AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs SRH: ಆತ್ಮ ವಿಶ್ವಾಸ ಹೆಚ್ಚಾಗಿದೆ! ಸಂದರ್ಶನಕಾರನ ಎಲ್ಲಾ ಪ್ರಶ್ನೆಗಳಿಗೆ ಕನ್ನಡದಲ್ಲೇ ಉತ್ತರಿಸಿದ ಪ್ರಸಿದ್ಧ್ ಕೃಷ್ಣ.. ವಿಡಿಯೋ ನೋಡಿ

ಆತ್ಮ ವಿಶ್ವಾಸ ಹೆಚ್ಚಾಗಿದೆ. ಅಲ್ಲದೆ ನನ್ನಲ್ಲಿ ಯಾವ ರೀತಿಯ ಬದಲಾವಣೆಯಾಗಿದೆ ಎಂಬುದನ್ನು ನೀವು ಹೇಳಬೇಕು. ಹಾಗಾಗಿ ಅದನ್ನ ನಿಮಗೆ ಬಿಟ್ಟಿದ್ದೀನಿ.

KKR vs SRH: ಆತ್ಮ ವಿಶ್ವಾಸ ಹೆಚ್ಚಾಗಿದೆ! ಸಂದರ್ಶನಕಾರನ ಎಲ್ಲಾ ಪ್ರಶ್ನೆಗಳಿಗೆ ಕನ್ನಡದಲ್ಲೇ ಉತ್ತರಿಸಿದ ಪ್ರಸಿದ್ಧ್ ಕೃಷ್ಣ.. ವಿಡಿಯೋ ನೋಡಿ
ಪ್ರಸಿದ್ಧ್ ಕೃಷ್ಣ
ಪೃಥ್ವಿಶಂಕರ
|

Updated on: Apr 11, 2021 | 10:48 PM

Share

ಕೋಲ್ಕತಾ ನೈಟ್ ರೈಡರ್ಸ್ ತಂಡವು ಯುವ ಭಾರತದ ವೇಗದ ಬೌಲರ್‌ಗಳನ್ನು ಹೊಂದಿದ್ದು, ಅಂತಹ ಒಬ್ಬ ಯುವ ಬೌಲರ್​ಗಳಲ್ಲಿ ಪ್ರಸಿದ್ಧ್ ಕೃಷ್ಣ ಕೂಡ ಒಬ್ಬರು. ಪ್ರಸಿದ್ಧ್ ಕೃಷ್ಣ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಏಕದಿನ ಚೊಚ್ಚಲ ಪಂದ್ಯವನ್ನಾಡಿದರು ಮತ್ತು ಅವರ ಮೊದಲ ಪಂದ್ಯದಲ್ಲಿಯೇ ಅವರು ಎಷ್ಟು ಪ್ರಭಾವಶಾಲಿ ಬೌಲರ್​ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿರುವ ಪ್ರಸಿದ್ದ್ ತಮ್ಮ ಮೊದಲ ಓವರ್​ನ 3ನೇ ಎಸೆತದಲ್ಲೇ ಅಪಾಯಕಾರಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದು ಮಿಂಚಿದ್ದಾರೆ. ಇದರೆ ಸುದ್ದಿ ಇರುವುದು ಈ ಬಗ್ಗೆ ಅಲ್ಲ. ಪಂದ್ಯ ಆರಂಭಕ್ಕೂ ಮುನ್ನ ಸಂದರ್ಶನದಲ್ಲಿ, ಸಂದರ್ಶನಕಾರ ಕೇಳಿದ ಅಷ್ಟೂ ಪ್ರಶ್ನೆಗಳಿಗೂ ಕೃಷ್ಣ ಕನ್ನಡದಲ್ಲಿಯೇ ಉತ್ತರಿಸಿರುವುದು.

ಸಂದರ್ಶನಕಾರ: ಟೀಂ ಇಂಡಿಯಾದಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ನೀವು ಬೌಲರ್​ ಆಗಿ ಏನನ್ನು ಬದಲಾಯಿಸಿಕೊಂಡಿದ್ದೀರಾ?

ಪ್ರಸಿದ್ಧ್ ಕೃಷ್ಣ: ನನ್ನ ಪ್ರದರ್ಶನ ಹಾಗೆಯೇ ಇದೆ. ಆ ರೀತಿಯ ಉತ್ತಮ ಪ್ರದರ್ಶನ ನೀಡಿದಕ್ಕೆ ನನಗೆ ತುಂಬಾ ಖುಷಿಯಾಗಿದೆ. ಅದೇ ರೀತಿಯ ಪ್ರದರ್ಶನವನ್ನು ಇಲ್ಲಿಯೂ ನೀಡಬೇಕು ಎಂದುಕೊಂಡಿದ್ದೇನೆ.

ಸಂದರ್ಶನಕಾರ: ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ಮೋರ್ಗಾನ್​ ಆ ತಂಡದ ನಾಯಕರಾಗಿದ್ದರು. ಅಲ್ಲಿ ನೀವು ಉತ್ತಮ ಪ್ರದರ್ಶನ ನೀಡಿದ್ರಿ. ಆ ಸರಣಿ ಮುಗಿದ ಬಳಿಕ ಮೋರ್ಗಾನ್​ ಜೊತೆ ಮಾತುಕತೆ ಮುಂದುವರೆಸಿದ್ದೀರಾ?

ಪ್ರಸಿದ್ಧ್ ಕೃಷ್ಣ: ನಾವಿಬ್ಬರು ಒಬ್ಬರಿಗೊಬ್ಬರು ಚೆನ್ನಾಗಿ ತಿಳಿದಿರುವುದರಿಂದ ಅಲ್ಲಿಯೂ ಸಹ ಸಂಭಾಷಣೆಯಲ್ಲಿ ತೊಡಗುತ್ತಿದ್ದೇವು. ಹಾಗೆಯೇ ಇಲ್ಲಿಯೂ ಸಹ ನಮ್ಮಿಬ್ಬರ ನಡುವೆ ಒಳ್ಳೆಯ ಸಂಭಾಷಣೆ ನಡೆಯುತ್ತಿರುತ್ತದೆ.

ಸಂದರ್ಶನಕಾರ: ಕೊನೆಯ ಐಪಿಎಲ್​ಗೆ ಹೋಲಿಸಿದರೆ ನೀವು ಒಬ್ಬ ಬೌಲರ್​ ಆಗಿ ಕೌಶಲ್ಯದ ವಿಚಾರದಲ್ಲಿ, ಮಾನಸಿಕವಾಗಿ ಹಾಗೂ ದೈಹಿಕವಾಗಿ ನಿಮ್ಮಲ್ಲಿ ಯಾವ ರೀತಿಯ ಬದಲಾವಣೆ ಆಗಿದೆ?

ಪ್ರಸಿದ್ಧ್ ಕೃಷ್ಣ: ಆತ್ಮ ವಿಶ್ವಾಸ ಹೆಚ್ಚಾಗಿದೆ. ಅಲ್ಲದೆ ನನ್ನಲ್ಲಿ ಯಾವ ರೀತಿಯ ಬದಲಾವಣೆಯಾಗಿದೆ ಎಂಬುದನ್ನು ನೀವು ಹೇಳಬೇಕು. ಹಾಗಾಗಿ ಅದನ್ನ ನಿಮಗೆ ಬಿಟ್ಟಿದ್ದೀನಿ.

ಸಂದರ್ಶನಕಾರ: ಈ ಐಪಿಎಲ್​ನ ಕೊನೆಯ 5 ಪಂದ್ಯಗಳನ್ನು ಕೋಲ್ಕತ್ತಾ ತಂಡ ಬೆಂಗಳೂರಿನಲ್ಲಿ ಆಡಲಿದೆ. ಹೀಗಾಗಿ ನೀವು 100 ಪ್ರತಿಶತ ಪ್ರದರ್ಶನ ನೀಡ್ತಿರ?

ಪ್ರಸಿದ್ಧ್ ಕೃಷ್ಣ: ಖಂಡಿತವಾಗಿಯೂ. ಏಕೆಂದರೆ ನಾನು ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಿಂದ ಪಂದ್ಯಗಳನ್ನಾಡುತ್ತಾ ಬಂದಿದ್ದೇನೆ. ಹಾಗಾಗಿ ಕೊನೆಯ 5 ಪಂದ್ಯಗಳನ್ನು ಅಲ್ಲಿ ಆಡುತ್ತಿರುವುದು ನನಗೆ ತುಂಬಾ ಸಹಕಾರಿಯಾಗಲಿದೆ. ಹೀಗಾಗಿ ಒಳ್ಳೆಯ ಪ್ರದರ್ಶನ ನೀಡಲು ಬಯಸುತ್ತೇನೆ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ