AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಪಿಂಗ್ ಪ್ರಕರಣ: ಪೃಥ್ವಿ ಶಾ ನಂತರ ನಾಲ್ಕು ವರ್ಷ ಕ್ರಿಕೆಟ್​ನಿಂದ ನಿಷೇಧಕ್ಕೊಳಗಾದ ಭಾರತದ ಮೊದಲ ಮಹಿಳಾ ಕ್ರಿಕೆಟಿರ್!

ಹೊಸ ಪ್ರಕರಣದಲ್ಲಿ ಮಧ್ಯಪ್ರದೇಶ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ಅನ್ಶುಲಾ ರಾವ್ ಡೋಪಿಂಗ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ.

ಡೋಪಿಂಗ್ ಪ್ರಕರಣ: ಪೃಥ್ವಿ ಶಾ ನಂತರ ನಾಲ್ಕು ವರ್ಷ ಕ್ರಿಕೆಟ್​ನಿಂದ ನಿಷೇಧಕ್ಕೊಳಗಾದ ಭಾರತದ ಮೊದಲ ಮಹಿಳಾ ಕ್ರಿಕೆಟಿರ್!
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Jun 28, 2021 | 4:11 PM

Share

ಡೋಪಿಂಗ್ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ತಪ್ಪಿತಸ್ಥರೆಂದು ಸಾಭೀತಾದ ಬಳಿಕ ಸುಮಾರು ಎಂಟು ತಿಂಗಳ ಕಾಲ ಅವರನ್ನು ಕ್ರಿಕೆಟ್​ನಿಂದ ನಿಷೇಧಿಸಲಾಯಿತು. ನಿಷೇಧದಿಂದ ಹಿಂತಿರುಗಿದ ಶಾ ಮತ್ತೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ನಂತರ ವಿಜಯ್ ಹಜಾರೆ ಟ್ರೋಫಿಯಲ್ಲೂ ಛಾಪು ಮೂಡಿಸಿದರು. ಬಳಿಕ ಶಾ ಅವರು ಕೆಮ್ಮಿಗೆ ಸಂಬಂಧಿಸಿದ ಔಷಧಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ನಿಷೇಧಿತ ವಸ್ತುವನ್ನು ಸೇವಿಸಿದ್ದಾರೆ ಎಂದು ಹೇಳಿದರು. ಆದರೆ, ಈಗ ಮತ್ತೊಮ್ಮೆ ಡೋಪಿಂಗ್‌ನ ನೆರಳು ಕ್ರಿಕೆಟ್‌ನಲ್ಲಿ ಸುಳಿದಾಡಲಾರಂಭಿಸಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ವಿರೋಧಿ ಡೋಪಿಂಗ್ ಏಜೆನ್ಸಿ (ನಾಡಾ) ಕಠಿಣ ಕ್ರಮ ಕೈಗೊಂಡಿದೆ.

ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ ಹೊಸ ಪ್ರಕರಣದಲ್ಲಿ ಮಧ್ಯಪ್ರದೇಶ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ಅನ್ಶುಲಾ ರಾವ್ ಡೋಪಿಂಗ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ. ಡೋಪಿಂಗ್ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ನಿಷೇಧ ಹೇರಿದ ಮೊದಲ ಮಹಿಳಾ ಕ್ರಿಕೆಟಿರ್ ಅನ್ಶುಲಾ ರಾವ್. ಅನ್ಶುಲಾ ಮಧ್ಯಪ್ರದೇಶದ ಪರವಾಗಿ ಕ್ರಿಕೆಟ್ ಆಡುತ್ತಾರೆ. ಬಿಸಿಸಿಐ ಆಯೋಜಿಸಿದ್ದ ಅಂಡರ್ -23 ಟಿ 20 ಪಂದ್ಯಾವಳಿಯಲ್ಲಿ ಕೊನೆಯದಾಗಿ ತಮ್ಮ ರಾಜ್ಯವನ್ನು ಪ್ರತಿನಿಧಿಸಿದರು. ಆದಾಗ್ಯೂ, ಅನಾಬೊಲಿಕ್ ಸ್ಟೀರಾಯ್ಡ್ 19-ನೊರಾಂಡ್ರೊಸ್ಟೆರಾನ್ ಎಂಬ ನಿಷೇಧಿತ ವಸ್ತುವನ್ನು ಸೇವಿಸಿರುವುದರಿಂದ ರಾವ್ ತಪ್ಪಿತಸ್ಥರೆಂದು ಕಂಡುಬಂದಿರುವುದು ಇದೇ ಮೊದಲಲ್ಲ. ಇದಕ್ಕೂ ಮುಂಚೆಯೇ, 2020 ರಲ್ಲಿ, ಮಾರ್ಚ್ 14 ರಂದು, ಬರೋಡಾದಲ್ಲಿ, ಅವರು ಈ ವಸ್ತುವನ್ನು ಸೇವಿಸಿದ್ದಾರೆ ಎಂದು ಸಾಬೀತಾಗಿದೆ.

ನಿಷೇಧಿತ ವಸ್ತುವಿನ ಸೇವನೆಯ ಬಗ್ಗೆ ಸರಿಯಾದ ವಿವರಣೆ ನೀಡಿಲ್ಲ ನಿಷೇಧಿತ ವಸ್ತುವನ್ನು ಸೇವಿಸಿದಕ್ಕೆ ಮಧ್ಯಪ್ರದೇಶದ ಆಲ್‌ರೌಂಡರ್ ಅನ್ಶುಲಾ ಯಾವುದೇ ಸರಿಯಾದ ಕಾರಣವನ್ನು ನೀಡಲು ಸಾಧ್ಯವಾಗಲಿಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅನ್ಶುಲಾ ಅವರ ಎರಡು ಮಾದರಿಗಳನ್ನು ಪರೀಕ್ಷೆಗಾಗಿ ಬೆಲ್ಜಿಯಂನ ಮಾನ್ಯತೆ ಪಡೆದ ಲ್ಯಾಬ್‌ಗೆ ಕಳುಹಿಸಲಾಗಿದೆ. ಆಂಟಿ-ಡೋಪಿಂಗ್ ಶಿಸ್ತು ಸಮಿತಿಯ ಪ್ರಕಾರ, ಅನ್ಶುಲಾ ಈ ಔಷಧಿಯನ್ನು ಉದ್ದೇಶಪೂರ್ವಕವಾಗಿ ತೆಗೆದುಕೊಂಡಿದ್ದಾರೆ. ತನ್ನ ದೇಹದ ಬಗ್ಗೆ ಕಾಳಜಿ ವಹಿಸುವುದು ಮತ್ತು ಯಾವುದೇ ರೀತಿಯ ನಿಷೇಧಿತ ವಸ್ತುವನ್ನು ಸೇವಿಸದಿರುವುದು ಆಟಗಾರನ ಜವಾಬ್ದಾರಿಯಾಗಿದೆ ಎಂದು ಗೌರಂಗ್ ಕಾಂತ್ ವಿವರಿಸಿದ್ದಾರೆ. ಈ ವಿಷಯದಲ್ಲಿ ಅನ್ಶುಲಾ ಅವರು ನಿಷೇಧಿತ ವಸ್ತು ಪತ್ತೆಯಾದ ಬಗ್ಗೆ ಅವರು ಯಾವುದೇ ವಿವರಣೆಯನ್ನು ನೀಡಿಲ್ಲ. ಆದರೆ ಅದೇ ಸಮಯದಲ್ಲಿ ರಾವ್‌ಗೆ ಆರ್ಥಿಕವಾಗಿ ಸಹಾಯ ಮಾಡಲಿಲ್ಲ ಎಂದು ಸಮಿತಿ ನಾಡಾವನ್ನು ಟೀಕಿಸಿತು.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್