AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ಚಿನ್ನ ಗೆದ್ದು, ಸಿಹಿ ತಿಂಡಿ ತಂದುಕೊಡುವೆ: ಪ್ರಧಾನಿಗೆ ನೀರಜ್ ಚೋಪ್ರಾ ಭರವಸೆ

Neeraj Chopra: ನೀರಜ್ ಚೋಪ್ರಾ ಪಾವೊ ನೂರ್ಮಿ ಗೇಮ್ಸ್ 2022 ರಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟು ಕೊಂಡಿದ್ದರು. ಅಂದು ಚಿನ್ನ ಗೆದ್ದಿದ್ದ ಒಲಿವರ್ ಹೆಲ್ಯಾಂಡರ್ ಅವರನ್ನು ಈ ಬಾರಿ ಹಿಂದಿಕ್ಕುವಲ್ಲಿ ಭಾರತೀಯ ತಾರೆ ಯಶಸ್ವಿಯಾಗಿದ್ದಾರೆ. ಈ ಮೂಲಕ ಪಾವೊ ನೂರ್ಮಿ ಗೇಮ್ಸ್​ 2024 ರಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಇದೇ ಆತ್ಮ ವಿಶ್ವಾಸದಲ್ಲಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲೂ ಕಣಕ್ಕಿಳಿಯಲಿದ್ದಾರೆ.

Neeraj Chopra: ಚಿನ್ನ ಗೆದ್ದು, ಸಿಹಿ ತಿಂಡಿ ತಂದುಕೊಡುವೆ: ಪ್ರಧಾನಿಗೆ ನೀರಜ್ ಚೋಪ್ರಾ ಭರವಸೆ
PM Modi - Neeraj Chopra
ಝಾಹಿರ್ ಯೂಸುಫ್
|

Updated on: Jul 06, 2024 | 3:12 PM

Share

ಜುಲೈ 26 ರಿಂದ ಶುರುವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್​ಗಾಗಿ ತೆರಳಿರುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಶೇಷ ಸಂವಾದ ನಡೆಸಿದ್ದಾರೆ. ಆನ್​ಲೈನ್​ನಲ್ಲಿ ನಡೆದ ಈ ಸಂವಾದ ವೇಳೆ ಪ್ರಧಾನಿ, ಕಳೆದ ಬಾರಿ ಸಿಹಿ ತಂದು ಕೊಡುತ್ತೇನೆ ಎಂದಿರುವ ತಮ್ಮ ಮಾತನ್ನು ಇನ್ನೂ ಸಹ ಈಡೇರಿಸಿಲ್ಲ ಎಂದು ನೀರಜ್ ಚೋಪ್ರಾಗೆ ನೆನಪಿಸಿದರು.

ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಈ ವೇಳೆ ನಿಮ್ಮ ಮನೆಯಲ್ಲಿ ತಯಾರಿಸಿದ ‘ಚುರ್ಮಾ’ (ಹರಿಯಾಣದ ಜನಪ್ರಿಯ ಸಿಹಿ ತಿಂಡಿ) ತಂದು ಕೊಡಬೇಕೆಂದು ತಿಳಿಸಿದ್ದರು. ಇದೇ ವೇಳೆ ಮುಂದಿನ ಬಾರಿ ತಂದು ಕೊಡುವುದಾಗಿ ನೀರಜ್ ಚೋಪ್ರಾ ಹೇಳಿದ್ದರು.

2020 ರಲ್ಲಿ ನಡೆದ ಈ ಮಾತುಕತೆಯನ್ನು ಇದೀಗ ಪ್ರಧಾನಿ ಮೋದಿ ಮತ್ತೆ ನೆನಪಿಸಿದ್ದಾರೆ. ಈ ವೇಳೆ ಈ ಸಲ ಖಂಡಿತವಾಗಿಯೂ ತಂದು ಕೊಡುತ್ತೇನೆ ಎಂದು ನೀರಜ್ ಚೋಪ್ರಾ ಮಾತು ನೀಡಿದ್ದಾರೆ. ಈ ಸಲ ಪದಕ ಗೆದ್ದು, ನಿಮ್ಮ ಮನೆಯಲ್ಲಿ ತಾಯಿ ತಯಾರಿಸಿದ ಚುರ್ಮಾ ತಂದುಕೊಡಬೇಕೆಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಪ್ರಧಾನಿಯ ಕೋರಿಕೆಗೆ ನೀರಜ್ ಚೋಪ್ರಾ ಒಕೆ ಅಂದಿದ್ದು, ಈ ಸಲ ಚಿನ್ನದ ಪದಕದೊಂದಿಗೆ ಹಿಂತಿರುಗುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ನಿಮಗೆ ಚುರ್ಮಾ ತೆಗೆದುಕೊಂಡು ಬರುವುದಾಗಿ ಪಿಎಂ ನರೇಂದ್ರ ಮೋದಿಗೆ ತಿಳಿಸಿದ್ದಾರೆ.

ಮಗ ಚಿನ್ನದ ಪದಕ ಗೆದ್ದೇ ಗೆಲ್ಲುತ್ತಾನೆ:

ಈ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ ತಾಯಿ ಸರೋಜ ದೇವಿ, ಪ್ಯಾರಿಸ್ ಒಲಿಂಪಿಕ್ಸ್​ನಿಂದ ಮಗ ಚಿನ್ನದ ಪದಕದೊಂದಿಗೆ ಹಿಂತಿರುಗುತ್ತಾನೆ ಎಂಬ ವಿಶ್ವಾಸವಿದೆ. ಅಲ್ಲದೆ ಈ ಬಾರಿ ನಾನೇ ಪ್ರಧಾನಿಗೆ ಸಿಹಿ ತಿಂಡಿ ಕಳುಹಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ನೀರಜ್ ಮತ್ತೊಮ್ಮೆ ಚಿನ್ನದ ಪದಕವನ್ನು ಗೆದ್ದು ಮತ್ತೆ ಪ್ರಧಾನಿ ಮೋದಿಯನ್ನು ಭೇಟಿಯಾಗುವ ಅವಕಾಶವನ್ನು ಪಡೆಯಲಿ ಎಂದು ನಾವು ಬಯಸುತ್ತೇವೆ. ಈ ಬಾರಿ ನಾನು ದೇಸಿ ತುಪ್ಪ ಮತ್ತು ಸಕ್ಕರೆಯಿಂದ ಮಾಡಿದ ವಿಶೇಷ ಚುರ್ಮಾವನ್ನು ಕಳುಹಿಸುತ್ತೇನೆ ಎಂದು ಸರೋಜ್ ದೇವಿ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

7 ​ರಿಂದ 8 ಗಂಟೆ ಪರಿಶ್ರಮ:

ನೀರಜ್​ಗೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ದೇಶವು ಹೆಮ್ಮೆಪಡುವಂತೆ ಮಾಡಲು 100% ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ಈಗಾಗಲೇ ಕಠಿಣ ಪರಿಶ್ರಮದಲ್ಲಿ ನಿರತರಾಗಿದ್ದಾರೆ ಎಂದು ನೀರಜ್ ಚೋಪ್ರಾ ಅವರ ತಂದೆ ಸತೀಶ್ ಚೋಪ್ರಾ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ನೀರಜ್ ಚೋಪ್ರಾ ಗಾಯಗೊಂಡಿದ್ದರು. ಗಾಯದ ಹಿನ್ನಲೆ 63 ನೇ ಒಸ್ಟ್ರಾವ ಗೋಲ್ಡನ್ ಸ್ಪೈಕ್ 2024 ಅಥ್ಲೆಟಿಕ್ಸ್ ಮೀಟ್​ನಿಂದ ಹಿಂದೆ ಸರಿದಿದ್ದರು. ಇದೀಗ ಅವರು ಗಾಯದಿಂದ ಚೇತರಿಸಿಕೊಂಡಿದ್ದಾರೆ ಎಂದು ತಂದೆ ತಿಳಿಸಿದ್ದಾರೆ.

ನೀರಜ್ ಚೋಪ್ರಾ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದೀಗ ಪ್ರತಿನಿತ್ಯ 7 ರಿಂದ 8 ಗಂಟೆಗಳ ಕಾಲ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾರೆ. ಕಳೆದ ಒಲಿಂಪಿಕ್ಸ್‌ಗಿಂತ ಈ ಬಾರಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದು, ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಉತ್ತಮ ಗುರಿ ಮುಟ್ಟುವ ವಿಶ್ವಾಸದಲ್ಲಿದ್ದಾರೆ ಎಂದು ಸತೀಶ್ ಚೋಪ್ರಾ ಹೇಳಿದ್ದಾರೆ.

ಕೆಲ ವಾರಗಳ ಹಿಂದೆಯಷ್ಟೇ  ಫಿನ್‌ಲ್ಯಾಂಡ್‌ನ ಟರ್ಕುದಲ್ಲಿ ನಡೆದ ಪ್ರತಿಷ್ಠಿತ ಪಾವೊ ನೂರ್ಮಿ ಗೇಮ್ಸ್ 2024 ರ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಅತ್ಯುತ್ತಮ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಸ್ಪರ್ಧೆಯಲ್ಲಿ ಅಂತಿಮವಾಗಿ 85.97 ಮೀಟರ್​ ಥ್ರೋನೊಂದಿಗೆ ಚೋಪ್ರಾ ಅಗ್ರಸ್ಥಾನ ಅಲಂಕರಿಸಿದರು.

ಇದನ್ನೂ ಓದಿ: Neeraj Chopra: ಬಂಗಾರದ ಪದಕ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ

ಇದೇ ಆತ್ಮ ವಿಶ್ವಾಸದೊಂದಿಗೆ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್​ನಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಟೋಕಿಯೊ ಒಲಿಂಪಿಕ್ಸ್​ನಲ್ಲಿ 87.58 ಮೀಟರ್ ದೂರಕ್ಕೆ ಭರ್ಜಿ ಎಸೆದು ಚಿನ್ನದ ಪದಕ ಗೆದ್ದಿದ್ದ ಸಾಧನೆಯನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದ್ದಾರೆ.

Follow Us
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ