AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಟಾರ್ಗೆಟ್ ಟೀಮ್ ಇಂಡಿಯಾ ಅಲ್ಲ.. ಓನ್ಲಿ ಸಚಿನ್ ’?!

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಎರಡು ದಶಕಗಳಿಗೂ ಅಧಿಕ ಕಾಲ ಕ್ರಿಕೆಟ್ ಲೋಕವನ್ನ ಆಳಿದ ಅನಭಿಷಿಕ್ತ ದೊರೆ. ಫೀಲ್ಡ್​ನಲ್ಲಿ ಸಚಿನ್ ಹವಾ ಹೇಗಿತ್ತು ಅಂದ್ರೇ, ಎದುರಾಳಿ ತಂಡದ ಆಟಗಾರರು ಮ್ಯಾಚ್​ನಲ್ಲಿ ಭಾರತವನ್ನು ಮಣಿಸೋದಕ್ಕಿಂತ ಸಚಿನ್ ಒಬ್ಬರನ್ನೇ ಹೇಗೆ ಔಟ್​ ಮಾಡಬೇಕು ಅಂತಾ ಪ್ಲಾನ್​ ಹೆಣೆದಿದ್ದೇ ಹೆಚ್ಚು. ಅಷ್ಟರ ಮಟ್ಟಿಗೆ ಸಚಿನ್ ತೆಂಡೂಲ್ಕರ್ ಎದುರಾಳಿ ತಂಡಗಳಿಗೆ ಸಿಂಹಸ್ವಪ್ನವಾಗಿದ್ದರು. ಮ್ಯಾಚ್​ನಲ್ಲಿ ಸಚಿನ್​ರನ್ನ ಹತ್ತಿಕ್ಕಲು ಡ್ರೆಸ್ಸಿಂಗ್​ ರೂಮ್​ನಲ್ಲಿ ಎದುರಾಳಿ ತಂಡದವರು ಮಾಡಿರುವ ಸ್ಟ್ರಾಟೆಜಿಗಳಿಗೆ ಲೆಕ್ಕವೇ ಇಲ್ಲ. ಇದರ ಒಂದು ಉದಾಹರಣೆಯನ್ನ ಖುದ್ದು […]

‘ನನ್ನ ಟಾರ್ಗೆಟ್ ಟೀಮ್ ಇಂಡಿಯಾ ಅಲ್ಲ.. ಓನ್ಲಿ ಸಚಿನ್ ’?!
ಸಚಿನ್ ತೆಂಡೂಲ್ಕರ್
KUSHAL V
|

Updated on: Jul 07, 2020 | 7:34 PM

Share

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಎರಡು ದಶಕಗಳಿಗೂ ಅಧಿಕ ಕಾಲ ಕ್ರಿಕೆಟ್ ಲೋಕವನ್ನ ಆಳಿದ ಅನಭಿಷಿಕ್ತ ದೊರೆ. ಫೀಲ್ಡ್​ನಲ್ಲಿ ಸಚಿನ್ ಹವಾ ಹೇಗಿತ್ತು ಅಂದ್ರೇ, ಎದುರಾಳಿ ತಂಡದ ಆಟಗಾರರು ಮ್ಯಾಚ್​ನಲ್ಲಿ ಭಾರತವನ್ನು ಮಣಿಸೋದಕ್ಕಿಂತ ಸಚಿನ್ ಒಬ್ಬರನ್ನೇ ಹೇಗೆ ಔಟ್​ ಮಾಡಬೇಕು ಅಂತಾ ಪ್ಲಾನ್​ ಹೆಣೆದಿದ್ದೇ ಹೆಚ್ಚು. ಅಷ್ಟರ ಮಟ್ಟಿಗೆ ಸಚಿನ್ ತೆಂಡೂಲ್ಕರ್ ಎದುರಾಳಿ ತಂಡಗಳಿಗೆ ಸಿಂಹಸ್ವಪ್ನವಾಗಿದ್ದರು.

ಮ್ಯಾಚ್​ನಲ್ಲಿ ಸಚಿನ್​ರನ್ನ ಹತ್ತಿಕ್ಕಲು ಡ್ರೆಸ್ಸಿಂಗ್​ ರೂಮ್​ನಲ್ಲಿ ಎದುರಾಳಿ ತಂಡದವರು ಮಾಡಿರುವ ಸ್ಟ್ರಾಟೆಜಿಗಳಿಗೆ ಲೆಕ್ಕವೇ ಇಲ್ಲ. ಇದರ ಒಂದು ಉದಾಹರಣೆಯನ್ನ ಖುದ್ದು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಅವರೇ ಬಾಯ್ಬಿಟ್ಟಿದ್ದಾರೆ.

ನಿಮ್ಮ ಪ್ರಕಾರ ಅದ್ಭುತವಾದ ಬ್ಯಾಟಿಂಗ್ ಟೆಕ್ನಿಕ್ ಹೊಂದಿರೋ ಬ್ಯಾಟ್ಸ್​ಮನ್ ಯಾರು ಅನ್ನೋ ಪ್ರಶ್ನೆಗೆ ನಾಸಿರ್ ಹುಸೇನ್ ಮೊದಲಿಗೆ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಎಂದು ಹೇಳಿದ್ದಾರೆ. ಆದರೆ ನಾನು ಕಂಡ ಶ್ರೇಷ್ಠ ಟೆಕ್ನಿಕ್ ಹೊಂದಿರೋ ಏಕೈಕ ಸಾರ್ವಕಾಲಿಕ ಬ್ಯಾಟ್ಸ್​ಮನ್ ಅಂದ್ರೆ ಅದು ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಎಂದು ಸ್ವತಃ ಒಪ್ಪಿಕೊಂಡಿದ್ದಾರೆ.

ಒಟ್ಟಾರೆಯಾಗಿ ನಾನು ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳ ಬಗ್ಗೆ ಹೇಳಬೇಕಾದರೆ ಖಂಡಿತವಾಗಿಯೂ ಸಚಿನ್ ಅದ್ಭುತವಾದ ಟೆಕ್ನಿಕ್ ಹೊಂದಿರುವವರು. ನಾನು ಇಂಗ್ಲೆಂಡ್ ತಂಡದ ಕ್ಯಾಪ್ಟನ್​ ಆಗಿದ್ದಾಗ, ಸಚಿನ್​ನ ಹೇಗೆ ಪೆವಿಲಿಯನ್​ಗೆ ವಾಪಸ್​ ಕಳಿಸೋದರ ಬಗ್ಗೆ ಡ್ರೆಸ್ಸಿಂಗ್ ರೂಮ್​ನಲ್ಲಿ ಅದೆಷ್ಟು ಮೀಟಿಂಗ್​ಗಳನ್ನ ಮಾಡಿದೀನೋ ನನಗೇ ನೆನಪಿಲ್ಲ ಎಂದು ನಾಸಿರ ಹುಸೇನ್​ ಹಂಚಿಕೊಂಡಿದ್ದಾರೆ.

ಇದಲ್ಲದೇ ವೆಸ್ಟ್ ಇಂಡೀಸ್ ತಂಡದ ಮಾಜಿ ಫಾಸ್ಟ್ ಬೌಲರ್ ಇಯಾನ್ ಬಿಷಪ್ ಕೂಡ ನನ್ನ ವೃತ್ತಿ ಜೀವನದಲ್ಲಿ ಎದುರಿಸಿರುವ ಅತ್ಯಂತ ಟಫ್​ ಬ್ಯಾಟ್ಸ್​ಮನ್ ಅಂದ್ರೆ ಅದು ಸಚಿನ್ ಎಂದಿದ್ದಾರೆ. ಒಟ್ನಲ್ಲಿ, ಪಂದ್ಯದಲ್ಲಿ ಭಾರತವನ್ನ ಸೋಲಿಸೋದಕ್ಕಿಂತ ಸಚಿನ್​ರನ್ನ ಹೇಗೆ ಮಣಿಸಬೇಕು ಅನ್ನೋದರ ಬಗ್ಗೆ ಎದುರಾಳಿ ಟೀಂಗಳು ತಲೆಕೆಡಿಸಿಕೊಳ್ಳುತ್ತಿದ್ದರು ಅನ್ನೋದು ಬಟಾಬಯಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ