AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​​ ಆಗಿ ಮದುವೆ ಆದ ಖ್ಯಾತ ಬೌಲರ್​: ವಿವಾಹ ಮಂಟಪದಲ್ಲಿ ಬೌಲಿಂಗ್​ ಪ್ರದರ್ಶನ!

ವರುಣ್​ ಚಕ್ರವರ್ತಿ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್​ ಜೊತೆ ಮದುವೆ ಆಗಿದ್ದಾರೆ. ತುಂಬಾನೇ ಖಾಸಗಿಯಾಗಿ ನಡೆದ ಈ ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿತ್ತು.

ಸಿಂಪಲ್​​ ಆಗಿ ಮದುವೆ ಆದ ಖ್ಯಾತ ಬೌಲರ್​: ವಿವಾಹ ಮಂಟಪದಲ್ಲಿ ಬೌಲಿಂಗ್​ ಪ್ರದರ್ಶನ!
ವಿವಾಹವಾದ ವರುಣ್​ ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 3:37 PM

Share

ಕೊರೊನಾ ವೈರಸ್ ಮಧ್ಯೆಯೇ ಸಾಕಷ್ಟು ಜನರು ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇದೇ ಅವಧಿಯಲ್ಲಿ ಹಸೆಮಣೆ ಏರಿದ್ದಾರೆ. ಈಗ, ಐಪಿಎಲ್​ನಲ್ಲಿ ಸದ್ದು ಮಾಡಿದ್ದ ಕೋಲ್ಕತ್ತಾ ನೈಟ್​ ರೈಡರ್ಸ್​ ಬೌಲರ್​ ವರುಣ್​ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವರುಣ್​ ಚಕ್ರವರ್ತಿ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್​ ಜೊತೆ ಮದುವೆ ಆಗಿದ್ದಾರೆ. ತುಂಬಾನೇ ಖಾಸಗಿಯಾಗಿ ನಡೆದ ಈ ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿತ್ತು. ಅಚ್ಚರಿ ಎಂದರೆ, ವರುಣ್​ ವೇದಿಕೆಯ ಮೇಲೆ ಬೌಲಿಂಗ್​ ಪ್ರದರ್ಶನ ನೀಡಿದ್ದಾರೆ. ನೇಹಾ ಬ್ಯಾಟ್​ ಬೀಸಿದ್ದಾರೆ.

ಈ ವಿಡಿಯೋವನ್ನು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಕೆಕೆಆರ್​, ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಹಾಗೂ ನೇಹಾಗೆ ಕೆಕೆಆರ್​ ಕಡೆಯಿಂದ ಅಭಿನಂದನೆಗಳು ಎಂದಿದೆ. ಅನೇಕರು ವರುಣ್​​ಗೆ ಅಭಿನಂದನೆ ಸಲ್ಲಿಸಿದ್ದಾರೆ.

2019ರಲ್ಲಿ ಕಿಂಗ್ಸ್​ ಇಲವೆನ್ ಪಂಜಾಬ್​ ತಂಡ ₹ 8.4 ಕೋಟಿಗೆ ವರುಣ್​ ಅವರನ್ನು ಖರೀದಿಸಿತ್ತು. ಮೊದಲ ಮ್ಯಾಚ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಅವರರಿಗೆ ಅವಕಾಶ ಸಿಕ್ಕಿರಲಿಲ್ಲ. ಕೆಕೆಆರ್​ ತಂಡ 2020ರಲ್ಲಿ ವರುಣ್​ ಅವರನ್ನು ₹ 4 ಕೋಟಿಗೆ ಖರೀದಿಸಿತ್ತು. 13 ಪಂದ್ಯಗಳಿಂದ 17 ವಿಕೆಟ್​ ಕಿತ್ತಿದ್ದ ವರುಣ್​ 6.84 ಎಕಾನಮಿ ರೇಟ್​ ಉಳಿಸಿಕೊಂಡಿದ್ದರು.

ಇವರ ಪರ್ಫಾರ್ಮೆನ್ಸ್​ ನೋಡಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ವರುಣ್​ ಆಯ್ಕೆ ಆಗಿದ್ದರು. ಆದರೆ, ಅವರು ಗಾಯದ ಸಮಸ್ಯೆಯಿಂದ ಬಳಲಿದ ಕಾರಣ, ಅವರ ಬದಲು ನಟರಾಜನ್​ ಆಯ್ಕೆ ಮಾಡಲಾಗಿತ್ತು. ನಟರಾಜನ್​ ಈ ಬಾರಿ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಫಿಟ್​​ ಆದರೂ ಫೈನಲ್​ ಆಗಿಲ್ಲ ರೋಹಿತ್​ ಎಂಟ್ರಿ: ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಲಿದ್ದಾರೆ ಹಿಟ್​ ಮ್ಯಾನ್

Published On - 3:28 pm, Sun, 13 December 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ