ಮೆಸ್ಸಿ ನೋಡಲು ಬಂದ ಅಭಿಮಾನಿಗಳಿಂದ ಕೊಲ್ಕತ್ತಾ ಸ್ಟೇಡಿಯಂನಲ್ಲಿ ದಾಂಧಲೆ
ಅರ್ಜೆಂಟೀನಾ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ ಇಂದು ಮೆಸ್ಸಿ ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂ ಹೊರಗೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆ ಬಳಿಕ ಸ್ ನಡೆದ ಕಾರ್ಯಕ್ರಮದಲ್ಲಿ ಲಿಯೋನೆಲ್ ಮೆಸ್ಸಿ ಕಾಣಿಸಿಕೊಂಡಿದ್ದರು. ಆದರೆ ಕೇವಲ 10 ನಿಮಿಷಗಳಲ್ಲೇ ಅರ್ಜೆಂಟೀನಾ ಫುಟ್ಬಾಲ್ ತಾರೆ ಮೈದಾನದಿಂದ ತೆರಳಿದ್ದಾರೆ.
ಅರ್ಜೆಂಟೀನಾ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗೋಟ್ ಇಂಡಿಯಾ ಟೂರ್ನ ಕಾರ್ಯಕ್ರಮದ ಭಾಗವಾಗಿ ಇಂದು ಮೆಸ್ಸಿ ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂ ಹೊರಗೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆ ಬಳಿಕ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಯೋನೆಲ್ ಮೆಸ್ಸಿ ಕಾಣಿಸಿಕೊಂಡಿದ್ದರು. ಆದರೆ ಕೇವಲ 10 ನಿಮಿಷಗಳಲ್ಲೇ ಅರ್ಜೆಂಟೀನಾ ಫುಟ್ಬಾಲ್ ತಾರೆ ಮೈದಾನದಿಂದ ತೆರಳಿದ್ದಾರೆ.
ಇತ್ತ ಟಿಕೆಟ್ ಖರೀದಿಸಿ ಮೆಸ್ಸಿಯನ್ನು ವೀಕ್ಷಿಸಲು ಸ್ಟೇಡಿಯಂನಲ್ಲಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದರಿಂದ ನಿರಾಸೆಯಾಗಿದ್ದು, ಕಾರ್ಯಕ್ರಮ ಆಯೋಜಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಮೆಸ್ಸಿ ಫ್ಯಾನ್ಸ್ ಕ್ರೀಡಾಂಗಣದೊಳಗೆ ಬಾಟಲಿಗಳನ್ನು ಎಸೆಯಲಾರಂಭಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಬ್ಯಾರಿಕೇಡ್ಗಳನ್ನು ಮುರಿದು ಹುಚ್ಚಾಟ ಮೆರೆದಿದ್ದಾರೆ.
ಅಷ್ಟೇ ಅಲ್ಲದೆ ಮೈದಾನಕ್ಕೆ ನುಗಿದ್ದ ಅಭಿಮಾನಿಗಳು ದಾಂಧಲೆ ನಡೆಸಿದ್ದಾರೆ. ಇತ್ತ ಅಭಿಮಾನಿಗಳ ಹುಚ್ಚಾಟ ಮುಗಿಲು ಮುಟ್ಟುತ್ತಿದ್ದಂತೆ ಕೊಲ್ಕತ್ತಾ ಪೊಲೀಸರು ಲಾಠಿ ಚಾರ್ಜ್ ನಡೆಸಲಾರಂಭಿಸಿದ್ದಾರೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಆ ಬಳಿಕ ಸ್ಟೇಡಿಯಂನಲ್ಲಿದ್ದ ಎಲ್ಲರನ್ನು ಹೊರಗೆ ಕಳುಹಿಸಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್

