AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾವೆಲಿನ್ ಥ್ರೋ ವಿಭಾಗದಲ್ಲಿ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಹಾಸನದ ಮನು ಶೆಟ್ಟಿ!

Javelin Throw: ಕೇರಳದ ತಿರುವನಂತಪುರಂ‌ನಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ 82.43 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ 2022ರ ಕಾಮನ್‌ವೆಲ್ತ್‌ ಹಾಗೂ ಏಷ್ಯನ್ ಗೇಮ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಜಾವೆಲಿನ್ ಥ್ರೋ ವಿಭಾಗದಲ್ಲಿ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಹಾಸನದ ಮನು ಶೆಟ್ಟಿ!
ಕೋಚ್ ಕಾಶಿನಾಥ್ ಜೊತೆಗೆ ಮನು ಶೆಟ್ಟಿ
Follow us
TV9 Web
| Updated By: ಪೃಥ್ವಿಶಂಕರ

Updated on:Mar 14, 2022 | 10:32 PM

2020 ರಂದು ನಡೆದಿದ್ದ ಟೋಕಿಯೋ ಒಲಿಂಪಿಕ್ಸ್‌ (Tokyo Olympics) ಕ್ರೀಡಾಕೂಟದ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಬರೋಬ್ಬರಿ 87.58 ಮೀಟರ್ ದೂರ ಜಾವಲಿನ್ ಥ್ರೋ (Javelin Throw) ಮಾಡುವ ಮೂಲಕ ದೇಶಕ್ಕೆ ಏಕೈಕ ಚಿನ್ನದ ಪದಕ ಗೆದ್ದು ಕೊಟ್ಟಿದ್ದ ಬಂಗಾರದ ಹುಡುಗ ನೀರಜ್‌ ಚೋಪ್ರಾ (Neeraj Chopra) ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. ಈಗ ನೀರಜ್​ನಂತೆಯೇ ಜಾವಲಿನ್ ಥ್ರೋ ವಿಭಾಗದಲ್ಲಿ ಕರ್ನಾಟಕದ ಪ್ರತಿಭೆಯೊಂದು ಅಪ್ರತಿಮ ಸಾಧನೆ ತೋರಿದೆ. ಕೇರಳದ ತಿರುವನಂತಪುರಂ‌ನಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ 82.43 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು ಮುಂದೆ ಬರುವ ಕಾಮನ್‌ವೆಲ್ತ್‌, ಏಷ್ಯನ್ ಗೇಮ್ಸ್‌ಗೆ ಕನ್ನಡಿಗ ಮನು ಶೆಟ್ಟಿ ಅರ್ಹತೆ ಪಡೆದಿದ್ದಾರೆ.

ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಾಗನಹಳ್ಳಿಯ ನಿವಾಸಿಯಾಗಿರುವ ಮನು ಶೆಟ್ಟಿ ಪ್ರಸ್ತುತ ಇಂಡಿಯನ್ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕ ಕುಟುಂಬದ ಕೇಶವ ಹಾಗೂ ಸುಜಾತ ದಂಪತಿಗಳಿಗೆ ಜನಿಸಿದ ಮನು ಶೆಟ್ಟಿ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಹಾಸನದ ಬೇಲೂರಿನಲ್ಲಿ ಮುಗಿಸಿರುತ್ತಾರೆ. ನಂತರ ಪ್ರಥಮ ಪಿಯು ಓದುವಾಗಲೇ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ ಮನುಶೆಟ್ಟಿ 2ನೇ ವರ್ಷದ ಪಧವಿ ಮುಗಿಯುವ ವೇಳೆಗೆ ಕ್ರೀಡಾ ವಿಭಾಗದಲ್ಲಿ ಇಂಡಿಯನ್ ಆರ್ಮಿಗೆ ಆಯ್ಕೆಯಾಗುತ್ತಾರೆ. ನಂತರ ಹಲವಾರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಗೆದ್ದಿದ್ದಾರೆ. ಕಳೆದ ವರ್ಷ ಪಂಜಾಬ್​ನ ಪಟಿಯಾಲದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ 2ರಲ್ಲಿ 75 ಮೀಟರ್ ಜಾವಲಿನ್ ಎಸೆದು 3ನೇ ಸ್ಥಾನ ಪಡೆದರು. ನಂತರ ತೆಲಂಗಾಣದಲ್ಲಿ ನಡೆದಿದ್ದ ಓಪನ್ ನ್ಯಾಷನಲ್ ಕ್ರೀಡಾಕೂಟದಲ್ಲಿ 2ನೇ ಸ್ಥಾನಕ್ಕೆ ಮನುಶೆಟ್ಟಿ ತೃಪ್ತಿ ಪಡಬೇಕಾಯಿತು.

ಬಳಿಕ ಒಲಂಪಿಕ್ ಹೀರೋ ನೀರಜ್ ಚೋಪ್ರಾಗೆ ತರಬೇತಿ ನೀಡಿದ್ದ ಕಾಶೀನಾಥ್ ನಾಯ್ಕ್ ಬಳಿ ಕಠಿಣ ತರಬೇತಿ ಪಡೆಯುತ್ತಿರುವ ಮನು ಶೆಟ್ಟಿ, ಕೇರಳದ ತಿರುವನಂತಪುರಂ‌ನಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ 82.43 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ 2022ರ ಕಾಮನ್‌ವೆಲ್ತ್‌ ಹಾಗೂ ಏಷ್ಯನ್ ಗೇಮ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ಈ ಗ್ರಾಮೀಣ ಪ್ರತಿಭೆಗೆ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಭರವಸೆ ನೀಡಿದ್ದಾರೆ. ಒಲಂಪಿಕ್ಸ್​ನಲ್ಲಿ ಚಿನ್ನ ಗೆದ್ದ ನೀರಜ್​ರಂತೆಯೇ ಮನು ಶೆಟ್ಟಿ ಕೂಡ ಕಾಮನ್‌ವೆಲ್ತ್‌ ಹಾಗೂ ಏಷ್ಯನ್ ಗೇಮ್ಸ್​ನಲ್ಲಿ ಪದಕ ಗೆದ್ದು ಒಲಂಪಿಕ್ಸ್​ನಲ್ಲಿ ಆಡುವಂತ್ತಾಗಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.

ಇದನ್ನೂ ಓದಿ:IND vs SL: 28 ವರ್ಷಗಳ ನಂತರ ಶ್ರೀಲಂಕಾವನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ! ಸರಣಿ ಗೆಲುವಿಗೆ 5 ಕಾರಣಗಳಿವು

Published On - 9:33 pm, Mon, 14 March 22

ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
ಪ್ಲೀಸ್ ನನ್ನ ಶಾಲೆಗೆ ಸೇರಿಸ್ತೀರಾ, ಬಾಲಕಿಯ ಮನವಿಗೆ ಸ್ಪಂದಿಸಿದ ಯೋಗಿ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?