AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ ವಿಶೇಷ: 30ನೇ ವಸಂತಕ್ಕೆ ಕಾಲಿಟ್ಟ ಕನ್ನಡಿಗ ಮಾಯಾಂಕ್​ ಅಗರ್ವಾಲ್.. ಸೋಷಿಯಲ್​ ಮೀಡಿಯಾದಲ್ಲಿ ಗಣ್ಯರ ಶುಭಾಶಯ

ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ಅವರು ಮಂಗಳವಾರ 30 ನೇ ವರ್ಷಕ್ಕೆ ಕಾಲಿಟ್ಟರು. ಈ ವಿಚಾರವನ್ನು ಮಾಯಾಂಕ್​ ಪತ್ನಿ ಆಶಿತಾ ಸೂದ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಯು ಸಹ ಮಾಯಾಂಕ್ ಅವರ ಜನ್ಮದಿನಕ್ಕೆ ಶುಭಾಶಯ ಕೋರಿದೆ.

ಕ್ರಿಕೆಟ್​ ವಿಶೇಷ: 30ನೇ ವಸಂತಕ್ಕೆ ಕಾಲಿಟ್ಟ ಕನ್ನಡಿಗ ಮಾಯಾಂಕ್​ ಅಗರ್ವಾಲ್.. ಸೋಷಿಯಲ್​ ಮೀಡಿಯಾದಲ್ಲಿ ಗಣ್ಯರ ಶುಭಾಶಯ
ಮಾಯಾಂಕ್ ಅಗರ್​ವಾಲ್
ಪೃಥ್ವಿಶಂಕರ
|

Updated on:Feb 16, 2021 | 11:46 AM

Share

ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಮಾಯಾಂಕ್ ಅಗರ್ವಾಲ್ ಅವರು ಮಂಗಳವಾರ 30 ನೇ ವರ್ಷಕ್ಕೆ ಕಾಲಿಟ್ಟರು. ಈ ವಿಚಾರವನ್ನು ಮಾಯಾಂಕ್​ ಪತ್ನಿ ಆಶಿತಾ ಸೂದ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಯು ಸಹ ಮಾಯಾಂಕ್ ಅವರ ಜನ್ಮದಿನಕ್ಕೆ ಶುಭಾಶಯ ಕೋರಿದೆ.

ಟೆಸ್ಟ್ ಓಪನರ್ ಆಗಿ ಅವರು ಮಾಡಿದ ಕೆಲವು ಸಾಧನೆಗಳ ಬಗ್ಗೆ ಟ್ವೀಟ್ ಮಾಡಿ, ಶುಭಾಶಯ ತಿಳಿಸಿದೆ. ಮಾಯಾಂಕ್ ಅಗರ್ವಾಲ್ 1991 ರ ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಜನಿಸಿದರು. ಅಗರ್ವಾಲ್ ಬಿಷಪ್ ಕಾಟನ್ ಬಾಲಕರ ಶಾಲೆ ಮತ್ತು ಬೆಂಗಳೂರಿನ ಜೈನ್​ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ.

ಈವರೆಗೆ 14 ಟೆಸ್ಟ್ ಪಂದ್ಯ ಆಡಿದ್ದಾರೆ.. 2017-18 ರಣಜಿ ಪಂದ್ಯಾವಳಿಯಲ್ಲಿ ಮಾಯಾಂಕ್​ ಗಳಿಸಿದ 304 ರನ್​ಗಳು ಆಯ್ಕೆದಾರರ ಗಮನ ಸೆಳೆಯಿತು. ಅಲ್ಲದೆ ಮಾಯಾಂಕ್​ ಆ ಆವೃತ್ತಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೇರಿ ಒಟ್ಟು 1,160 ರನ್ ಗಳಿಸಿದರು. ಅದೇ ವರ್ಷ ವಿಜಯ್ ಹಜಾರೆ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಮಾಯಾಂಕ್ ಆ ವರ್ಷ ದೇಶೀಯ ಎಲ್ಲಾ ಕ್ರಿಕೆಟ್​ ಸ್ವರೂಪಗಳಲ್ಲಿ 2,141 ರನ್ ಗಳಿಸಿ ಹಲವಾರು ದಾಖಲೆಗಳನ್ನು ಮುರಿದರು.

2018 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಾದಾರ್ಪಣೆ ಮಾಡಿದ ಅವರು ಈವರೆಗೆ 14 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಮೂರು ಶತಕ ಮತ್ತು ನಾಲ್ಕು ಅರ್ಧಶತಕಗಳೊಂದಿಗೆ 1,052 ರನ್ ಗಳಿಸಿದ್ದಾರೆ. 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ಗಳಿಸಿದ 243 ಸ್ಕೋರ್‌ ಟೆಸ್ಟ್​ನಲ್ಲಿ ಅವರ ವೈಯಕ್ತಿಕ ಅತ್ಯಧಿಕ ರನ್​ ಆಗಿದೆ. ಮಯಾಂಕ್ 2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮೊದಲ ಟೆಸ್ಟ್ ಶತಕವನ್ನು ಗಳಿಸಿದರು. ನಂತರ ಆ ಶತಕವನ್ನು ಡಬಲ್ ಸೆಂಚುರಿ ಆಗಿ ಪರಿವರ್ತಿಸಿದರು. ಮಾಯಾಂಕ್ ಅಗರ್ವಾಲ್ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡದೊಂದಿಗೆ ಚೆನ್ನೈನಲ್ಲಿದ್ದಾರೆ.

Published On - 11:44 am, Tue, 16 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ