AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ಇದುವೇ ಉತ್ತರ: ಗುರುವನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ

ಅಥ್ಲೆಟಿಕ್ಸ್‌ ಫೆಡರೇಷನ್​ನ ಈ ಹೇಳಿಕೆ ವೈರಲ್ ಆದ ಬೆನ್ನಲ್ಲೇ ಕಾಶೀನಾಥ್ ನಾಯ್ಕ್ ಅವರು ಸುಳ್ಳು ಹೇಳಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಕನ್ನಡಿಗ ಕೋಚ್ ಅಲ್ಲ ಎಂದವರಿಗೆ ಇದುವೇ ಉತ್ತರ: ಗುರುವನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ
Neeraj Chopra-Kashinath Naik
TV9 Web
| Edited By: |

Updated on:Aug 24, 2021 | 8:52 PM

Share

ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics) ಜಾವೆಲಿನ್​ ಥ್ರೋ ಮೂಲಕ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ (Neeraj Chopra)   ತಮ್ಮ ಮಾಜಿ ಕೋಚ್ ಕಾಶೀನಾಥ್ ನಾಯ್ಕ್ (Kashinath Naik) ಅವರ ಮನೆಗೆ ಭೇಟಿ ನೀಡಿದ್ದಾರೆ.  ಹೌದು, ನೀರಜ್ ಚೋಪ್ರಾ ಜಪಾನ್​ನಲ್ಲಿ ಚಿನ್ನ ಗೆಲ್ಲುತ್ತಿದ್ದಂತೆ ಇತ್ತ ಕಾಶೀನಾಥ್ ಹೆಸರು ಚಾಲ್ತಿಗೆ ಬಂದಿತ್ತು. ಭಾರತದ ಯುವ ಅಥ್ಲೀಟ್​ನನ್ನು ಸಜ್ಜುಗೊಳಿಸುವಲ್ಲಿ ಕನ್ನಡಿಗನ ಪಾತ್ರ ಕೂಡ ಇದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನೀರಜ್ ಸಾಧನೆ ಹಿಂದಿರುವ ಕನ್ನಡಿಗ ಕಾಶೀನಾಥ್ ನಾಯ್ಕ್ ಅವರಿಗೆ ಕರ್ನಾಟಕ ಸರ್ಕಾರ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಈ ಸುದ್ದಿ ಬೆನ್ನಲ್ಲೇ ಅಥ್ಲೆಟಿಕ್ಸ್‌ ಫೆಡರೇಷನ್‌ ಆಫ್‌ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ನೀಡಿದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ನೀರಜ್ ಚೋಪ್ರಾಗೆ ತರಬೇತಿ ನೀಡಿರುವ ಕಾಶೀನಾಥ್ ನಾಯ್ಕ್ ಯಾರೆಂದೇ ಗೊತ್ತಿಲ್ಲ. ಅಂತಹ ಯಾವುದೇ ವ್ಯಕ್ತಿ ತರಬೇತಿ ನೀಡಿಲ್ಲ ಎಂದು ಅಥ್ಲೆಟಿಕ್ಸ್‌ ಫೆಡರೇಷನ್‌ ಆಕ್ಷೇಪ ವ್ಯಕ್ತಪಡಿಸಿತ್ತು. ಕಾಶೀನಾಥ್‌ ಅವರು ತಮ್ಮ ಕೋಚ್‌ ಎಂದು ನೀರಜ್‌ ಚೋಪ್ರಾ ಹೇಳಿಲ್ಲ. ಅಥ್ಲೆಟಿಕ್ಸ್ ಫೆಡರೇಷನ್ ಕೂಡ ಈ ಬಗ್ಗೆ ಖಚಿತಪಡಿಸಿಲ್ಲ. ಹೀಗಿರುವಾಗ ಕರ್ನಾಟಕ ಸರ್ಕಾರ ಕಾಶೀನಾಥ್‌ ನಾಯ್ಕ್​ಗೆ ಹೇಗೆ ಬಹುಮಾನ ಘೋಷಿಸಿದೆ ಎಂದು ಅದಿಲ್ಲೆ ಸುಮರಿವಾಲ್ಲಾ ಪ್ರಶ್ನಿಸಿದ್ದರು.

ಅಥ್ಲೆಟಿಕ್ಸ್‌ ಫೆಡರೇಷನ್​ನ ಈ ಹೇಳಿಕೆ ವೈರಲ್ ಆದ ಬೆನ್ನಲ್ಲೇ ಕಾಶೀನಾಥ್ ನಾಯ್ಕ್ ಅವರು ಸುಳ್ಳು ಹೇಳಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದಾಗ್ಯೂ ಉತ್ತರ ಕನ್ನಡದ ಶಿರಸಿ ಮೂಲದವರಾದ ಕಾಶಿನಾಥ್‌ ನಾಯ್ಕ್‌ ತಾನು 2015-17ರವರೆಗೆ ಪಟಿಯಾಲದ ಸೇನಾ ಕ್ರೀಡಾ ಸಂಕೀರ್ಣದಲ್ಲಿ ನೀರಜ್‌ ಚೋಪ್ರಾಗೆ ತರಬೇತಿ ನೀಡಿರುವುದು ತಿಳಿಸಿದ್ದರು. ಅಲ್ಲದೆ 2010ರ ಕಾಮ್‌ವೆಲ್ತ್‌ ಕ್ರೀಡಾಕೂಟದಲ್ಲಿ ನಾನು ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದೇನೆ. ನೀರಜ್​ಗೆ 6 ವರ್ಷಗಳ ಕಾಲ ಕೋಚಿಂಗ್ ಮಾಡಿರುವ ಬಗ್ಗೆ ಸಾಕ್ಷಿ ಒದಗಿಸಲು ಸಿದ್ದನಿದ್ದೇನೆ ಎಂದು ಕಾಶೀನಾಥ್ ತಿಳಿಸಿದ್ದರು. ನಾನು ಕೋಚ್ ಆಗಿದ್ದೆನೋ ಇಲ್ಲವೋ ಎಂದು ನೀರಜ್ ಚೋಪ್ರಾ ಅವರೇ ಮುಂದೆ ಉತ್ತರ ಕೊಡಲಿದ್ದಾರೆ ಎಂದು ತಿಳಿಸಿದ್ದರು.

ಇದೀಗ ಗುರುವಿನ ನಿರೀಕ್ಷೆ ನಿಜವಾಗಿದೆ. ನೀರಜ್ ಚೋಪ್ರಾ ಉತ್ತರ ಕನ್ನಡದ ಶಿರಸಿ ಮೂಲದ ಕಾಶಿನಾಥ್‌ ನಾಯ್ಕ್‌ ಅವರ ಪುಣೆಯ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ತೆಗೆದುಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಅದರಲ್ಲೂ ಇಡೀ ವಿಶ್ವ ವಿಖ್ಯಾತಿ ಪಡೆದರೂ ಯಾವುದೇ ಅಹಂಕಾರವಿಲ್ಲದೆ, ಸಾಮಾನ್ಯನಂತೆ ಕಾಣಿಸಿಕೊಂಡಿರುವ ನೀರಜ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಈ ಮೂಲಕ ತಮ್ಮ ಮಾಜಿ ಕೋಚ್ ಕಾಶೀನಾಥ್ ನಾಯ್ಕ್ ವಿರುದ್ದ ಕೇಳಿ ಬಂದ ಆರೋಪ, ಆಕ್ಷೇಪ ಮತ್ತು ಸುಳ್ಳುಸುದ್ದಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ ನೀರಜ್ ಚೋಪ್ರಾ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Neeraj Chopra visited to Former coach Kashinath Naik’s home)

Published On - 5:14 pm, Tue, 24 August 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​