AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!

MS Dhoni: ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ವಿಡಿಯೋ: ಹೆಂಡತಿ ಎದುರಿಗೇ ತನ್ನ ಕುದುರೆಯ ಮುದ್ದು ಮಾಡಿದ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ!
MS Dhoni
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 28, 2021 | 12:00 PM

Share

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಕಾರಣ ಕೂಲ್​ ಕ್ಯಾಪ್ಟನ್ ಎಂ ಎಸ್​​ ಧೋನಿ ತಮ್ಮ ರಾಂಚಿ ಫಾರಂ ಹೌಸ್​ನಲ್ಲಿ ತಮ್ಮ ಅಚ್ಚುಮೆಚ್ಚಿನ ಪ್ರಾಣಿಗಳ ಜೊತೆ ಕೂಲ್​ ಕೂಲ್​ ಆಗಿದ್ದಾರೆ. ಅವುಗಳನ್ನು ಮುದ್ದಾಡುತ್ತಾ ಆನಂದಿಂದ ಸಮಯ ಕಳೆಯುತ್ತಿದ್ದಾರೆ. ಮೊನ್ನೆಯೂ ಹೀಗೇ ಆಗಿದೆ. ಎಂ ಎಸ್​​ ಧೋನಿಗೆ ತಮ್ಮ ನೆಚ್ಚಿನ ಕುದುರೆಯ ಮೇಲೆ ವ್ಯಾಮೋಹ ಹೆಚ್ಚಾಗಿದ್ದೇ ತಡ ಸೀದಾ ಅದರ ಬಳಿ ಸಾಗಿ ಅದರ ಮೈದಡವಿ ಮುದ್ದಾಡಿದ್ದಾರೆ. ಪ್ರಾಣಿ ಪ್ರಿಯ ಧೋನಿ ತಮ್ಮ ಕುದುರೆಗೆ ಮಸಾಜ್​ ಮಾಡಿದ್ದಾರೆ. ಮಲಗಿದ್ದ ಕುದುರೆಯ ಹೊಟ್ಟೆಯನ್ನು ನೀವುತ್ತಾ.. ಅಲ್ಲಿದವರತ್ತ ಕಣ್ಣು ಮಿಟುಕಿಸಿದ್ದಾರೆ. ಇದಕ್ಕೆ ಪತ್ನಿ ಸಾಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲ ಸಾಕ್ಷಿ ಸಿಂಗ್​ ಆ ದೃಶ್ಯವನ್ನು ವಿಡಿಯೋ ಮಾಡಿ ಇನ್ಸ್​ಟಾಗ್ರಾನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕ್ರಿಕೆಟ್​ ಆಡದೆ ತೋಟದ ಮನೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಕ್ಯಾಪ್ಟನ್ ಸಾ​ಹೇಬರು ಕುದುರೆಗೆ ಏನು ಮೋಡಿ ಮಾಡುತ್ತಿದ್ದಾರೆ ನೋಡಿ ಎಂದು ವಿಡಿಯೋಗೆ #Pamperingtime ಹ್ಯಾಷ್​ಟ್ಯಾಗ್​ ಹೆಡ್ಡಿಂಗ್​ ನೀಡಿದ್ದಾರೆ ಧೋನಿ ಪತ್ನಿ ಸಾಕ್ಷಿ.

ಇದೇ ವೇಳೆ ಸಾಕ್ಷಿ ಅವರು 2009ರ ಥ್ರೋಬ್ಯಾಕ್​ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಹುಡುಗರ ಜೊತೆ ಕ್ರಿಕೆಟ್ ಆಡುತ್ತಿರುವ ಎಂ ಎಸ್​​ ಧೋನಿ ಆಗಲೂ ಕೂಲ್​ ಕೂಲ್​ ಆಗಿ ವಿಕೆಟ್​ ಹಿಂದೆ ತನ್ಮಯತೆಯಿಂದ ನಿಂತಿದ್ದಾರೆ.

(Chennai Super Kings skipper MS Dhoni massage his horse in Ranchi farmhouse Wife Sakshi Singh Shares Video)

ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ

Published On - 11:30 am, Fri, 28 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್