AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Marathon: ಮುಂಬೈನಲ್ಲಿ ನಡೆದ ಮ್ಯಾರಥಾನ್​ನಲ್ಲಿ ಇಬ್ಬರು ಸಾವು, 22 ಮಂದಿ ಆಸ್ಪತ್ರೆಗೆ ದಾಖಲು

ಮುಂಬೈನಲ್ಲಿ ಭಾನುವಾರ ನಡೆದ ಮ್ಯಾರಥಾನ್​ನಲ್ಲಿ 74 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 22 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಪ್ರಮುಖ ಕಾರಣವಾಗಿದೆ. ಸಂಪೂರ್ಣ 42 ಕಿಲೋಮೀಟರ್ ಮ್ಯಾರಥಾನ್ ಓಟದ ವೇಳೆ 74 ವರ್ಷದ ರಾಜೇಂದ್ರ ಚಂದ್ಮಲ್ ಬೋರಾ ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Mumbai Marathon: ಮುಂಬೈನಲ್ಲಿ ನಡೆದ ಮ್ಯಾರಥಾನ್​ನಲ್ಲಿ ಇಬ್ಬರು ಸಾವು, 22 ಮಂದಿ ಆಸ್ಪತ್ರೆಗೆ ದಾಖಲು
ಮ್ಯಾರಥಾನ್Image Credit source: Olympics.com
ನಯನಾ ರಾಜೀವ್
|

Updated on: Jan 22, 2024 | 9:49 AM

Share

ಮುಂಬೈನಲ್ಲಿ ಭಾನುವಾರ ನಡೆದ ಮ್ಯಾರಥಾನ್(Marathon)​ನಲ್ಲಿ 74 ವರ್ಷದ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 22 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಪ್ರಮುಖ ಕಾರಣವಾಗಿದೆ. ಸಂಪೂರ್ಣ 42 ಕಿಲೋಮೀಟರ್ ಮ್ಯಾರಥಾನ್ ಓಟದ ವೇಳೆ 74 ವರ್ಷದ ರಾಜೇಂದ್ರ ಚಂದ್ಮಲ್ ಬೋರಾ ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬೋರಾ ಹಠಾತ್ತನೆ ಮರೀನ್ ಡ್ರೈವ್‌ನಲ್ಲಿ ಕುಸಿದು ಬಿದ್ದಿದ್ದು, ಅವರನ್ನು ಬಾಂಬೆ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸಾವಿಗೆ ಹೃದಯಾಘಾತವೇ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಮತ್ತೊಂದೆಡೆ, ಇನ್ನೋರ್ವ ಸ್ಪರ್ಧಿ ಸುವರ್ದೀಪ್ ಬ್ಯಾನರ್ಜಿ (46) ಕೂಡ ಮ್ಯಾರಥಾನ್‌ನಲ್ಲಿ ಮೂರ್ಛೆ ಹೋಗಿ ಸಾವನ್ನಪ್ಪಿದ್ದಾರೆ. ಬ್ಯಾನರ್ಜಿ ಅವರು ವರ್ಲಿಯಿಂದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದರು. ಅವರು ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದರು.ಪೊಲೀಸರು ಅವರನ್ನು ನಾಯರ್ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಪರೀಕ್ಷೆಯ ನಂತರ ಅವರು ಸಾವನ್ನಪ್ಪಿದ್ದಾರೆ ಹೇಳಿದ್ದಾರೆ, ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: ಬೆಂಗಳೂರು 18ಕೆ ಮ್ಯಾರಥಾನ್​ಗೆ ಚಾಲನೆ: ನಮಸ್ಕಾರ ಬೆಂಗಳೂರು ಎಂದ ವಿರಾಟ್ ಕೊಹ್ಲಿ, ಇಲ್ಲಿದೆ ಫೋಟೋ ಝಲಕ್​

ಇಂದು ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ, ಅದರ ಮುನ್ನಾ ದಿನ ನಡೆದ ಮುಂಬೈ ಮ್ಯಾರಥಾನ್​ನಲ್ಲೂ ಕೂಡ ಜೈಶ್ರೀರಾಮ್ ಘೋಷಣೆ ಮೊಳಗಿದೆ. ಶ್ರೀರಾಮನ ಭಾವಚಿತ್ರವಿರುವ ಕೇಸರಿ ಧ್ವಜ ಹಿಡಿದ ಹೋರಾಟಗಾರರು ಜೈಶ್ರೀರಾಮ್ ಎಂದು ಹೇಳುತ್ತಾ ಮ್ಯಾರಥಾನ್​ನಲ್ಲಿ ಭಾಗವಹಿಸಿದ್ದಾರೆ.

ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ