AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: CSKನ ಮೊದಲ ಆಯ್ಕೆ MS ಧೋನಿ ಆಗಿರಲಿಲ್ಲವಂತೆ, ಯಾಕೆ?

ಚೆನ್ನೈ ಸೂಪರ್ ಕಿಂಗ್ಸ್ IPL​ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗಿಂತ ಭಿನ್ನವಾದ ತಂಡ ಎಂಬುದು ಈಗಾಗಲೇ ಗೋಚರವಾಗಿದೆ. ಈ ತಂಡದ ಜನಪ್ರಿಯತೆ ಮತ್ತು ಯಶಸ್ಸಿಗೆ ಮಹೇಂದ್ರ ಸಿಂಗ್​ ಧೋನಿ ಅದರ ನಾಯಕರಾಗಿರುವುದೇ ಮುಖ್ಯ ಕಾರಣವಾಗಿದೆ. IPL ಮೊದಲ ಆವೃತಿಯಿಂದ ಧೋನಿ ತಂಡದ ಭಾಗವಾಗಿದ್ದಾರೆ. ಆದರೆ ಧೋನಿ ತಂಡದ ಮೊದಲ ಆಯ್ಕೆಯಾಗಿರಲಿಲ್ಲ ಎಂಬ ರೋಚಕ ಮಾಹಿತಿ ಈಗ ಹೊರಬಿದ್ದಿದೆ. ಚೆನ್ನೈ ಫ್ರ್ಯಾಂಚೈಸ್‌ನ ಆಡಳಿತ ಮಂಡಳಿಯು ಟೀಂ ಇಂಡಿಯಾದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್​ರನ್ನು ಧೋನಿಯ ಬದಲು ನಾಯಕನನ್ನಾಗಿ ಮಾಡಲು ಬಯಸಿತು […]

IPL 2020: CSKನ ಮೊದಲ ಆಯ್ಕೆ MS ಧೋನಿ ಆಗಿರಲಿಲ್ಲವಂತೆ, ಯಾಕೆ?
ಸಾಧು ಶ್ರೀನಾಥ್​
| Updated By: KUSHAL V|

Updated on: Sep 13, 2020 | 12:45 PM

Share

ಚೆನ್ನೈ ಸೂಪರ್ ಕಿಂಗ್ಸ್ IPL​ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳಿಗಿಂತ ಭಿನ್ನವಾದ ತಂಡ ಎಂಬುದು ಈಗಾಗಲೇ ಗೋಚರವಾಗಿದೆ. ಈ ತಂಡದ ಜನಪ್ರಿಯತೆ ಮತ್ತು ಯಶಸ್ಸಿಗೆ ಮಹೇಂದ್ರ ಸಿಂಗ್​ ಧೋನಿ ಅದರ ನಾಯಕರಾಗಿರುವುದೇ ಮುಖ್ಯ ಕಾರಣವಾಗಿದೆ.

IPL ಮೊದಲ ಆವೃತಿಯಿಂದ ಧೋನಿ ತಂಡದ ಭಾಗವಾಗಿದ್ದಾರೆ. ಆದರೆ ಧೋನಿ ತಂಡದ ಮೊದಲ ಆಯ್ಕೆಯಾಗಿರಲಿಲ್ಲ ಎಂಬ ರೋಚಕ ಮಾಹಿತಿ ಈಗ ಹೊರಬಿದ್ದಿದೆ. ಚೆನ್ನೈ ಫ್ರ್ಯಾಂಚೈಸ್‌ನ ಆಡಳಿತ ಮಂಡಳಿಯು ಟೀಂ ಇಂಡಿಯಾದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್​ರನ್ನು ಧೋನಿಯ ಬದಲು ನಾಯಕನನ್ನಾಗಿ ಮಾಡಲು ಬಯಸಿತು ಎಂಬ ವಿಚಾರವನ್ನು ಚೆನ್ನೈನ ಮಾಜಿ ಬ್ಯಾಟ್ಸ್‌ಮನ್ ಸುಬ್ರಮಣಿಯಂ ಬದ್ರಿನಾಥ್ ಬಹಿರಂಗಪಡಿಸಿದ್ದಾರೆ.

IPL ಪಂದ್ಯಾವಳಿಯ ಮೊದಲ ಹರಾಜಿನಲ್ಲಿ CSK ಫ್ರ್ಯಾಂಚೈಸ್‌ ಧೋನಿಯನ್ನು ಖರೀದಿಸಿತು. ಚೆನ್ನೈ ಹೊರತುಪಡಿಸಿ, ಎಲ್ಲಾ 7 ತಂಡಗಳು ಐಕಾನ್ ಆಟಗಾರರನ್ನು ತಮ್ಮ ನಾಯಕರನ್ನಾಗಿ ಮಾಡಿಕೊಂಡಿದ್ದವು. ಆದರೆ, ಚೆನ್ನೈಗೆ ಮಾತ್ರ ಐಕಾನ್ ಪ್ಲೇಯರ್ ಇರಲಿಲ್ಲ. ಇದರಿಂದಾಗಿ ಚೆನ್ನೈ ಸೆಹ್ವಾಗ್​ರನ್ನು ತಂಡದ ಐಕಾನ್ ಆಗಿ ಮಾಡಲು ನಿರ್ಧರಿಸಿತ್ತು. ಆದರೆ ಸೆಹ್ವಾಗ್ ಒಲವು ಬೇರೆ ಕಡೆ ಇರುವುದನ್ನು ಗಮನಿಸಿದ ಚೆನ್ನೈ ಧೋನಿಯನ್ನು ಹರಾಜಿನಲ್ಲಿ ಖರೀದಿಸಿದರು ಎಂದು ಬದ್ರಿನಾಥ್ ಹೇಳಿದ್ದಾರೆ.

ಸೆಹ್ವಾಗ್ ದೆಹಲಿಯಿಂದ ಆಡಲು ನಿರ್ಧರಿಸಿದ್ದರಿಂದ ಚೆನ್ನೈ ತನ್ನ ಆಯ್ಕೆಯನ್ನು ಬದಲಾಯಿಸಿ, ಧೋನಿಯನ್ನು ನಾಯಕನನ್ನಾಗಿ ಮಾಡಿತು ಎಂಬ ವಿಚಾರವನ್ನು ಬದ್ರಿನಾಥ್ ಬಿಚ್ಚಿಟ್ಟಿದ್ದಾರೆ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ