AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಂದ್ರ ಸಿಂಗ್ ಧೋನಿಗೆ ICC ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್ ಘೋಷಣೆ

ಧೋನಿಯ ಕ್ರೀಡಾಸ್ಫೂರ್ತಿಯ ಈ ಕಾರ್ಯಕ್ಕೆ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್ ಘೋಷಿಸಿದೆ. ಕ್ರಿಕೆಟ್ ಅಭಿಮಾನಿಗಳು ವೋಟ್ ಮಾಡುವ ಮೂಲಕ ಧೋನಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿಗೆ ICC ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್ ಘೋಷಣೆ
ಮಹೇಂದ್ರ ಸಿಂಗ್ ಧೋನಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Apr 06, 2022 | 11:13 PM

Share

ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್, ಬ್ಯಾಟ್ಸ್​ಮನ್ ಮಹೇಂದ್ರ ಸಿಂಗ್ ಧೋನಿಗೆ ಐಸಿಸಿ ದಶಕದ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿ ಘೋಷಿಸಿದೆ. ಕ್ಯಾಪ್ಟನ್ ಕೂಲ್ ಎಂದು ಕರೆಸಿಕೊಂಡಿರುವ ಭಾರತದ ಮಾಜಿ ಕಪ್ತಾನ, 2011ರ ನಾಟಿಂಗ್​ ಹ್ಯಾಮ್ ಟೆಸ್ಟ್​ನಲ್ಲಿ ರನ್ ಔಟ್ ಆಗಿದ್ದ ಇಂಗ್ಲೆಂಡ್ ಆಟಗಾರ ಇಯಾನ್ ಬೆಲ್​ನನ್ನು ವಾಪಸ್ ಕರೆದಿದ್ದರು. ಧೋನಿ ಈ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು.

ಇದೀಗ ಧೋನಿಯ ಕ್ರೀಡಾಸ್ಫೂರ್ತಿಯ ಈ ಕಾರ್ಯಕ್ಕೆ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಅವಾರ್ಡ್ ಘೋಷಿಸಿದೆ. ಐಸಿಸಿ ಕಳೆದ ಹತ್ತು ವರ್ಷಗಳಿಂದ ಈ ರೀತಿ ವಿವಿಧ ಪ್ರಶಸ್ತಿಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟಿಗರಿಗೆ ನೀಡುತ್ತಿದೆ. ಕ್ರಿಕೆಟ್ ಅಭಿಮಾನಿಗಳು ವೋಟ್ ಮಾಡುವ ಮೂಲಕ ಧೋನಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

2011ರ ಆ ಪಂದ್ಯದಲ್ಲಿ ಏನು ನಡೆದಿತ್ತು? ಭಾರತ ಮತ್ತು ಇಂಗ್ಲೆಂಡ್, ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ಆಡುತ್ತಿತ್ತು. ಪಂದ್ಯದ ಮೂರನೇ ದಿನದಂದು ಟೀ ಬ್ರೇಕ್​ಗೂ ಮೊದಲಿನ ಓವರ್​ನ ಕೊನೆಯ ಎಸೆತದಲ್ಲಿ ಮಾರ್ಗನ್ ಬ್ಯಾಟಿಂಗ್ ಮಾಡುತ್ತಿದ್ದರು. ಮಾರ್ಗನ್ ಹೊಡೆತ ಬೌಂಡರಿಯತ್ತ ಸಾಗಿತು. ಅದು ಫೋರ್ ಎಂದು ನಿರ್ಧರಿಸಿದ ಮಾರ್ಗನ್ ಹಾಗೂ ಇಯಾನ್ ಬೆಲ್ ಟೀ ಬ್ರೇಕ್​ಗಾಗಿ ಪೆವಿಲಿಯನ್​ನತ್ತ ಹೊರಡಲು ತಯಾರಾಗಿ ಕ್ರೀಸ್ ಬಿಟ್ಟು ನಿಂತರು. ಆದರೆ ಬೌಂಡರಿಯಲ್ಲಿ ಬಾಲ್ ತಡೆದ ಭಾರತೀಯ ಆಟಗಾರರು, ಚೆಂಡನ್ನು ಧೊನಿ ಕೈಗೆಸೆದರು. ಅದಾಗಲೇ ಕ್ರೀಸ್ ಬಿಟ್ಟಿದ್ದ ಇಯಾನ್ ಬೆಲ್​ರನ್ನು ರನೌಟ್ ಮಾಡಲಾಯಿತು. ಥರ್ಡ್ ಅಂಪೈರ್ ತೀರ್ಮಾನದ ಮೂಲಕ ಬೆಲ್ ಔಟಾಗಿರುವುದನ್ನು ಖಚಿತಪಡಿಸಿಕೊಳ್ಳಲಾಯಿತು.

ಈ ನಿರ್ಧಾರದಿಂದ ಬೆಲ್ ಅಸಮಾಧಾನ ಹೊಂದಿರುವುದು ತಿಳಿದುಬಂತು. ಟೀ ಬ್ರೇಕ್​ನಲ್ಲಿ ಬೆಲ್ ವಿಕೆಟ್ ಬಗ್ಗೆ ಚರ್ಚೆ ನಡೆಸಿದ ಧೋನಿ, ಇಂಗ್ಲೆಂಡ್ ನಾಯಕ ಆಂಡ್ರ್ಯೂ ಸ್ಟ್ರಾಸ್ ಹಾಗೂ ಉಭಯ ತಂಡದ ಕೋಚ್​ಗಳು ಇಯಾನ್ ಬೆಲ್ ಔಟ್ ಅಪೀಲ್​ನ್ನು ಹಿಂಪಡೆದರು. ಮಹೇಂದ್ರ ಸಿಂಗ್ ಧೋನಿಯ ಈ ನಡೆಯು ವ್ಯಾಪಕ ಪ್ರಶಂಸೆ ಪಡೆದುಕೊಂಡಿತ್ತು. ಕ್ರೀಡಾಸ್ಫೂರ್ತಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು.

2011ರ ನಾಟಿಂಗ್​ಹ್ಯಾಮ್ ಟೆಸ್ಟ್

ICC Awards | ವಿರಾಟ್ ಕೊಹ್ಲಿಗೆ ದಶಕದ ಕ್ರಿಕೆಟಿಗ ಮತ್ತು ಏಕದಿನ ತಂಡದ ಅತ್ಯುತ್ತಮ ಕ್ರಿಕೆಟಿಗನ ಗೌರವ

Published On - 6:05 pm, Mon, 28 December 20

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ