ 52.2 ಕೆಜಿ ವಿಭಾಗದಲ್ಲಿ ಮೂರು ದೇಶಗಳ ವಿರುದ್ಧ ಕಿಶೋರ್ ಸೆಣಸಾಟ ನಡೆಸಿದ್ದಾನೆ. ಕೊನೆಗೆ ಖಜಕಿಸ್ತಾನ್ ದೇಶದ ವಿರುದ್ಧ ಪೈನಲ್​ನಲ್ಲಿ ಗೆದ್ದ ಈ ಯುವಕ ಚಿನ್ನದ ಪದಕವನ್ನು ಗೆದ್ದು ಇದೀಗ ದೆಹಲಿಗೆ ಆಗಮಿಸಿ ಅಲ್ಲಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾನೆ.

ವಿಮಾನ ನಿಲ್ದಾಣಕ್ಕೆ ಬಂದ ಕಿಶೋರ್​ನನ್ನು ಕುಟುಂಬಸ್ಥರು ಮತ್ತು ಕೆಲ ಅಭಿಮಾನಿಗಳು ಸ್ವಾಗತಿಸಿ ಸಂತಸವನ್ನು ಹಂಚಿಕೊಂಡರು. ಜತೆಗೆ ಮುಂದೆ ಇನ್ನಷ್ಟು ಸಾಧನೆ ಮಾಡುವ ಗುರಿ ಇಟ್ಟುಕೊಂಡಿರುವ ಮಗನಿಗೆ ಸಂಪೂರ್ಣ ಸಹಕಾರ ನಿಡುವುದಾಗಿ ಕಿಶೋರ್​ ತಂದೆ ಕುಮಾರ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಮಿಕ್ಸಡ್ ಮಾರ್ಷಲ್​ನಲ್ಲಿ ಕುಸ್ತಿ, ಬಾಕ್ಸಿಂಗ್, ಟೆಕ್ವಾಂಡೋದಲ್ಲಿ ತನ್ನನ್ನು ತಾನು ಕರಗತ ಮಾಡಿಕೊಂಡಿರುವ ಕಿಶೋರ್ ಏಷ್ಯಿಯಾನ್ ಚಾಂಪಿಯಾನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದು ತಾಯ್ನಾಡಿಗೆ ಕೀರ್ತಿ ತಂದಿದ್ದಾನೆ. ಇನ್ನೂ ಮುಂದೆ ವಿಶ್ವ ಚಾಂಪಿಯಾನ್ ಭಾಗವಹಿಸುವ ಗುರಿ ಹೊಂದಿರುವ ಕಿಶೋರ್​ಗೆ ಸರ್ಕಾರ ಮತ್ತಷ್ಟು ಬೆಂಬಲ ನೀಡಲಿ ಎನ್ನುವುದು ಎಲ್ಲರ ಆಶಯ.

ವರದಿ: ನವೀನ್ ಇದನ್ನೂ ಓದಿ:

ಹೊಸ ವಿಶ್ವ ಅಥ್ಲೆಟಿಕ್ಸ್ ರ‍್ಯಾಕಿಂಗ್: ಒಲಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಎರಡನೇ ಸ್ಥಾನ!

Tokyo Paralympics: ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಗ್ರೆಟ್ ಬ್ರಿಟನ್ ದಂಪತಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್