AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಟಿ20 ಇನ್ನಿಂಗ್ಸ್ ಆರಂಭಿಸುವ ವಿರಾಟ್​ ಕೊಹ್ಲಿ ನಿರ್ಧಾರದಿಂದ ಆರ್​ಸಿಬಿಗೆ ಲಾಭ: ಮೈಕಲ್ ವಾನ್

ಭಾರತ ಕ್ರಿಕೆಟ್ ಟೀಮನ್ನು ಸತತವಾಗಿ ಫಾಲೋ ಮಾಡುತ್ತಾ ಬಂದಿರುವ ಇಂಗ್ಲೆಂಡ್ ಟೀಮಿನ ಮಾಜಿ ನಾಯಕ ಮೈಕೆಲ್ ವಾನ್ ಅವರು ಕೊಹ್ಲಿ‘ಯ ನಿರ್ಧಾರ ಸಮಯೋಚಿತವಾಗಿದ್ದು ಆರ್​ಸಿಬಿಗೆ ಬಹಳ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದ್ದಾರೆ.

India vs England: ಟಿ20 ಇನ್ನಿಂಗ್ಸ್ ಆರಂಭಿಸುವ ವಿರಾಟ್​ ಕೊಹ್ಲಿ ನಿರ್ಧಾರದಿಂದ ಆರ್​ಸಿಬಿಗೆ ಲಾಭ: ಮೈಕಲ್ ವಾನ್
ಮೈಕೆಲ್ ವಾನ್ ಮತ್ತು ವಿರಾಟ್​ ಕೊಹ್ಲಿ
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 22, 2021 | 10:01 PM

Share

ಇಂಗ್ಲೆಂಡ್ ವಿರುದ್ಧ ಅಡಿದ ಕೊನೆಯ ಪಂದ್ಯದಲ್ಲಿ ಸತತವಾಗಿ ವಿಫಲರಾದ ಕೆ.ಎಲ್.ರಾಹುಲ್ ಅವರನನ್ನು ಟೀಮಿನಿಂದ ಕೈಬಿಟ್ಟು ಇನ್ನಿಂಗ್ಸ್​ ಓಪನ್ ಮಾಡುವ ಅನಿರೀಕ್ಷಿತ ಮತ್ತು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಟೀಮ್ ಇಂಡಿಯಾದ ಸ್ಕಿಪ್ಪರ್ ವಿರಾಟ್​ ಕೊಹ್ಲಿ; ಜೊತೆಗಾರ ಮತ್ತು ಉಪನಾಯಕ ರೋಹಿತ್ ಶರ್ಮ ಅವರೊಂದಿಗೆ ಮೊದಲ ವಿಕೆಟ್​ಗೆ 94 ರನ್ ಸೇರಿಸಿ ಭಾರತಕ್ಕೆ ಅತ್ಯುತ್ತಮ ಆರಂಭ ಕೊಡಿಸಿದರು. ವೈಯಕ್ತಿಕವಾಗಿಯೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ 52 ಎಸೆತಗಳಲ್ಲಿ ಅಜೇಯ 80 ರನ್ ಬಾರಿಸಿದರು. ಭಾರತ 224/2 ರನ್​ಗಳ ಭಾರಿ ಮೊತ್ತ ಗಳಿಸಲು ಕೊಹ್ಲಿಯ ಕಾಣಿಕೆ ಬಹಳ ಮಹತ್ವಪೂರ್ಣವೆನಿಸಿತು.

ಪಂದ್ಯದ ನಂತರ ಮಾತಾಡಿದ ಕೊಹ್ಲಿ ಮುಂಬರುವ ದಿನಗಳಲ್ಲೂ ಟಿ20 ಕ್ರಿಕೆಟ್​ನಲ್ಲಿ ಅವರ ಓಪನರ್​ ಅಗಿ ಆಡುವುದನ್ನು ಮುಂದುವರಿಸುವುದಾಗಿ ಹೇಳಿದರು. ಮುಂದಿನ ತಿಂಗಳು ಆರಂಭವಾಗಲಿರುವ ಇಂಡಿಯನ್ ಪ್ರಿಮೀಯರ್​ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವು ತಾನೇ ಆರಂಭ ಆಟಗಾರನಾಗಿ ಆಡುವುದನ್ನು ಅವರು ಖಚಿತಪಡಿಸಿದರು.

ಭಾರತ ಕ್ರಿಕೆಟ್ ಟೀಮನ್ನು ಸತತವಾಗಿ ಫಾಲೋ ಮಾಡುತ್ತಾ ಬಂದಿರುವ ಇಂಗ್ಲೆಂಡ್ ಟೀಮಿನ ಮಾಜಿ ನಾಯಕ ಮೈಕೆಲ್ ವಾನ್ ಅವರು ಕೊಹ್ಲಿ‘ಯ ನಿರ್ಧಾರ ಸಮಯೋಚಿತವಾಗಿದ್ದು ಆರ್​ಸಿಬಿಗೆ ಬಹಳ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದ್ದಾರೆ. ‘ವಿರಾಟ್ ಕೊಹ್ಲಿ ಯಾವುದೇ ಕ್ರಮಾಂಕದಲ್ಲಿ ಆಡಬಲ್ಲರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಅಂಶವೊಂದು ಲಭ್ಯವಾಗಿದೆ. ಕೊಹ್ಲಿ ಮೇಲಿನ ಕ್ರಮಾಂಕದಲ್ಲಿ ಆಡಿದರೆ, ಆರ್​ಸಿಬಿ ತಂಡ ಸಾಕಷ್ಟು ಬಲಿಷ್ಠವೆನಿಸಲಿದೆ’ ಎಂದು ಕ್ರಿಕೆಟ್ ವೆಬ್​ಸೈಟೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ವಾನ್ ಹೇಳಿದ್ದಾರೆ.

‘ಭಾರತದ ವಿಕೆಟ್​ಗಳ ಮೇಲೆ ಅವರು ನಿಸ್ಸಂದೇಹವಾಗಿ ಉತ್ತಮ ಪ್ರದರ್ಶನಗಳನ್ನು ನೀಡಲಿದ್ದಾರೆ. ಭಾರತದಲ್ಲಿ ಆಡುವಾಗ ನೀವು ಯಾವ ಸ್ಥಾನದಲ್ಲಿ ಅಡಲು ಬಯಸುತ್ತೀರಿ ಎಂದು ಯಾವುದೇ ಬ್ಯಾಟ್ಸ್​ಮನ್​ನನ್ನು ಕೇಳಿದರೆ ಅವನು, ಓಪನರ್ ಆಗಿ ಆಡಲು ಬಯಸುತ್ತೇನೆ ಎಂದು ಹೇಳುತ್ತಾನೆ. ಕಿರು ಆವೃತ್ತಿಯಲ್ಲಿ ಕೊಹ್ಲಿ ಇನ್ನಿಂಗ್ಸ್ ಆರಂಭಿಸಲು ನಿರ್ಧಸಿರುವುದರಿಂದ ಮುಂದಿನ ಕೆಲವು ತಿಂಗಳುಗಳ ಕಾಲ ಅವರು ಆ ಜವಾಬ್ದಾರಿಯನ್ನು ಬಹಳ ಎಂಜಾಯ್ ಮಾಡಲಿದ್ದಾರೆ,’ ಎಂದು ವಾನ್ ಹೇಳಿದ್ದಾರೆ.

‘ಅವರ ಬ್ಯಾಟ್​ ನಿಶ್ಚಿತವಾಗಿಯೂ ಚಮತ್ಕಾರಗಳನ್ನು ಮಾಡಲಿದೆ. ಕ್ರಿಕೆಟ್​ ಪ್ರೇಮಿಗಳಿಗೆ, ನಮಗೆ ರಸದೌತಣ ಕಾಯುತ್ತಿದೆ,’ ಎಂದು ವಾನ್ ಹೇಳಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ 3 ಒಂದು ದಿನದ ಪಂದ್ಯಗಳ ಸರಣಿ ನಾಳೆಯಿಂದ (ಮಂಗಳವಾರ) ಪುಣೆಯಲ್ಲಿ ಆರಂಭವಾಗಲಿದೆ. ಸರಣಿಯ ಎಲ್ಲ ಮೂರು ಗೇಮ್​ಗಳು ಪುಣೆಯಲ್ಲೇ ನಡೆಯಲಿವೆ.

ಇದನ್ನೂ ಓದಿ: India vs England: ಬೆಂಚ್​ ಕಾಯುವುದರಿಂದ ರಾಹುಲ್ ಫಾರ್ಮ್​ಗೆ ಮರಳುವುದಿಲ್ಲ.. ಕನ್ನಡಿಗನ ಪರ ಬ್ಯಾಟ್​ ಬೀಸಿದ ಗಂಭೀರ್​!

Published On - 9:49 pm, Mon, 22 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ