AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಪಿಂಗ್ ಪ್ರಕರಣ: ಪೃಥ್ವಿ ಶಾ ನಂತರ ನಾಲ್ಕು ವರ್ಷ ಕ್ರಿಕೆಟ್​ನಿಂದ ನಿಷೇಧಕ್ಕೊಳಗಾದ ಭಾರತದ ಮೊದಲ ಮಹಿಳಾ ಕ್ರಿಕೆಟಿರ್!

ಹೊಸ ಪ್ರಕರಣದಲ್ಲಿ ಮಧ್ಯಪ್ರದೇಶ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ಅನ್ಶುಲಾ ರಾವ್ ಡೋಪಿಂಗ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ.

ಡೋಪಿಂಗ್ ಪ್ರಕರಣ: ಪೃಥ್ವಿ ಶಾ ನಂತರ ನಾಲ್ಕು ವರ್ಷ ಕ್ರಿಕೆಟ್​ನಿಂದ ನಿಷೇಧಕ್ಕೊಳಗಾದ ಭಾರತದ ಮೊದಲ ಮಹಿಳಾ ಕ್ರಿಕೆಟಿರ್!
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Jun 28, 2021 | 4:11 PM

Share

ಡೋಪಿಂಗ್ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ತಪ್ಪಿತಸ್ಥರೆಂದು ಸಾಭೀತಾದ ಬಳಿಕ ಸುಮಾರು ಎಂಟು ತಿಂಗಳ ಕಾಲ ಅವರನ್ನು ಕ್ರಿಕೆಟ್​ನಿಂದ ನಿಷೇಧಿಸಲಾಯಿತು. ನಿಷೇಧದಿಂದ ಹಿಂತಿರುಗಿದ ಶಾ ಮತ್ತೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದರು. ನಂತರ ವಿಜಯ್ ಹಜಾರೆ ಟ್ರೋಫಿಯಲ್ಲೂ ಛಾಪು ಮೂಡಿಸಿದರು. ಬಳಿಕ ಶಾ ಅವರು ಕೆಮ್ಮಿಗೆ ಸಂಬಂಧಿಸಿದ ಔಷಧಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ನಿಷೇಧಿತ ವಸ್ತುವನ್ನು ಸೇವಿಸಿದ್ದಾರೆ ಎಂದು ಹೇಳಿದರು. ಆದರೆ, ಈಗ ಮತ್ತೊಮ್ಮೆ ಡೋಪಿಂಗ್‌ನ ನೆರಳು ಕ್ರಿಕೆಟ್‌ನಲ್ಲಿ ಸುಳಿದಾಡಲಾರಂಭಿಸಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ವಿರೋಧಿ ಡೋಪಿಂಗ್ ಏಜೆನ್ಸಿ (ನಾಡಾ) ಕಠಿಣ ಕ್ರಮ ಕೈಗೊಂಡಿದೆ.

ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ ಹೊಸ ಪ್ರಕರಣದಲ್ಲಿ ಮಧ್ಯಪ್ರದೇಶ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ಅನ್ಶುಲಾ ರಾವ್ ಡೋಪಿಂಗ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ನಾಲ್ಕು ವರ್ಷಗಳ ಕಾಲ ನಿಷೇಧಿಸಲಾಗಿದೆ. ಡೋಪಿಂಗ್ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ನಿಷೇಧ ಹೇರಿದ ಮೊದಲ ಮಹಿಳಾ ಕ್ರಿಕೆಟಿರ್ ಅನ್ಶುಲಾ ರಾವ್. ಅನ್ಶುಲಾ ಮಧ್ಯಪ್ರದೇಶದ ಪರವಾಗಿ ಕ್ರಿಕೆಟ್ ಆಡುತ್ತಾರೆ. ಬಿಸಿಸಿಐ ಆಯೋಜಿಸಿದ್ದ ಅಂಡರ್ -23 ಟಿ 20 ಪಂದ್ಯಾವಳಿಯಲ್ಲಿ ಕೊನೆಯದಾಗಿ ತಮ್ಮ ರಾಜ್ಯವನ್ನು ಪ್ರತಿನಿಧಿಸಿದರು. ಆದಾಗ್ಯೂ, ಅನಾಬೊಲಿಕ್ ಸ್ಟೀರಾಯ್ಡ್ 19-ನೊರಾಂಡ್ರೊಸ್ಟೆರಾನ್ ಎಂಬ ನಿಷೇಧಿತ ವಸ್ತುವನ್ನು ಸೇವಿಸಿರುವುದರಿಂದ ರಾವ್ ತಪ್ಪಿತಸ್ಥರೆಂದು ಕಂಡುಬಂದಿರುವುದು ಇದೇ ಮೊದಲಲ್ಲ. ಇದಕ್ಕೂ ಮುಂಚೆಯೇ, 2020 ರಲ್ಲಿ, ಮಾರ್ಚ್ 14 ರಂದು, ಬರೋಡಾದಲ್ಲಿ, ಅವರು ಈ ವಸ್ತುವನ್ನು ಸೇವಿಸಿದ್ದಾರೆ ಎಂದು ಸಾಬೀತಾಗಿದೆ.

ನಿಷೇಧಿತ ವಸ್ತುವಿನ ಸೇವನೆಯ ಬಗ್ಗೆ ಸರಿಯಾದ ವಿವರಣೆ ನೀಡಿಲ್ಲ ನಿಷೇಧಿತ ವಸ್ತುವನ್ನು ಸೇವಿಸಿದಕ್ಕೆ ಮಧ್ಯಪ್ರದೇಶದ ಆಲ್‌ರೌಂಡರ್ ಅನ್ಶುಲಾ ಯಾವುದೇ ಸರಿಯಾದ ಕಾರಣವನ್ನು ನೀಡಲು ಸಾಧ್ಯವಾಗಲಿಲ್ಲ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅನ್ಶುಲಾ ಅವರ ಎರಡು ಮಾದರಿಗಳನ್ನು ಪರೀಕ್ಷೆಗಾಗಿ ಬೆಲ್ಜಿಯಂನ ಮಾನ್ಯತೆ ಪಡೆದ ಲ್ಯಾಬ್‌ಗೆ ಕಳುಹಿಸಲಾಗಿದೆ. ಆಂಟಿ-ಡೋಪಿಂಗ್ ಶಿಸ್ತು ಸಮಿತಿಯ ಪ್ರಕಾರ, ಅನ್ಶುಲಾ ಈ ಔಷಧಿಯನ್ನು ಉದ್ದೇಶಪೂರ್ವಕವಾಗಿ ತೆಗೆದುಕೊಂಡಿದ್ದಾರೆ. ತನ್ನ ದೇಹದ ಬಗ್ಗೆ ಕಾಳಜಿ ವಹಿಸುವುದು ಮತ್ತು ಯಾವುದೇ ರೀತಿಯ ನಿಷೇಧಿತ ವಸ್ತುವನ್ನು ಸೇವಿಸದಿರುವುದು ಆಟಗಾರನ ಜವಾಬ್ದಾರಿಯಾಗಿದೆ ಎಂದು ಗೌರಂಗ್ ಕಾಂತ್ ವಿವರಿಸಿದ್ದಾರೆ. ಈ ವಿಷಯದಲ್ಲಿ ಅನ್ಶುಲಾ ಅವರು ನಿಷೇಧಿತ ವಸ್ತು ಪತ್ತೆಯಾದ ಬಗ್ಗೆ ಅವರು ಯಾವುದೇ ವಿವರಣೆಯನ್ನು ನೀಡಿಲ್ಲ. ಆದರೆ ಅದೇ ಸಮಯದಲ್ಲಿ ರಾವ್‌ಗೆ ಆರ್ಥಿಕವಾಗಿ ಸಹಾಯ ಮಾಡಲಿಲ್ಲ ಎಂದು ಸಮಿತಿ ನಾಡಾವನ್ನು ಟೀಕಿಸಿತು.

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ