AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Cricket 2020 | ರಹಾನೆ ಮೇಲೆ ದೊಡ್ಡ ಜವಾಬ್ದಾರಿ ಹೊರೆಸಿ ಸ್ವದೇಶಕ್ಕೆ ವಾಪಸ್ಸು ಹೊರಟ ಕೊಹ್ಲಿ

ಮೊದಲ ಟೆಸ್ಟ್​ ಹೀನಾಯವಾಗಿ ಸೋತು ಕಂಗಾಲಾಗಿರುವ ಟೀಮ್ ಇಂಡಿಯಾದ ಸದಸ್ಯರನ್ನು ಉಳಿದ ಮೂರು ಪಂದ್ಯಗಳನ್ನಾಡಲು ಬಿಟ್ಟು ನಾಯಕ ವಿರಾಟ್ ಕೊಹ್ಲಿ ಇಂದು ಸ್ವದೇಶದತ್ತ ಪ್ರಯಾಣ ಬೆಳೆಸಿದರು. ಅವರ ಗೈರುಹಾಜರಿಯಲ್ಲಿ ಅಜಿಂಕ್ಯಾ ರಹಾನೆ ಟೀಮಿನ ನಾಯಕತ್ವ ವಹಿಸಲಿದ್ದಾರೆ

India vs Australia Test Cricket 2020 | ರಹಾನೆ ಮೇಲೆ ದೊಡ್ಡ ಜವಾಬ್ದಾರಿ ಹೊರೆಸಿ ಸ್ವದೇಶಕ್ಕೆ ವಾಪಸ್ಸು ಹೊರಟ ಕೊಹ್ಲಿ
ವಿರಾಟ್ ಕೊಹ್ಲಿ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Dec 24, 2020 | 1:53 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಪಿತೃತ್ವದ ರಜೆ ಪಡೆದಿರುವ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಂದು ಸ್ವದೇಶದ ಕಡೆ ತೆರಳುವ ವಿಮಾನ ಹತ್ತಿದರು. ಹೊರಡುವ ಮೊದಲು ಕೊಹ್ಲಿ ಅಡಿಲೇಡ್​ ಟೆಸ್ಟ್​ನಲ್ಲಿ ಅವಮಾನಕರ ಸೋಲು ಅನುಭವಿದ ತಮ್ಮ ತಂಡದ ಇತರ ಸದಸ್ಯರೊಂದಿಗೆ ಕೆಲ ಸಲಹೆಗಳನ್ನು ಹಂಚಿಕೊಂಡರು.

ಟೀಮ್ ಇಂಡಿಯಾ ಮೂಲದ ಪ್ರಕಾರ 2014ರಿಂದ ನಾಯಕತ್ವದ ಹೊರೆ ಹೊತ್ತಿರುವ ಕೊಹ್ಲಿ ತಮ್ಮ ಜೊತೆ ಆಟಗಾರರಿಗೆ, ಮೊದಲ ಟೆಸ್ಟ್ ಸೋಲಿನಿಂದ ಧೃತಿಗೆಡದೆ, ಅದರ ಕಹಿಯನ್ನು ಮರೆತು ಹೋರಾಟದ ಮನೋಭಾವ ತೋರುತ್ತಾ ಸರಣಿಯಲ್ಲಿ ಮುಂದುವರಿಯುವಂತೆ ಹೇಳಿದರು. ಇದುವರೆಗೆ ಪ್ರದರ್ಶಿಸಿರುವ ನಿರ್ಭೀತಿಯ ಆಟವನ್ನು ಮುಂದಿನ ಪಂದ್ಯಗಳಲ್ಲಿ ಆಡುವಂತೆಯೂ ಕೊಹ್ಲಿ ಹೇಳಿದರೆನ್ನಲಾಗಿದೆ.

ಮೊದಲ ಟೆಸ್ಟ್ ಮೊದಲ ಇನ್ನಿಂಗ್ಸ್​ನಲ್ಲಿ ಅಧಿಕಾರಯುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ದುರದೃಷ್ಟಕರ ರೀತಿಯಲ್ಲಿ ರನೌಟ್​ ಆಗುವ ಮೊದಲು 74 ರನ್ ಬಾರಿಸಿದ್ದರು. ಅವರ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರಹಾನೆ ಟೀಮನ್ನು ಮುನ್ನಡೆಸಲಿದ್ದಾರೆ. ಎರಡು ರಾಷ್ಟ್ರಗಳ ನಡುವೆ ಎರಡನೆ ಟೆಸ್ಟ್ ಡಿಸೆಂಬರ್ 26ರಿಂದ ಮೆಲ್ಬರ್ನ್​ನಲ್ಲಿ ನಡೆಯಲಿದೆ.

ಅಜಿಂಕ್ಯಾ ರಹಾನೆ

ಭಾರತದ ಆಸ್ಟ್ರೇಲಿಯಾ ಪ್ರವಾಸ ಆರಂಭಗೊಳ್ಳುವ ಮೊದಲೇ ಕೊಹ್ಲಿ ಪಿತೃತ್ವದ ರಜೆ ತೆಗೆದುಕೊಳ್ಳಲು ಬಿಸಿಸಿಐನಿಂದ ಅನುಮತಿ ಪಡೆದಿದ್ದರು. ಅವರ ತಾರಾ ಪತ್ನಿ ಅನುಷ್ಕಾ ಶರ್ಮ ಜನೆವರಿಯಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ನ್ಯೂಜಿಲೆಂಡ್ ಟೀಮಿನ ನಾಯಕ ಕೇನ್ ವಿಲಿಯಮ್ಸನ್ ಸಹ ಮೊನ್ನೆಯಷ್ಟೇ ಪಿತೃತ್ವದ ರಜೆ ಪಡೆದು ಹೆರಿಗೆ ಸಮಯದಲ್ಲಿ ತಮ್ಮ ಪತ್ನಿ ಸಾರಾ ಅವರೊಂದಿಗಿರಲು, ವೆಸ್ಟ್ ಇಂಡೀಸ್ ವಿರುದ್ಧ ಜಾರಿಯಲ್ಲಿರುವ ಟೆಸ್ಟ್​ ಸರಣಿಯ ಎರಡನೆ ಪಂದ್ಯ ತಪ್ಪಿಸಿಕೊಂಡಿದ್ದನ್ನು ಇಲ್ಲಿ ನೆನೆಪಿಸಿಕೊಳ್ಳಬಹುದಾಗಿದೆ. ಡಿಸೆಂಬರ್ 15 ರಂದು ಸಾರಾ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದರು.

ಈಗಾಗಲೇ ಅಸ್ಟ್ರೇಲಿಯಾ ತಲುಪಿರುವ ರೋಹಿತ್ ಶರ್ಮ ಸಿಡ್ನಿಯಲ್ಲಿ ಎರಡು ವಾರಗಳ ಕಠಿಣ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಅವರು ಮೂರನೆ ಟೆಸ್ಟ್​ನಲ್ಲಿ ಆಡುವ ನಿರೀಕ್ಷೆಯಿದೆ. ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಸರಣಿಯಿಂದ ಹೊರಬಿದ್ದಿರುವುದು ರಹಾನೆಗೆ ದೊಡ್ಡ ಸಮಸ್ಯೆಯಾಗಲಿದೆ. ಮೆಲ್ಬರ್ನ್ ಟೆಸ್ಟ್​ನಲ್ಲಿ ಭಾರತ 5 ಬೌಲರ್​ಗಳೊಂದಿಗೆ ಮೈದಾಕ್ಕಿಳಿಯುವ ಯೋಚನೆ ಮಾಡುತ್ತಿದೆ.

Published On - 10:30 pm, Tue, 22 December 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ