AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಡ್ರೀಮ್‌ 11 ಬ್ಯಾನ್ : ಬೇಸರ ಪಟ್ಟದ್ದಕ್ಕಿಂತ ಸಂಭ್ರಮಿಸಿದವರೇ ಹೆಚ್ಚು!

ಕರ್ನಾಟಕದಲ್ಲಿ ತನ್ನ ಕಾರ್ಯಾಚರಣೆಯನ್ನು ಫ್ಯಾಂಟಸಿ ಗೇಮ್ ಸಂಸ್ಥೆ ಡ್ರೀಮ್ 11 ಸ್ಥಗಿತಗೊಳಿಸಿದೆ. ಮುಂಬೈ ಮೂಲದ ಡ್ರೀಮ್‌ 11 ಸಂಸ್ಥೆ ಕರ್ನಾಟಕದಲ್ಲಿ ಜಾರಿಯಾಗಿರುವ ಆನ್‌ಲೈನ್‌ ಜೂಜು ನಿಷೇಧ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಅನ್ನೋ ದೂರು ದಾಖಲಾಗಿತ್ತು.

ಕರ್ನಾಟಕದಲ್ಲಿ ಡ್ರೀಮ್‌ 11 ಬ್ಯಾನ್ : ಬೇಸರ ಪಟ್ಟದ್ದಕ್ಕಿಂತ ಸಂಭ್ರಮಿಸಿದವರೇ ಹೆಚ್ಚು!
ಡ್ರೀಮ್‌ 11
TV9 Web
| Updated By: ಪೃಥ್ವಿಶಂಕರ|

Updated on: Oct 11, 2021 | 3:49 PM

Share

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ‘ಡ್ರೀಮ್‌ 11’ ಕರ್ನಾಟಕದಲ್ಲಿ ತನ್ನ ಸೇವೆ ಸ್ಥಗಿತಗೊಳಿಸಿದ್ದು, ಇದಕ್ಕೆ ಬೇಸರ ಪಟ್ಟವರ ಸಂಖ್ಯೆಗಿಂತ ಸಂಬ್ರಮಿಸಿದವರ ಸಂಖ್ಯೆಯೇ ಹೆಚ್ಚು. ಕಂಪನಿಯ ಸಂಸ್ಥಾಪಕರ ಮೇಲೆ 2 ದಿನದ ಹಿಂದೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ, ‘ಡ್ರೀಮ್‌ 11’ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. #ಡ್ರೀಮ್11ಸ್ಥಗಿತ ಅಡಿಯಲ್ಲಿ ಸಾಮಾಜಿಕ ಜಾಲತಾಣ ‘ಕೂ’ ನಲ್ಲಿ ಪ್ರತ್ರಿಕ್ರಿಯಿಸಿರುವ ಅನೇಕ ಜನರು ಇದೊಂದು ಉತ್ತಮ ನಿರ್ಧಾರ ಎಂದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ರಕ್ತಬೀಜಾಸುರನಂತೆ, ಜೂಜು ಸಾಯುವುದು ಸುಲಭವಲ್ಲ ಇನ್ನೊಂದು, ಮತ್ತೊಂದು, ಮಗದೊಂದು ರೂಪ ತಳೆದು ಬಂದೇ ಬರುತ್ತದೆ, ರಕ್ತ ರುಚಿಯ ಸವಿದ ಕಾಡು ಮೃಗ ಊರಿಗೆ ನುಗ್ಗಿದಂತೆ! ಕಣ್ಣೊರೆಸುವ ತಂತ್ರ, ಹುಶಾರಾಗಿರಬೇಕಷ್ಟೆ!’ ಎಂದು ಮಂಜುನಾಥ್ ಪಾಪಣ್ಣ ಕೂ ಮಾಡಿದ್ದಾರೆ.

‘ಆನ್ಲೈನ್ ಜೂಜಿನ ಜಾಹೀರಾತು ಮಾಡುವವರ ಮೇಲೆ ಹೋರಾಟಗಾರರು ಮುರಕೊಂಡು ಬೀಳೋರು, ಅವರ ಉದ್ದೇಶವೂ ಸರಿಯಾಗಿತ್ತು. ಈಗ ಸರ್ಕಾರದ ಈ ನಿರ್ಧಾರ ಭೇಷ್ ಎನ್ನಿಸಿಕೊಳ್ಳುವಂತಿದೆ’ ಎಂದು ಸುನಿಲ್ ಎನ್ನುವರು ಹೇಳಿದ್ದಾರೆ.

‘ಮಹಾಭಾರತಕ್ಕೆ ಕಾರಣವು ಜೂಜೆ ಎಷ್ಟೋ ಜನರ ಜೀವನ ಹಾಳಾಗುವುದಕ್ಕೆ ಕಾರಣ ಜೂಜು. ಸರ್ಕಾರ ಆನ್ಲೈನ್ ಜೂಜು ನಿಷೇದ ಮಾಡಿರುವುದು ಒಳ್ಳೆಯ ವಿಚಾರ. ನನ್ನ ಸ್ನೇಹಿತನನ್ನು ಈ ಜೂಜಿನಿಂದ ಕಳೆದುಕೊಂಡಿದ್ದೇನೆ. ಆದ್ದರಿಂದ ಈ ನಿರ್ಧಾರ ತುಂಬಾ ಖುಷಿ ತಂದಿದೆ. ಇದು ಇನ್ನಷ್ಟೇ ತರಹದ ಜೂಜಿನ ಮೇಲೆ ಇದು ಅನ್ವಯವಾಗಲಿ’ ಎಂದು ಕಾರ್ತಿಕ್ ಎನ್ನುವವರು ಆಶಯ ವ್ಯಕ್ತಪಡಿಸಿದ್ದಾರೆ.

‘ಕರ್ನಾಟಕದಲ್ಲಿ ತನ್ನ ಕಾರ್ಯಾಚರಣೆಯನ್ನು ಫ್ಯಾಂಟಸಿ ಗೇಮ್ ಸಂಸ್ಥೆ ಡ್ರೀಮ್ 11 ಸ್ಥಗಿತಗೊಳಿಸಿದೆ. ಮುಂಬೈ ಮೂಲದ ಡ್ರೀಮ್‌ 11 ಸಂಸ್ಥೆ ಕರ್ನಾಟಕದಲ್ಲಿ ಜಾರಿಯಾಗಿರುವ ಆನ್‌ಲೈನ್‌ ಜೂಜು ನಿಷೇಧ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಅನ್ನೋ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಡ್ರೀಮ್‌ 11 ಕನ್ನಡಿಗರಿಗೆ ನಿರ್ಬಂಧ ವಿಧಿಸಿದೆ. ಕರ್ನಾಟಕದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರುವ ಬಳಕೆದಾರರು ಡ್ರೀಮ್ 11 ನಲ್ಲಿ ನಗದು ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ಮೇಘಶ್ರೀ.

ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು