AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಈ ಕುರಿತು ಧೋನಿ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 2004ರಂಲ್ಲಿ ಬಾಂಗ್ಲಾದೇಶದ ವಿರುದ್ದ ಚತ್ತೋರ್‌ ಗ್ರಾಮ್‌ನಲ್ಲಿ ಅಂಾತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಧೋನಿ, 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿದ್ದಾರೆ. ಧೋನಿ ಆಡಿರುವ ಈ 90 ಟೆಸ್ಟ್‌ಗಳಲ್ಲಿ ಆರು ಶತಕ ಸೇರಿ 4876ರನ್‌, 350 ಏಕದಿನ ಪಂದ್ಯಗಳಲ್ಲಿ 10 ಶತಕ ಸೇರಿ 10773ರನ್‌ […]

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ
ಎಂ ಎಸ್ ಧೋನಿ
Guru
|

Updated on:Aug 16, 2020 | 2:44 AM

Share

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಈ ಕುರಿತು ಧೋನಿ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

2004ರಂಲ್ಲಿ ಬಾಂಗ್ಲಾದೇಶದ ವಿರುದ್ದ ಚತ್ತೋರ್‌ ಗ್ರಾಮ್‌ನಲ್ಲಿ ಅಂಾತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಧೋನಿ, 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿದ್ದಾರೆ. ಧೋನಿ ಆಡಿರುವ ಈ 90 ಟೆಸ್ಟ್‌ಗಳಲ್ಲಿ ಆರು ಶತಕ ಸೇರಿ 4876ರನ್‌, 350 ಏಕದಿನ ಪಂದ್ಯಗಳಲ್ಲಿ 10 ಶತಕ ಸೇರಿ 10773ರನ್‌ ಮತ್ತು 98 ಟಿ20 ಪಂದ್ಯಗಳಲ್ಲಿ 1,617ರನ್‌ ಗಳಿಸಿದ್ದಾರೆ.

2007ರಲ್ಲಿ ಟಿ20ಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡ ಧೋನಿ, 2007ರ ಟಿ20 ವಿಶ್ವಕಪ್‌, 2011ರ ಏಕದಿನ ವಿಶ್ವಕಪ್‌ ಮತ್ತು ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು.

ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಪರ ಆಡುವ ಧೋನಿ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ ಗೆದ್ದಿದ್ದಾರೆ. ಜಾರ್ಖಂಡ್‌ ಮೂಲದ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾದರೂ, ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಆಡಲಿದ್ದಾರೆ.

https://www.instagram.com/p/CD6ZQn1lGBi/

Published On - 8:34 pm, Sat, 15 August 20

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ