AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಲ್ಬೋರ್ನ್​​ ಟೆಸ್ಟ್​ಗೆ ಈ ಇಬ್ಬರು ಆಟಗಾರರಿದ್ದರೆ ಮಾತ್ರ ಭಾರತದ ಅದೃಷ್ಟ ಬದಲಾಗುತ್ತೆ

ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸುನಿಲ್​ ಗಾವಸ್ಕರ್​, ಈ ರೀತಿಯ ಪ್ರದರ್ಶನ ನೋಡಿದ ನಂತರದಲ್ಲಿ ಎಲ್ಲರಿಗೂ ಬೇಸರವಾಗುವುದು ಸಹಜ. ಮುಂದಿನ ಪಂದ್ಯದಲ್ಲಿ ಎರಡು ಬದಲಾವಣೆ ಆಗಲೇಬೇಕು ಎಂದಿದ್ದಾರೆ.

ಮೆಲ್ಬೋರ್ನ್​​ ಟೆಸ್ಟ್​ಗೆ ಈ ಇಬ್ಬರು ಆಟಗಾರರಿದ್ದರೆ ಮಾತ್ರ ಭಾರತದ ಅದೃಷ್ಟ ಬದಲಾಗುತ್ತೆ
ಟೀಂ ಇಂಡಿಯಾ
ರಾಜೇಶ್ ದುಗ್ಗುಮನೆ
| Edited By: |

Updated on:Dec 20, 2020 | 3:05 PM

Share

ಅಡಿಲೇಡ್​ ಟೆಸ್ಟ್​ ಪಂದ್ಯದಲ್ಲಿ ಕೆಲವರು ಭಾರತದ ಸೋಲನ್ನು ಪರಾಮರ್ಶಿಸಿದರೆ ಇನ್ನೂ ಕೆಲವರು ಮುಂದಿನ ಪಂದ್ಯಕ್ಕೆ ಯಾವ ಆಟಗಾರರನ್ನು ಕೈ ಬಿಡಬೇಕು ಎನ್ನುವ ಬಗ್ಗೆ ಚರ್ಚೆ ಆರಂಭಿಸಿದ್ದಾರೆ. ಈ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್​ ಗಾವಸ್ಕರ್​ ಕೆಲ ಕಿವಿಮಾತು ಹೇಳಿದ್ದಾರೆ.

ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುನಿಲ್​ ಗಾವಸ್ಕರ್​, ಈ ರೀತಿಯ ಪ್ರದರ್ಶನ ನೋಡಿದ ನಂತರದಲ್ಲಿ ಎಲ್ಲರಿಗೂ ಬೇಸರವಾಗುವುದು ಸಹಜ. ನಾವು ಉತ್ತಮ ಪ್ರದರ್ಶನ ನೀಡಿದ್ದರೆ ಗೆಲ್ಲಬಹುದಿತ್ತು. ಏಕೆಂದರೆ, ಆಸ್ಟ್ರೇಲಿಯಾ ಬ್ಯಾಟ್ಸಮನ್​ಗಳು ಅಷ್ಟು ವಿಶ್ವಾಸದಿಂದ ಇರಲಿಲ್ಲ. ಕ್ರಿಕೆಟ್​ನಲ್ಲಿ ಏನು ಬೇಕಾದರೂ ಆಗಬಹುದು ಎಂದರು.

ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಆಗಬೇಕು ಎಂದಿರುವ ಗಾವಸ್ಕರ್​, ಭಾರತದ ಬ್ಯಾಟಿಂಗ್​ ವಿಭಾಗದಲ್ಲಿ ಎರಡು ಬದಲಾವಣೆ ಆಗೋದು ಖಚಿತ. ಪೃಥ್ವಿ ಶಾ ಬದಲಾಗಿ ಕನ್ನಡಿಗ ಕೆ.ಎಲ್. ರಾಹುಲ್​ ಕಣಕ್ಕೆ ಇಳಿಯಬಹುದು. ಶುಭ್​ ಮನ್​ ಗಿಲ್​ ಐದು ಅಥವಾ ಆರನೇ ಸ್ಥಾನದಲ್ಲಿ ಬ್ಯಾಟಿಂಗ್​ಗೆ ಇಳಿಯಬಹುದು. ಇವರಿಬ್ಬರಿದ್ದರೆ ಮಾತ್ರ ಭಾರತದ ಅದೃಷ್ಟ ಬದಲಾಗಲಿದೆ ಎಂದರು.

ಕನ್ನಡಿಗ ಕೆ.ಎಲ್.​ ರಾಹುಲ್​ ಮೊದಲ ಟೆಸ್ಟ್​ನಿಂದ ಹೊರಗುಳಿದಿದ್ದರು. ಇದಕ್ಕೆ ಕಾರಣ ಕೂಡ ಇತ್ತು. ಏಕದಿನ ಹಾಗೂ ಟಿ-20 ಪಂದ್ಯಗಳಲ್ಲಿ ಕೆಲ್​ ರಾಹುಲ್​ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿ ಅಗತ್ಯ ಇದೆ. ಅಲ್ಲದೆ, ಎರಡನೇ ಟೆಸ್ಟ್​ನಿಂದ ವಿರಾಟ್​ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿತ್ತು. ಆದರೆ ಈಗ ರಾಹುಲ್​ ತಂಡ ಸೇರಿಕೊಳ್ಳೋದು ಅನಿವಾರ್ಯವಾಗಿದೆ.

India vs Australia Test Series 2020: ಟ್ವೀಟ್​ಗಳಲ್ಲೂ ಟೀಮ್ ಇಂಡಿಯ ಆಟಗಾರರಿಗೆ ತರಾಟೆ

Published On - 3:04 pm, Sun, 20 December 20

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!