AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​​ ಆಗಿ ಮದುವೆ ಆದ ಖ್ಯಾತ ಬೌಲರ್​: ವಿವಾಹ ಮಂಟಪದಲ್ಲಿ ಬೌಲಿಂಗ್​ ಪ್ರದರ್ಶನ!

ವರುಣ್​ ಚಕ್ರವರ್ತಿ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್​ ಜೊತೆ ಮದುವೆ ಆಗಿದ್ದಾರೆ. ತುಂಬಾನೇ ಖಾಸಗಿಯಾಗಿ ನಡೆದ ಈ ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿತ್ತು.

ಸಿಂಪಲ್​​ ಆಗಿ ಮದುವೆ ಆದ ಖ್ಯಾತ ಬೌಲರ್​: ವಿವಾಹ ಮಂಟಪದಲ್ಲಿ ಬೌಲಿಂಗ್​ ಪ್ರದರ್ಶನ!
ವಿವಾಹವಾದ ವರುಣ್​ ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 3:37 PM

Share

ಕೊರೊನಾ ವೈರಸ್ ಮಧ್ಯೆಯೇ ಸಾಕಷ್ಟು ಜನರು ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇದೇ ಅವಧಿಯಲ್ಲಿ ಹಸೆಮಣೆ ಏರಿದ್ದಾರೆ. ಈಗ, ಐಪಿಎಲ್​ನಲ್ಲಿ ಸದ್ದು ಮಾಡಿದ್ದ ಕೋಲ್ಕತ್ತಾ ನೈಟ್​ ರೈಡರ್ಸ್​ ಬೌಲರ್​ ವರುಣ್​ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವರುಣ್​ ಚಕ್ರವರ್ತಿ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್​ ಜೊತೆ ಮದುವೆ ಆಗಿದ್ದಾರೆ. ತುಂಬಾನೇ ಖಾಸಗಿಯಾಗಿ ನಡೆದ ಈ ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿತ್ತು. ಅಚ್ಚರಿ ಎಂದರೆ, ವರುಣ್​ ವೇದಿಕೆಯ ಮೇಲೆ ಬೌಲಿಂಗ್​ ಪ್ರದರ್ಶನ ನೀಡಿದ್ದಾರೆ. ನೇಹಾ ಬ್ಯಾಟ್​ ಬೀಸಿದ್ದಾರೆ.

ಈ ವಿಡಿಯೋವನ್ನು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಕೆಕೆಆರ್​, ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಹಾಗೂ ನೇಹಾಗೆ ಕೆಕೆಆರ್​ ಕಡೆಯಿಂದ ಅಭಿನಂದನೆಗಳು ಎಂದಿದೆ. ಅನೇಕರು ವರುಣ್​​ಗೆ ಅಭಿನಂದನೆ ಸಲ್ಲಿಸಿದ್ದಾರೆ.

2019ರಲ್ಲಿ ಕಿಂಗ್ಸ್​ ಇಲವೆನ್ ಪಂಜಾಬ್​ ತಂಡ ₹ 8.4 ಕೋಟಿಗೆ ವರುಣ್​ ಅವರನ್ನು ಖರೀದಿಸಿತ್ತು. ಮೊದಲ ಮ್ಯಾಚ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಅವರರಿಗೆ ಅವಕಾಶ ಸಿಕ್ಕಿರಲಿಲ್ಲ. ಕೆಕೆಆರ್​ ತಂಡ 2020ರಲ್ಲಿ ವರುಣ್​ ಅವರನ್ನು ₹ 4 ಕೋಟಿಗೆ ಖರೀದಿಸಿತ್ತು. 13 ಪಂದ್ಯಗಳಿಂದ 17 ವಿಕೆಟ್​ ಕಿತ್ತಿದ್ದ ವರುಣ್​ 6.84 ಎಕಾನಮಿ ರೇಟ್​ ಉಳಿಸಿಕೊಂಡಿದ್ದರು.

ಇವರ ಪರ್ಫಾರ್ಮೆನ್ಸ್​ ನೋಡಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ವರುಣ್​ ಆಯ್ಕೆ ಆಗಿದ್ದರು. ಆದರೆ, ಅವರು ಗಾಯದ ಸಮಸ್ಯೆಯಿಂದ ಬಳಲಿದ ಕಾರಣ, ಅವರ ಬದಲು ನಟರಾಜನ್​ ಆಯ್ಕೆ ಮಾಡಲಾಗಿತ್ತು. ನಟರಾಜನ್​ ಈ ಬಾರಿ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಫಿಟ್​​ ಆದರೂ ಫೈನಲ್​ ಆಗಿಲ್ಲ ರೋಹಿತ್​ ಎಂಟ್ರಿ: ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಲಿದ್ದಾರೆ ಹಿಟ್​ ಮ್ಯಾನ್

Published On - 3:28 pm, Sun, 13 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ