AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs SRH: ಆತ್ಮ ವಿಶ್ವಾಸ ಹೆಚ್ಚಾಗಿದೆ! ಸಂದರ್ಶನಕಾರನ ಎಲ್ಲಾ ಪ್ರಶ್ನೆಗಳಿಗೆ ಕನ್ನಡದಲ್ಲೇ ಉತ್ತರಿಸಿದ ಪ್ರಸಿದ್ಧ್ ಕೃಷ್ಣ.. ವಿಡಿಯೋ ನೋಡಿ

ಆತ್ಮ ವಿಶ್ವಾಸ ಹೆಚ್ಚಾಗಿದೆ. ಅಲ್ಲದೆ ನನ್ನಲ್ಲಿ ಯಾವ ರೀತಿಯ ಬದಲಾವಣೆಯಾಗಿದೆ ಎಂಬುದನ್ನು ನೀವು ಹೇಳಬೇಕು. ಹಾಗಾಗಿ ಅದನ್ನ ನಿಮಗೆ ಬಿಟ್ಟಿದ್ದೀನಿ.

KKR vs SRH: ಆತ್ಮ ವಿಶ್ವಾಸ ಹೆಚ್ಚಾಗಿದೆ! ಸಂದರ್ಶನಕಾರನ ಎಲ್ಲಾ ಪ್ರಶ್ನೆಗಳಿಗೆ ಕನ್ನಡದಲ್ಲೇ ಉತ್ತರಿಸಿದ ಪ್ರಸಿದ್ಧ್ ಕೃಷ್ಣ.. ವಿಡಿಯೋ ನೋಡಿ
ಪ್ರಸಿದ್ಧ್ ಕೃಷ್ಣ
Follow us
ಪೃಥ್ವಿಶಂಕರ
|

Updated on: Apr 11, 2021 | 10:48 PM

ಕೋಲ್ಕತಾ ನೈಟ್ ರೈಡರ್ಸ್ ತಂಡವು ಯುವ ಭಾರತದ ವೇಗದ ಬೌಲರ್‌ಗಳನ್ನು ಹೊಂದಿದ್ದು, ಅಂತಹ ಒಬ್ಬ ಯುವ ಬೌಲರ್​ಗಳಲ್ಲಿ ಪ್ರಸಿದ್ಧ್ ಕೃಷ್ಣ ಕೂಡ ಒಬ್ಬರು. ಪ್ರಸಿದ್ಧ್ ಕೃಷ್ಣ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಏಕದಿನ ಚೊಚ್ಚಲ ಪಂದ್ಯವನ್ನಾಡಿದರು ಮತ್ತು ಅವರ ಮೊದಲ ಪಂದ್ಯದಲ್ಲಿಯೇ ಅವರು ಎಷ್ಟು ಪ್ರಭಾವಶಾಲಿ ಬೌಲರ್​ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿರುವ ಪ್ರಸಿದ್ದ್ ತಮ್ಮ ಮೊದಲ ಓವರ್​ನ 3ನೇ ಎಸೆತದಲ್ಲೇ ಅಪಾಯಕಾರಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದು ಮಿಂಚಿದ್ದಾರೆ. ಇದರೆ ಸುದ್ದಿ ಇರುವುದು ಈ ಬಗ್ಗೆ ಅಲ್ಲ. ಪಂದ್ಯ ಆರಂಭಕ್ಕೂ ಮುನ್ನ ಸಂದರ್ಶನದಲ್ಲಿ, ಸಂದರ್ಶನಕಾರ ಕೇಳಿದ ಅಷ್ಟೂ ಪ್ರಶ್ನೆಗಳಿಗೂ ಕೃಷ್ಣ ಕನ್ನಡದಲ್ಲಿಯೇ ಉತ್ತರಿಸಿರುವುದು.

ಸಂದರ್ಶನಕಾರ: ಟೀಂ ಇಂಡಿಯಾದಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ನೀವು ಬೌಲರ್​ ಆಗಿ ಏನನ್ನು ಬದಲಾಯಿಸಿಕೊಂಡಿದ್ದೀರಾ?

ಪ್ರಸಿದ್ಧ್ ಕೃಷ್ಣ: ನನ್ನ ಪ್ರದರ್ಶನ ಹಾಗೆಯೇ ಇದೆ. ಆ ರೀತಿಯ ಉತ್ತಮ ಪ್ರದರ್ಶನ ನೀಡಿದಕ್ಕೆ ನನಗೆ ತುಂಬಾ ಖುಷಿಯಾಗಿದೆ. ಅದೇ ರೀತಿಯ ಪ್ರದರ್ಶನವನ್ನು ಇಲ್ಲಿಯೂ ನೀಡಬೇಕು ಎಂದುಕೊಂಡಿದ್ದೇನೆ.

ಸಂದರ್ಶನಕಾರ: ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ಮೋರ್ಗಾನ್​ ಆ ತಂಡದ ನಾಯಕರಾಗಿದ್ದರು. ಅಲ್ಲಿ ನೀವು ಉತ್ತಮ ಪ್ರದರ್ಶನ ನೀಡಿದ್ರಿ. ಆ ಸರಣಿ ಮುಗಿದ ಬಳಿಕ ಮೋರ್ಗಾನ್​ ಜೊತೆ ಮಾತುಕತೆ ಮುಂದುವರೆಸಿದ್ದೀರಾ?

ಪ್ರಸಿದ್ಧ್ ಕೃಷ್ಣ: ನಾವಿಬ್ಬರು ಒಬ್ಬರಿಗೊಬ್ಬರು ಚೆನ್ನಾಗಿ ತಿಳಿದಿರುವುದರಿಂದ ಅಲ್ಲಿಯೂ ಸಹ ಸಂಭಾಷಣೆಯಲ್ಲಿ ತೊಡಗುತ್ತಿದ್ದೇವು. ಹಾಗೆಯೇ ಇಲ್ಲಿಯೂ ಸಹ ನಮ್ಮಿಬ್ಬರ ನಡುವೆ ಒಳ್ಳೆಯ ಸಂಭಾಷಣೆ ನಡೆಯುತ್ತಿರುತ್ತದೆ.

ಸಂದರ್ಶನಕಾರ: ಕೊನೆಯ ಐಪಿಎಲ್​ಗೆ ಹೋಲಿಸಿದರೆ ನೀವು ಒಬ್ಬ ಬೌಲರ್​ ಆಗಿ ಕೌಶಲ್ಯದ ವಿಚಾರದಲ್ಲಿ, ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮಲ್ಲಿ ಯಾವ ರೀತಿಯ ಬದಲಾವಣೆ ಆಗಿದೆ?

ಪ್ರಸಿದ್ಧ್ ಕೃಷ್ಣ: ಆತ್ಮ ವಿಶ್ವಾಸ ಹೆಚ್ಚಾಗಿದೆ. ಅಲ್ಲದೆ ನನ್ನಲ್ಲಿ ಯಾವ ರೀತಿಯ ಬದಲಾವಣೆಯಾಗಿದೆ ಎಂಬುದನ್ನು ನೀವು ಹೇಳಬೇಕು. ಹಾಗಾಗಿ ಅದನ್ನ ನಿಮಗೆ ಬಿಟ್ಟಿದ್ದೀನಿ.

ಸಂದರ್ಶನಕಾರ: ಈ ಐಪಿಎಲ್​ನ ಕೊನೆಯ 5 ಪಂದ್ಯಗಳನ್ನು ಕೋಲ್ಕತ್ತಾ ತಂಡ ಬೆಂಗಳೂರಿನಲ್ಲಿ ಆಡಲಿದೆ. ಹೀಗಾಗಿ ನೀವು 100 ಪ್ರತಿಶತ ಪ್ರದರ್ಶನ ನೀಡ್ತಿರ?

ಪ್ರಸಿದ್ಧ್ ಕೃಷ್ಣ: ಖಂಡಿತವಾಗಿಯೂ. ಏಕೆಂದರೆ ನಾನು ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಿಂದ ಪಂದ್ಯಗಳನ್ನಾಡುತ್ತಾ ಬಂದಿದ್ದೇನೆ. ಹಾಗಾಗಿ ಕೊನೆಯ 5 ಪಂದ್ಯಗಳನ್ನು ಅಲ್ಲಿ ಆಡುತ್ತಿರುವುದು ನನಗೆ ತುಂಬಾ ಸಹಕಾರಿಯಾಗಲಿದೆ. ಹೀಗಾಗಿ ಒಳ್ಳೆಯ ಪ್ರದರ್ಶನ ನೀಡಲು ಬಯಸುತ್ತೇನೆ.

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು