AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​​ ಆಗಿ ಮದುವೆ ಆದ ಖ್ಯಾತ ಬೌಲರ್​: ವಿವಾಹ ಮಂಟಪದಲ್ಲಿ ಬೌಲಿಂಗ್​ ಪ್ರದರ್ಶನ!

ವರುಣ್​ ಚಕ್ರವರ್ತಿ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್​ ಜೊತೆ ಮದುವೆ ಆಗಿದ್ದಾರೆ. ತುಂಬಾನೇ ಖಾಸಗಿಯಾಗಿ ನಡೆದ ಈ ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿತ್ತು.

ಸಿಂಪಲ್​​ ಆಗಿ ಮದುವೆ ಆದ ಖ್ಯಾತ ಬೌಲರ್​: ವಿವಾಹ ಮಂಟಪದಲ್ಲಿ ಬೌಲಿಂಗ್​ ಪ್ರದರ್ಶನ!
ವಿವಾಹವಾದ ವರುಣ್​ ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 3:37 PM

Share

ಕೊರೊನಾ ವೈರಸ್ ಮಧ್ಯೆಯೇ ಸಾಕಷ್ಟು ಜನರು ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇದೇ ಅವಧಿಯಲ್ಲಿ ಹಸೆಮಣೆ ಏರಿದ್ದಾರೆ. ಈಗ, ಐಪಿಎಲ್​ನಲ್ಲಿ ಸದ್ದು ಮಾಡಿದ್ದ ಕೋಲ್ಕತ್ತಾ ನೈಟ್​ ರೈಡರ್ಸ್​ ಬೌಲರ್​ ವರುಣ್​ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವರುಣ್​ ಚಕ್ರವರ್ತಿ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್​ ಜೊತೆ ಮದುವೆ ಆಗಿದ್ದಾರೆ. ತುಂಬಾನೇ ಖಾಸಗಿಯಾಗಿ ನಡೆದ ಈ ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿತ್ತು. ಅಚ್ಚರಿ ಎಂದರೆ, ವರುಣ್​ ವೇದಿಕೆಯ ಮೇಲೆ ಬೌಲಿಂಗ್​ ಪ್ರದರ್ಶನ ನೀಡಿದ್ದಾರೆ. ನೇಹಾ ಬ್ಯಾಟ್​ ಬೀಸಿದ್ದಾರೆ.

ಈ ವಿಡಿಯೋವನ್ನು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಕೆಕೆಆರ್​, ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್​ ಹಾಗೂ ನೇಹಾಗೆ ಕೆಕೆಆರ್​ ಕಡೆಯಿಂದ ಅಭಿನಂದನೆಗಳು ಎಂದಿದೆ. ಅನೇಕರು ವರುಣ್​​ಗೆ ಅಭಿನಂದನೆ ಸಲ್ಲಿಸಿದ್ದಾರೆ.

2019ರಲ್ಲಿ ಕಿಂಗ್ಸ್​ ಇಲವೆನ್ ಪಂಜಾಬ್​ ತಂಡ ₹ 8.4 ಕೋಟಿಗೆ ವರುಣ್​ ಅವರನ್ನು ಖರೀದಿಸಿತ್ತು. ಮೊದಲ ಮ್ಯಾಚ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಅವರರಿಗೆ ಅವಕಾಶ ಸಿಕ್ಕಿರಲಿಲ್ಲ. ಕೆಕೆಆರ್​ ತಂಡ 2020ರಲ್ಲಿ ವರುಣ್​ ಅವರನ್ನು ₹ 4 ಕೋಟಿಗೆ ಖರೀದಿಸಿತ್ತು. 13 ಪಂದ್ಯಗಳಿಂದ 17 ವಿಕೆಟ್​ ಕಿತ್ತಿದ್ದ ವರುಣ್​ 6.84 ಎಕಾನಮಿ ರೇಟ್​ ಉಳಿಸಿಕೊಂಡಿದ್ದರು.

ಇವರ ಪರ್ಫಾರ್ಮೆನ್ಸ್​ ನೋಡಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ವರುಣ್​ ಆಯ್ಕೆ ಆಗಿದ್ದರು. ಆದರೆ, ಅವರು ಗಾಯದ ಸಮಸ್ಯೆಯಿಂದ ಬಳಲಿದ ಕಾರಣ, ಅವರ ಬದಲು ನಟರಾಜನ್​ ಆಯ್ಕೆ ಮಾಡಲಾಗಿತ್ತು. ನಟರಾಜನ್​ ಈ ಬಾರಿ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಫಿಟ್​​ ಆದರೂ ಫೈನಲ್​ ಆಗಿಲ್ಲ ರೋಹಿತ್​ ಎಂಟ್ರಿ: ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಲಿದ್ದಾರೆ ಹಿಟ್​ ಮ್ಯಾನ್

Published On - 3:28 pm, Sun, 13 December 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ