AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಆರೋಗ್ಯದಲ್ಲಿ ಚೇತರಿಕೆ; ಪತ್ನಿ ನಿರ್ಮಲ್ ಕೌರ್​ಗೆ ಐಸಿಯೂನಲ್ಲಿ ಚಿಕಿತ್ಸೆ

ಮಿಲ್ಕಾ ಅವರ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ. ಆದರೆ, ಅವರ ಪತ್ನಿ ನಿರ್ಮಲ್ ಕೌರ್ ಇನ್ನೂ ಈ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾರೆ.

ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಆರೋಗ್ಯದಲ್ಲಿ ಚೇತರಿಕೆ; ಪತ್ನಿ ನಿರ್ಮಲ್ ಕೌರ್​ಗೆ ಐಸಿಯೂನಲ್ಲಿ ಚಿಕಿತ್ಸೆ
ಮಿಲ್ಖಾ ಸಿಂಗ್ (ಸಂಗ್ರಹ ಚಿತ್ರ)
ಪೃಥ್ವಿಶಂಕರ
|

Updated on: Jun 06, 2021 | 9:10 PM

Share

ಭಾರತೀಯ ಕ್ರೀಡಾ ಪ್ರಿಯರಿಗೆ ಒಂದು ನೆಮ್ಮದಿಯ ಸುದ್ದಿ ಬಂದಿದೆ. ಶ್ರೇಷ್ಠ ಭಾರತೀಯ ಕ್ರೀಡಾಪಟು ಮತ್ತು ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ ಮಿಲ್ಖಾ ಸಿಂಗ್ ಅವರ ಆರೋಗ್ಯವು ದಿನದಿಂದ ದಿನಕ್ಕೆ ಸುಧಾರಿಸುತ್ತಿದೆ ಎಂದು ವರದಿಯಾಗಿದೆ. ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದ್ದ ಮಿಲ್ಖಾ ಸಿಂಗ್ ಅವರನ್ನು ಇತ್ತೀಚೆಗೆ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಅವರ ಆರೋಗ್ಯ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಆದಾಗ್ಯೂ, ಅನುಭವಿ ಕ್ರೀಡಾಪಟುವಿನ 82 ವರ್ಷದ ಪತ್ನಿ ನಿರ್ಮಲ್ ಕೌರ್ ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ವರದಿಯಾಗಿದೆ. ವೈದ್ಯರ ಪ್ರಕಾರ, ಅವರು ಕೊರೊನಾ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ತಗುಲಿದ ನಂತರ ವಿಶ್ವದ ಅತಿದೊಡ್ಡ ಭಾರತೀಯ ಮಾಸ್ಟರ್ ಆಫ್ ಟ್ರ್ಯಾಕ್ ಅನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿಂದ ಚಿಕಿತ್ಸೆ ಪಡೆದ ನಂತರ, ಅವರನ್ನು ಮೇ 30 ರಂದು ಮನೆಗೆ ಕಳುಹಿಸಲಾಯಿತು. ಆದರೆ, 4 ದಿನಗಳ ನಂತರ, ಅವರ ಆರೋಗ್ಯ ಮತ್ತೆ ಹದಗೆಟ್ಟಿತು ಮತ್ತು ಆಮ್ಲಜನಕದ ಮಟ್ಟ ಕುಸಿದ ನಂತರ ಅವರನ್ನು ಚಂಡೀಗರ್​ ಪಿಜಿಐನ ಐಸಿಯುಗೆ ದಾಖಲಿಸಲಾಯಿತು. ಅಂದಿನಿಂದ, ವೈದ್ಯರು ಅವರ ಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದಾರೆ.

ಆರೋಗ್ಯದಲ್ಲಿ ಚೇತರಿಕೆ ಅನುಭವಿ ಒಲಿಂಪಿಯನ್ ಆರೋಗ್ಯದ ಸುಧಾರಣೆಯ ಬಗ್ಗೆ ಭಾನುವಾರ ಮಾಹಿತಿ ನೀಡಿದ ಆಸ್ಪತ್ರೆಯ ವಕ್ತಾರ ಪ್ರೊಫೆಸರ್ ಅಶೋಕ್ ಕುಮಾರ್, ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಅವರ ಸ್ಥಿತಿ ಸ್ಥಿರವಾದ ಸುಧಾರಣೆಯನ್ನು ತೋರಿಸುತ್ತಿದೆ, ಅವರು ಜೂನ್ 3 ರಿಂದ ಐಸಿಯುನಲ್ಲಿದ್ದಾರೆ ಕೋವಿಡ್ -19ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಎಲ್ಲಾ ವೈದ್ಯಕೀಯ ಮಾನದಂಡಗಳ ಪ್ರಕಾರ, ಜೂನ್ 6 ರಂದು ಅವರ ಸ್ಥಿತಿ ಹಿಂದಿನ ದಿನಗಳಿಗಿಂತ ಉತ್ತಮವಾಗಿದೆ ಎಂದಿದ್ದಾರೆ.

ಹೆಂಡತಿಯ ಸ್ಥಿತಿ ಗಂಬೀರ ಅದೇ ಸಮಯದಲ್ಲಿ, ಮಿಲ್ಖಾ ಅವರ ಕುಟುಂಬದ ವಕ್ತಾರರ ಹೇಳಿಕೆ ಪ್ರಕಾರ, ಮಿಲ್ಕಾ ಅವರ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ. ಆದರೆ, ಅವರ ಪತ್ನಿ ನಿರ್ಮಲ್ ಕೌರ್ ಇನ್ನೂ ಈ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾರೆ. ಮಿಲ್ಖಾ ಸಿಂಗ್ ನಂತರ ನಿರ್ಮಲ್ ಕೌರ್ ಅವರನ್ನು ಕಳೆದ ತಿಂಗಳು ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಂದಿನಿಂದ ಅವರ ಸ್ಥಿತಿ ಹೆಚ್ಚು ಸುಧಾರಿಸಿಲ್ಲ. ಕುಟುಂಬದ ವಕ್ತಾರರ ಪ್ರಕಾರ, 82 ವರ್ಷದ ಕೌರ್ ಈ ರೋಗವನ್ನು ದೃಢವಾಗಿ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ