AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ಇದುವೇ ಉತ್ತರ: ಗುರುವನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ

ಅಥ್ಲೆಟಿಕ್ಸ್‌ ಫೆಡರೇಷನ್​ನ ಈ ಹೇಳಿಕೆ ವೈರಲ್ ಆದ ಬೆನ್ನಲ್ಲೇ ಕಾಶೀನಾಥ್ ನಾಯ್ಕ್ ಅವರು ಸುಳ್ಳು ಹೇಳಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ಇದುವೇ ಉತ್ತರ: ಗುರುವನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ
Neeraj Chopra-Kashinath Naik
TV9 Web
| Updated By: guruganesh bhat|

Updated on:Aug 24, 2021 | 8:52 PM

Share

ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics) ಜಾವೆಲಿನ್​ ಥ್ರೋ ಮೂಲಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ (Neeraj Chopra)   ತಮ್ಮ ಮಾಜಿ ಕೋಚ್ ಕಾಶೀನಾಥ್ ನಾಯ್ಕ್ (Kashinath Naik) ಅವರ ಮನೆಗೆ ಭೇಟಿ ನೀಡಿದ್ದಾರೆ.  ಹೌದು, ನೀರಜ್ ಚೋಪ್ರಾ ಜಪಾನ್​ನಲ್ಲಿ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಕಾಶೀನಾಥ್ ಹೆಸರು ಚಾಲ್ತಿಗೆ ಬಂದಿತ್ತು. ಭಾರತದ ಯುವ ಅಥ್ಲೀಟ್​ನನ್ನು ಸಜ್ಜುಗೊಳಿಸುವಲ್ಲಿ ಕನ್ನಡಿಗನ ಪಾತ್ರ ಕೂಡ ಇದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನೀರಜ್ ಸಾಧನೆ ಹಿಂದಿರುವ ಕನ್ನಡಿಗ ಕಾಶೀನಾಥ್ ನಾಯ್ಕ್ ಅವರಿಗೆ ಕರ್ನಾಟಕ ಸರ್ಕಾರ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಈ ಸುದ್ದಿ ಬೆನ್ನಲ್ಲೇ ಅಥ್ಲೆಟಿಕ್ಸ್‌ ಫೆಡರೇಷನ್‌ ಆಫ್‌ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ನೀರಜ್ ಚೋಪ್ರಾಗೆ ತರಬೇತಿ ನೀಡಿರುವ ಕಾಶೀನಾಥ್ ನಾಯ್ಕ್ ಯಾರೆಂದೇ ಗೊತ್ತಿಲ್ಲ. ಅಂತಹ ಯಾವುದೇ ವ್ಯಕ್ತಿ ತರಬೇತಿ ನೀಡಿಲ್ಲ ಎಂದು ಅಥ್ಲೆಟಿಕ್ಸ್‌ ಫೆಡರೇಷನ್‌ ಆಕ್ಷೇಪ ವ್ಯಕ್ತಪಡಿಸಿತ್ತು. ಕಾಶೀನಾಥ್‌ ಅವರು ತಮ್ಮ ಕೋಚ್‌ ಎಂದು ನೀರಜ್‌ ಚೋಪ್ರಾ ಹೇಳಿಲ್ಲ. ಅಥ್ಲೆಟಿಕ್ಸ್ ಫೆಡರೇಷನ್ ಕೂಡ ಈ ಬಗ್ಗೆ ಖಚಿತಪಡಿಸಿಲ್ಲ. ಹೀಗಿರುವಾಗ ಕರ್ನಾಟಕ ಸರ್ಕಾರ ಕಾಶೀನಾಥ್‌ ನಾಯ್ಕ್​ಗೆ ಹೇಗೆ ಬಹುಮಾನ ಘೋಷಿಸಿದೆ ಎಂದು ಅದಿಲ್ಲೆ ಸುಮರಿವಾಲ್ಲಾ ಪ್ರಶ್ನಿಸಿದ್ದರು.

ಅಥ್ಲೆಟಿಕ್ಸ್‌ ಫೆಡರೇಷನ್​ನ ಈ ಹೇಳಿಕೆ ವೈರಲ್ ಆದ ಬೆನ್ನಲ್ಲೇ ಕಾಶೀನಾಥ್ ನಾಯ್ಕ್ ಅವರು ಸುಳ್ಳು ಹೇಳಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದಾಗ್ಯೂ ಉತ್ತರ ಕನ್ನಡದ ಶಿರಸಿ ಮೂಲದವರಾದ ಕಾಶಿನಾಥ್‌ ನಾಯ್ಕ್‌ ತಾನು 2015-17ರವರೆಗೆ ಪಟಿಯಾಲದ ಸೇನಾ ಕ್ರೀಡಾ ಸಂಕೀರ್ಣದಲ್ಲಿ ನೀರಜ್‌ ಚೋಪ್ರಾಗೆ ತರಬೇತಿ ನೀಡಿರುವುದು ತಿಳಿಸಿದ್ದರು. ಅಲ್ಲದೆ 2010ರ ಕಾಮ್‌ವೆಲ್ತ್‌ ಕ್ರೀಡಾಕೂಟದಲ್ಲಿ ನಾನು ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದೇನೆ. ನೀರಜ್​ಗೆ 6 ವರ್ಷಗಳ ಕಾಲ ಕೋಚಿಂಗ್ ಮಾಡಿರುವ ಬಗ್ಗೆ ಸಾಕ್ಷಿ ಒದಗಿಸಲು ಸಿದ್ದನಿದ್ದೇನೆ ಎಂದು ಕಾಶೀನಾಥ್ ತಿಳಿಸಿದ್ದರು. ನಾನು ಕೋಚ್ ಆಗಿದ್ದೆನೋ ಇಲ್ಲವೋ ಎಂದು ನೀರಜ್ ಚೋಪ್ರಾ ಅವರೇ ಮುಂದೆ ಉತ್ತರ ಕೊಡಲಿದ್ದಾರೆ ಎಂದು ತಿಳಿಸಿದ್ದರು.

ಇದೀಗ ಗುರುವಿನ ನಿರೀಕ್ಷೆ ನಿಜವಾಗಿದೆ. ನೀರಜ್ ಚೋಪ್ರಾ ಉತ್ತರ ಕನ್ನಡದ ಶಿರಸಿ ಮೂಲದ ಕಾಶಿನಾಥ್‌ ನಾಯ್ಕ್‌ ಅವರ ಪುಣೆಯ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ತೆಗೆದುಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಅದರಲ್ಲೂ ಇಡೀ ವಿಶ್ವ ವಿಖ್ಯಾತಿ ಪಡೆದರೂ ಯಾವುದೇ ಅಹಂಕಾರವಿಲ್ಲದೆ, ಸಾಮಾನ್ಯನಂತೆ ಕಾಣಿಸಿಕೊಂಡಿರುವ ನೀರಜ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಈ ಮೂಲಕ ತಮ್ಮ ಮಾಜಿ ಕೋಚ್ ಕಾಶೀನಾಥ್ ನಾಯ್ಕ್ ವಿರುದ್ದ ಕೇಳಿ ಬಂದ ಆರೋಪ, ಆಕ್ಷೇಪ ಮತ್ತು ಸುಳ್ಳುಸುದ್ದಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ ನೀರಜ್ ಚೋಪ್ರಾ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Neeraj Chopra visited to Former coach Kashinath Naik’s home)

Published On - 5:14 pm, Tue, 24 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ