AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ

ಫುಟ್ಬಾಲ್​ ಜಗತ್ತಿನ ಅನಭಿಶಕ್ತ ದೊರೆ ಲಿಯೋನೆಲ್ ಮೆಸ್ಸಿ ಮಂಗಳವಾರ ಬಾರ್ಸಿಲೋನಾ ಪರ ತನ್ನ 644 ನೇ ಗೋಲು ಗಳಿಸುವ ಮೂಲಕ ಪೀಲೆ ಅವರ ಸಾರ್ವಕಾಲಿಕ ಗೋಲುಗಳ ಮೈಲಿಗಲ್ಲನ್ನು ಮುರಿದಿದ್ದಾರೆ. ಈ ಮೂಲಕ ಫುಟ್ಬಾಲ್ ಆಟದಲ್ಲಿ ತಾನೊಬ್ಬ ಚತುರ ಆಟಗಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ
ಲಿಯೋನೆಲ್ ಮೆಸ್ಸಿ
ಪೃಥ್ವಿಶಂಕರ
|

Updated on:Dec 23, 2020 | 12:52 PM

Share

ಫುಟ್ಬಾಲ್​ ಜಗತ್ತಿನ ಅನಭಿಶಕ್ತ ದೊರೆ ಲಿಯೋನೆಲ್ ಮೆಸ್ಸಿ ಮಂಗಳವಾರ ಬಾರ್ಸಿಲೋನಾ ಪರ ತನ್ನ 644 ನೇ ಗೋಲು ಗಳಿಸುವ ಮೂಲಕ ಪೀಲೆ ಅವರ ಸಾರ್ವಕಾಲಿಕ ಗೋಲುಗಳ ಮೈಲಿಗಲ್ಲನ್ನು ಮುರಿದಿದ್ದಾರೆ. ಈ ಮೂಲಕ ಫುಟ್ಬಾಲ್ ಆಟದಲ್ಲಿ ತಾನೊಬ್ಬ ಚತುರ ಆಟಗಾರ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ವಲ್ಲಾಡೋಲಿಡ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಬಾರ್ಸಿಲೋನಾವನ್ನು 3-0 ಗೋಲುಗಳಿಂದ ಗೆಲ್ಲಲು ಸಹಾಯ ಮಾಡಿದ ಮೆಸ್ಸಿ, ಶನಿವಾರ ಪೀಲೆ ಅವರು ಗಳಿಸಿದ್ದ ಸಾರ್ವಕಾಲಿಕ ದಾಖಲೆಯ ಗೋಲುಗಳನ್ನು ಸರಿಗಟ್ಟಿದ್ದರು. 1957-74ರವರೆಗೆ ಸ್ಯಾಂಟೋಸ್‌ ತಂಡಕ್ಕಾಗಿ ಪೀಲೆ ಅವರು 643 ಗೋಲುಗಳನ್ನು ಬಾರಿಸಿದ್ದರು. 2004 ರಂದು ಫುಟ್ಬಾಲ್​ ಜಗತ್ತಿಗೆ ಕಾಲಿರಿಸಿದ ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಪರ ಆಡಿದ ಮೊದಲ ಪಂದ್ಯದಿಂದ ಈ ವರೆಗೂ ತಮ್ಮ ವೃತ್ತಿಜೀವನದಲ್ಲಿ 644 ಗೋಲು ಗಳಿಸಿದ್ದಾರೆ.

ಟ್ವಿಟರ್​​ನಲ್ಲಿ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ.. ಈ ಸಂತಸದ ವಿಚಾರವನ್ನು ಟ್ವಿಟರ್​​ನಲ್ಲಿ ಬರೆದುಕೊಂಡಿರುವ ಮೆಸ್ಸಿ ನಾನು ಆಟವಾಡಲು ಪ್ರಾರಂಭಿಸಿದಾಗ ನಾನು ಈ ದಾಖಲೆಯನ್ನು ಮುರಿಯುತ್ತೇನೆ ಎಂದು ಎಂದಿಗೂ ಯೋಚಿಸಿರಲಿಲ್ಲ. ನನ್ನ ಸಾಧನೆಯ ಹಾದಿಯಲ್ಲಿ ನನಗೆ ಸಹಾಯ ಮಾಡಿದ ನನ್ನ ತಂಡದ ಸದಸ್ಯರು, ನನ್ನ ಕುಟುಂಬ, ನನ್ನ ಸ್ನೇಹಿತರು ಮತ್ತು ಪ್ರತಿದಿನ ನನ್ನನ್ನು ಬೆಂಬಲಿಸುವ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ಸಾಕರ್ ಫೀಲ್ಡಿಗೆ ಗುಡ್​ಬೈ ಹೇಳಿದ ಫುಟ್ಬಾಲ್ ಮಾಂತ್ರಿಕ ಡೀಗೊ ಮರಡೊನ!

Published On - 12:14 pm, Wed, 23 December 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?