AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಈ ಯುವ ಆಟಗಾರ ಅಬ್ಬರಿಸಲಿದ್ದಾನೆ; ಎಂಎಸ್​ಕೆ ಪ್ರಸಾದ್

ಇಂದಿನ ಹುಡುಗರು ಹಿಂದಿನವರಿಗಿಂತ ಐದು ಪಟ್ಟು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದಾರೆ. ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿ ವಿಶ್ವದ ಅತ್ಯುತ್ತಮ ಬೌಲರ್ ಅನ್ನು ನಡುಗಿಸಿದರು.

ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಈ ಯುವ ಆಟಗಾರ ಅಬ್ಬರಿಸಲಿದ್ದಾನೆ; ಎಂಎಸ್​ಕೆ ಪ್ರಸಾದ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 06, 2021 | 5:34 PM

Share

ಭಾರತ ತಂಡವು ಜುಲೈ ತಿಂಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಇಲ್ಲಿ ಅವರು ಏಕದಿನ ಮತ್ತು ಟಿ 20 ಸರಣಿಗಳನ್ನು ಆಡಬೇಕಾಗಿದೆ. ಮುಖ್ಯ ಮುಖಗಳ ಹೊರತಾಗಿ, ಈ ಪ್ರವಾಸಕ್ಕಾಗಿ ಹೊಸ ಮುಖಗಳು ಆಯ್ಕೆಯಾಗಲಿವೆ. ಶ್ರೀಲಂಕಾ ಪ್ರವಾಸದ ಮೊದಲು, ಟೀಮ್ ಇಂಡಿಯಾದ ಮಾಜಿ ಆಯ್ಕೆ ಸಮಿತಿ ಸದಸ್ಯ ಎಂಎಸ್ಕೆ ಪ್ರಸಾದ್ ಈ ಪ್ರವಾಸದಲ್ಲಿ ಅಬ್ಬರಿಸುವ ಆಟಗಾರ ಯಾರು ಎಂದು ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ 20 ಸರಣಿಗಳನ್ನು ಭಾರತ ತಂಡ ಗೆಲ್ಲುತ್ತದೆ ಎಂದು ಪ್ರಸಾದ್ ಹೇಳಿದ್ದಾರೆ. ಭಾರತದಲ್ಲಿ ಸಾಕಷ್ಟು ಸಮರ್ಥ ಆಟಗಾರರಿದ್ದಾರೆ ಎಂಬುದು ಪ್ರಸಾದ್ ವಾದವಾಗಿದೆ.

ಸೂರ್ಯಕುಮಾರ್ ಯಾದವ್ ಜೊತೆಗೆ ಇಶಾನ್ ಮತ್ತು ಸಂಜು ಇದೀಗ ಶ್ರೀಲಂಕಾ ಪ್ರವಾಸಕ್ಕಾಗಿ ಅಥವಾ ಪ್ರವಾಸದ ವೇಳಾಪಟ್ಟಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿಲ್ಲ. ಮೂರು ಏಕದಿನ ಮತ್ತು ಟಿ 20 ಪಂದ್ಯಗಳನ್ನು ಆಡುವ ಮಾತುಕತೆ ಮುನ್ನೆಲೆಗೆ ಬಂದಿದ್ದರೂ. ಶ್ರೀಲಂಕಾ ಪ್ರವಾಸವು ಜುಲೈ 13 ರಿಂದ ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ. ಎಂಎಸ್ಕೆ ಪ್ರಸಾದ್ ಅವರು ಕ್ರೀಡಾ ವೆಬ್‌ಸೈಟ್ ಸ್ಪೋರ್ಟ್‌ಸ್ಟಾರ್‌ನೊಂದಿಗಿನ ಸಂವಾದದಲ್ಲಿ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ಪ್ರವಾಸದಲ್ಲಿ ಹೆಚ್ಚು ಪ್ರಭಾವ ಬೀರುತ್ತಾರೆ ಎಂದು ಹೇಳಿದರು. ಸೂರ್ಯಕುಮಾರ್ ಯಾದವ್ ಜೊತೆಗೆ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಕೂಡ ಮಿಂಚುವ ಉತ್ತಮ ಅವಕಾಶವನ್ನು ಹೊಂದಿದ್ದಾರೆ. ನಾನು ಅವೇಶ್ ಖಾನ್ ಅವರನ್ನು ತಂಡದಲ್ಲಿ ನೋಡಲು ಬಯಸುತ್ತೇನೆ (ಅವೇಶ್ ಪ್ರಸ್ತುತ ಯುಕೆ ಪ್ರವಾಸವನ್ನು ಸ್ಟ್ಯಾಂಡ್ಬೈ ಆಟಗಾರನಾಗಿದ್ದಾರೆ). ಅವರು ಐಪಿಎಲ್‌ನಲ್ಲಿ ಅದ್ಭುತವಾಗಿ ಆಡಿದ್ದಾರೆ ಮತ್ತು ಎರಡು ಸರಣಿಗಳಲ್ಲಿ ಅವರು ಆಡಲು ಸಾಧ್ಯವಾಗದಿರುವುದು ದುರದೃಷ್ಟಕರ ಎಂದಿದ್ದಾರೆ.

ಸೂರ್ಯ ಮತ್ತು ಇಶಾನ್ ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರು. ಇಬ್ಬರೂ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕಗಳನ್ನು ಗಳಿಸಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಶ್ರೀಲಂಕಾ ಪ್ರವಾಸದ ಮೂಲಕ, ಇಬ್ಬರೂ ಟಿ 20 ವಿಶ್ವಕಪ್‌ಗೆ ಮುನ್ನ ತಮ್ಮ ಸಾಮಥ್ಯ್ರವನ್ನು ಮತ್ತಷ್ಟು ಬಲಪಡಿಸಬಹುದು.

ಇಂದಿನ ಆಟಗಾರರಲ್ಲಿ 5 ಪಟ್ಟು ಹೆಚ್ಚು ವಿಶ್ವಾಸ ಎಂಎಸ್‌ಕೆ ಪ್ರಸಾದ್ ಅವರು ಯುವ ಆಟಗಾರರನ್ನು ಹಳೆಯ ಆಟಗಾರರೊಂದಿಗೆ ಹೋಲಿಸಿ ಮಾತನಾಡಿದ್ದಾರೆ. ಕೌಶಲ್ಯಗಳು ಹಿಂದಿನ ಆಟಗಾರರು ಮತ್ತು ಇಂದಿನ ಆಟಗಾರರ ನಡುವೆ ಒಂದೇ ಆಗಿರುತ್ತದೆ. ಆದರೆ ಇಂದಿನ ಹುಡುಗರು ಹಿಂದಿನವರಿಗಿಂತ ಐದು ಪಟ್ಟು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದಾರೆ. ಇದಕ್ಕೆ ಸ್ಪಷ್ಟ ಉದಾಹರಣೆಯೆಂದರೆ- ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲಿಯೇ ಸಿಕ್ಸರ್ ಬಾರಿಸಿ ವಿಶ್ವದ ಅತ್ಯುತ್ತಮ ಬೌಲರ್ ಅನ್ನು ನಡುಗಿಸಿದರು. ಹಾಗೆಯೇ ಚೊಚ್ಚಲ ಪಂದ್ಯದಲ್ಲಿ ಇಶಾನ್ ಕಿಶನ್ ಎದುರಾಳಿ ತಂಡದ ವಿರುದ್ದ ಅಬ್ಬರಿಸಿದ್ದರು. ಹೀಗಾಗಿ ಈ ಯುವ ಭಾರತೀಯ ತಂಡವು ಶ್ರೀಲಂಕಾದಲ್ಲಿ ನಡೆಯುವ ಸರಣಿಯನ್ನು ಗೆದ್ದರೆ ನನಗೆ ಯಾವುದೆ ಆಶ್ಚರ್ಯವಾಗುವುದಿಲ್ಲ ಎಂದು ಹೇಳಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ