KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು […]

KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ
ಸಾಧು ಶ್ರೀನಾಥ್​

Updated on: Dec 04, 2019 | 10:34 AM

ಬೆಂಗಳೂರು: ಕೆಪಿಎಲ್ ಕ್ರಿಕೆಟ್​ ಬೆಟ್ಟಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ ರಿಂಗ್ ಮಾಸ್ಟರ್ ಸುಧೀಂದ್ರ ಶಿಂಧೆನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದಿರಾ ನಗರದಲ್ಲಿರುವ ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಶಿಂಧೆ, ಹಾಲಿ ಕೆಎಸ್​ಸಿಎ ಆಡಳಿತ ಮಂಡಳಿ ಸದಸ್ಯ ಹಾಗೂ ಅಂಡರ್ 19 ತಂಡದ ಕೋಚ್ ಮತ್ತು ಬೆಳಗಾವಿ ಪ್ಯಾಂಥರ್ಸ್​ ಕೋಚ್ ಸಹ ಆಗಿದ್ದರು. ಕೆಪಿಎಲ್ ಟೂರ್ನಿಗೆ ಆಟಗಾರರ ಆಯ್ಕೆಯಲ್ಲೂ ಹಣ ಪಡೆದಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಹಣ ನೀಡಿದವರನ್ನ ಮಾತ್ರ ಆಯ್ಕೆ ಮಾಡ್ತಿದ್ದ:
ಆಟಗಾರರು ಗ್ರೌಂಡ್​ಗೆ ಇಳಿಯಬೇಕೆಂದ್ರೆ ಶಿಂಧೆಗೆ ಹಣ ನೀಡಬೇಕಿತ್ತು. ಹಣ ನೀಡಿದವರನ್ನಷ್ಟೇ ಸುಧೀಂದ್ರ ಶಿಂಧೆ ಆಯ್ಕೆ ಮಾಡ್ತಿದ್ದ. ಕೆಎಸ್​ಸಿಎ ಮಾನ್ಯತೆ ಪಡೆದ ಕ್ಲಬ್​ಗಳ ಮಾರಾಟದಲ್ಲಿ ದೊಡ್ಡ ದಂಧೆ ಇದೆ ಎನ್ನಲಾಗಿದೆ. ಬೇರೆ ಬೇರೆ ತಂಡದ ಆಟಗಾರರನ್ನ ಸಂಪರ್ಕ ಮಾಡಿ ಮ್ಯಾಚ್ ಫಿಕ್ಸಿಂಗ್ ಮಾಡ್ತಿದ್ದ. ಆಟಗಾರರಿಗೆ ದುಡ್ಡು, ಪಾರ್ಟಿ, ಸ್ಟೇಯಿಂಗ್ ಸೇರಿದಂತೆ ಸಕಲ ವ್ಯವಸ್ಥೆ ಮಾಡ್ತಿದ್ದ ಎಂಬ ಆರೋಪಗಳು ಕೇಳಿಬಂದಿವೆ.

Published On - 3:14 pm, Mon, 2 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us