AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಈ ಕುರಿತು ಧೋನಿ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 2004ರಂಲ್ಲಿ ಬಾಂಗ್ಲಾದೇಶದ ವಿರುದ್ದ ಚತ್ತೋರ್‌ ಗ್ರಾಮ್‌ನಲ್ಲಿ ಅಂಾತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಧೋನಿ, 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿದ್ದಾರೆ. ಧೋನಿ ಆಡಿರುವ ಈ 90 ಟೆಸ್ಟ್‌ಗಳಲ್ಲಿ ಆರು ಶತಕ ಸೇರಿ 4876ರನ್‌, 350 ಏಕದಿನ ಪಂದ್ಯಗಳಲ್ಲಿ 10 ಶತಕ ಸೇರಿ 10773ರನ್‌ […]

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ
ಎಂ ಎಸ್ ಧೋನಿ
Guru
|

Updated on:Aug 16, 2020 | 2:44 AM

Share

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಈ ಕುರಿತು ಧೋನಿ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

2004ರಂಲ್ಲಿ ಬಾಂಗ್ಲಾದೇಶದ ವಿರುದ್ದ ಚತ್ತೋರ್‌ ಗ್ರಾಮ್‌ನಲ್ಲಿ ಅಂಾತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಧೋನಿ, 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿದ್ದಾರೆ. ಧೋನಿ ಆಡಿರುವ ಈ 90 ಟೆಸ್ಟ್‌ಗಳಲ್ಲಿ ಆರು ಶತಕ ಸೇರಿ 4876ರನ್‌, 350 ಏಕದಿನ ಪಂದ್ಯಗಳಲ್ಲಿ 10 ಶತಕ ಸೇರಿ 10773ರನ್‌ ಮತ್ತು 98 ಟಿ20 ಪಂದ್ಯಗಳಲ್ಲಿ 1,617ರನ್‌ ಗಳಿಸಿದ್ದಾರೆ.

2007ರಲ್ಲಿ ಟಿ20ಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡ ಧೋನಿ, 2007ರ ಟಿ20 ವಿಶ್ವಕಪ್‌, 2011ರ ಏಕದಿನ ವಿಶ್ವಕಪ್‌ ಮತ್ತು ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು.

ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಪರ ಆಡುವ ಧೋನಿ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ ಗೆದ್ದಿದ್ದಾರೆ. ಜಾರ್ಖಂಡ್‌ ಮೂಲದ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾದರೂ, ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಆಡಲಿದ್ದಾರೆ.

https://www.instagram.com/p/CD6ZQn1lGBi/

Published On - 8:34 pm, Sat, 15 August 20

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ