AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಿವೃತ್ತಿ ಸುದ್ದಿಗೆ ಮನನೊಂದು ಆ ಪಾಕ್ ಅಭಿಮಾನಿ ಮಾಡಿದ್ದೇನು ಗೊತ್ತಾ?

ದೆಹಲಿ: ಭಾರತದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರಾದ ಕ್ಯಾಪ್ಟನ್​ ಕೂಲ್​ MS ಧೋನಿ ತಮ್ಮ ನಿವೃತ್ತಿಯನ್ನ ಘೋಷಿಸಿದ್ದು ಅವರ ಅಭಿಮಾನಿಗಳಿಗೆ ಸಾಕಷ್ಟು ನೋವು ಮತ್ತು ಆಘಾತ ಉಂಟುಮಾಡಿದೆ. ಅಚ್ಚರಿಯೆಂದರೆ, ಧೋನಿಯ ಎಲ್ಲಾ ಫ್ಯಾನ್​ಗಳಲ್ಲಿ ಅವರ ನಿವೃತ್ತಿಯ ಸುದ್ದಿ ಕೇಳಿ ಅತಿ ಹೆಚ್ಚು ದುಃಖ ತಂದಿರುವುದು ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಹುಟ್ಟಿದ ಅವರ ಕಟ್ಟಾ ಅಭಿಮಾನಿಗೆ. ರಾಂಚಿಯಲ್ಲಿ ಧೋನಿಯನ್ನ ಭೇಟಿ ಮಾಡಲು ಸಜ್ಜಾದ ಬಷೀರ್​ ಹೌದು, ಪಾಕಿಸ್ತಾನದ ಕರಾಚಿ ಮೂಲದ ಮೊಹಮ್ಮದ ಬಷೀರ್​ ಅಥವಾ ಚಾಚಾ ಶಿಕಾಗೋ ಎಂದೇ ಫೇಮಸ್​ […]

ಧೋನಿ ನಿವೃತ್ತಿ ಸುದ್ದಿಗೆ ಮನನೊಂದು ಆ ಪಾಕ್ ಅಭಿಮಾನಿ ಮಾಡಿದ್ದೇನು ಗೊತ್ತಾ?
KUSHAL V
| Edited By: |

Updated on: Aug 18, 2020 | 2:57 PM

Share

ದೆಹಲಿ: ಭಾರತದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರಾದ ಕ್ಯಾಪ್ಟನ್​ ಕೂಲ್​ MS ಧೋನಿ ತಮ್ಮ ನಿವೃತ್ತಿಯನ್ನ ಘೋಷಿಸಿದ್ದು ಅವರ ಅಭಿಮಾನಿಗಳಿಗೆ ಸಾಕಷ್ಟು ನೋವು ಮತ್ತು ಆಘಾತ ಉಂಟುಮಾಡಿದೆ. ಅಚ್ಚರಿಯೆಂದರೆ, ಧೋನಿಯ ಎಲ್ಲಾ ಫ್ಯಾನ್​ಗಳಲ್ಲಿ ಅವರ ನಿವೃತ್ತಿಯ ಸುದ್ದಿ ಕೇಳಿ ಅತಿ ಹೆಚ್ಚು ದುಃಖ ತಂದಿರುವುದು ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಹುಟ್ಟಿದ ಅವರ ಕಟ್ಟಾ ಅಭಿಮಾನಿಗೆ.

ರಾಂಚಿಯಲ್ಲಿ ಧೋನಿಯನ್ನ ಭೇಟಿ ಮಾಡಲು ಸಜ್ಜಾದ ಬಷೀರ್​ ಹೌದು, ಪಾಕಿಸ್ತಾನದ ಕರಾಚಿ ಮೂಲದ ಮೊಹಮ್ಮದ ಬಷೀರ್​ ಅಥವಾ ಚಾಚಾ ಶಿಕಾಗೋ ಎಂದೇ ಫೇಮಸ್​ ಆಗಿರುವ ಈ ಧೋನಿ ಅಭಿಮಾನಿಗೆ ಅವರ ನೆಚ್ಚಿನ ಆಟಗಾರ ನಿವೃತ್ತಿಯಾಗಿದ್ದು ತೀವ್ರ ನೋವುಂಟು ಮಾಡಿದೆ. ಅದು ಎಷ್ಟರ ಮಟ್ಟಿಗೆ ಅಂದರೆ, ಬಷೀರ್​ ಮತ್ತೆಂದೂ ಇಂಡಿಯಾ- ಪಾಕಿಸ್ತಾನ ನಡುವಿನ ಪಂದ್ಯಾವಳಿಗಳನ್ನು ನೋಡುವುದಿಲ್ಲವಂತೆ. ಹಾಗಂತ ತಾವೂ ಮ್ಯಾಚ್ ನೋಡೋದಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಜೊತೆಗೆ, ಆ ಮ್ಯಾಚ್​ಗಳನ್ನ ನೋಡಲು ವಿದೇಶಕ್ಕೆ ಸಹ ಹೋಗುವುದಿಲ್ಲವಂತೆ. ಅದರ ಬದಲಾಗಿ, ಈ 65 ವರ್ಷದ ಧೋನಿ ಅಭಿಮಾನಿ, ತನ್ನ ಫೇವರೇಟ್​ ಆಟಗಾರನನ್ನ ಕೊನೇ ಬಾರಿ ಧೋನಿಯ ತವರೂರಾದ ರಾಂಚಿಯಲ್ಲಿ ಭೇಟಿ ಮಾಡಲು ಬಯಸಿದ್ದಾರೆ.

ಅಮೆರಿಕಾದ ಶಿಕಾಗೋನಲ್ಲಿ ರೆಸ್ಟೋರೆಂಟ್​ ನಡೆಸುವ ಪಾಕ್​ ಸಂಜಾತ ಬಷೀರ್​ಗೂ ಕ್ಯಾಪ್ಟನ್​ ಕೂಲ್​ ನಡುವಿನ ಬಾಂಧವ್ಯ ಶುರುವಾಗಿದ್ದು ಮೊಹಾಲಿಯಲ್ಲಿ ನಡೆದ 2011ರ ವಿಶ್ವ ಕಪ್​ನ ಇಂಡಿಯಾ-ಪಾಕಿಸ್ತಾನ ನಡುವಿನ ಸೆಮಿಫೈನಲ್​ ಮ್ಯಾಚ್​ ವೇಳೆ.

ಪಂದ್ಯ ನೋಡಲು ಟಿಕೆಟ್​ಗಾಗಿ ಹಂಬಲಿಸುತ್ತಿದ್ದ ಬಷೀರ್​ಗೆ ಧೋನಿ ಅಂದು ಮ್ಯಾಚ್​ನ ಟಿಕೆಟ್​ ಕೊಡಿಸಿದ್ದರಂತೆ. ಅಂದಿನಿಂದ ಶುರುವಾದ ಧೋನಿ ಮೇಲಿನ ಅಗಾಧ ಅಭಿಮಾನವನ್ನ ಬಷೀರ್​ ಇಂದಿಗೂ ಉಳಿಸಿಕೊಂಡು ಬಂದಿದ್ದಾರೆ.

ಪಾಕ್​ ಛೀಮಾರಿಗೂ ಬಷೀರ್​ ಡೋಂಟ್​ ಕೇರ್​ ಧೋನಿಯ ಮೇಲಿನ ಈ ಹುಚ್ಚು ಅಭಿಮಾನದಿಂದ ಬಷೀರ್​ ಇತರೆ ಪಾಕಿಸ್ತಾನದ ಫ್ಯಾನ್ಸ್​ ಹಲವಾರು ಬಾರಿ ಛೀಮಾರಿ ಹಾಕಿದ್ದಾರಂತೆ. ಬಷೀರ್​ನ ದೇಶದ್ರೋಹಿ ಅಂತಾ ಕರೆದಿದ್ದು ಉಂಡು. ಆದರೆ, ಇದ್ಯಾವುದಕ್ಕೂ ಬಷೀರ್​ ಡೋಂಟ್​ ಕೇರ್​. ನನಗೆ ಎರಡೂ ದೇಶಗಳಂದರೆ ಪ್ರೀತಿ. ಆದರೆ, ಅದಕ್ಕಿಂತ ಮಿಗಿಲಾದದ್ದು ಮಾನವ ಕುಲ ಎಂದು ಹೇಳಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ