AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಡ್ರೀಮ್‌ 11 ಬ್ಯಾನ್ : ಬೇಸರ ಪಟ್ಟದ್ದಕ್ಕಿಂತ ಸಂಭ್ರಮಿಸಿದವರೇ ಹೆಚ್ಚು!

ಕರ್ನಾಟಕದಲ್ಲಿ ತನ್ನ ಕಾರ್ಯಾಚರಣೆಯನ್ನು ಫ್ಯಾಂಟಸಿ ಗೇಮ್ ಸಂಸ್ಥೆ ಡ್ರೀಮ್ 11 ಸ್ಥಗಿತಗೊಳಿಸಿದೆ. ಮುಂಬೈ ಮೂಲದ ಡ್ರೀಮ್‌ 11 ಸಂಸ್ಥೆ ಕರ್ನಾಟಕದಲ್ಲಿ ಜಾರಿಯಾಗಿರುವ ಆನ್‌ಲೈನ್‌ ಜೂಜು ನಿಷೇಧ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಅನ್ನೋ ದೂರು ದಾಖಲಾಗಿತ್ತು.

ಕರ್ನಾಟಕದಲ್ಲಿ ಡ್ರೀಮ್‌ 11 ಬ್ಯಾನ್ : ಬೇಸರ ಪಟ್ಟದ್ದಕ್ಕಿಂತ ಸಂಭ್ರಮಿಸಿದವರೇ ಹೆಚ್ಚು!
ಡ್ರೀಮ್‌ 11
TV9 Web
| Edited By: |

Updated on: Oct 11, 2021 | 3:49 PM

Share

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ‘ಡ್ರೀಮ್‌ 11’ ಕರ್ನಾಟಕದಲ್ಲಿ ತನ್ನ ಸೇವೆ ಸ್ಥಗಿತಗೊಳಿಸಿದ್ದು, ಇದಕ್ಕೆ ಬೇಸರ ಪಟ್ಟವರ ಸಂಖ್ಯೆಗಿಂತ ಸಂಬ್ರಮಿಸಿದವರ ಸಂಖ್ಯೆಯೇ ಹೆಚ್ಚು. ಕಂಪನಿಯ ಸಂಸ್ಥಾಪಕರ ಮೇಲೆ 2 ದಿನದ ಹಿಂದೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ, ‘ಡ್ರೀಮ್‌ 11’ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. #ಡ್ರೀಮ್11ಸ್ಥಗಿತ ಅಡಿಯಲ್ಲಿ ಸಾಮಾಜಿಕ ಜಾಲತಾಣ ‘ಕೂ’ ನಲ್ಲಿ ಪ್ರತ್ರಿಕ್ರಿಯಿಸಿರುವ ಅನೇಕ ಜನರು ಇದೊಂದು ಉತ್ತಮ ನಿರ್ಧಾರ ಎಂದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ರಕ್ತಬೀಜಾಸುರನಂತೆ, ಜೂಜು ಸಾಯುವುದು ಸುಲಭವಲ್ಲ ಇನ್ನೊಂದು, ಮತ್ತೊಂದು, ಮಗದೊಂದು ರೂಪ ತಳೆದು ಬಂದೇ ಬರುತ್ತದೆ, ರಕ್ತ ರುಚಿಯ ಸವಿದ ಕಾಡು ಮೃಗ ಊರಿಗೆ ನುಗ್ಗಿದಂತೆ! ಕಣ್ಣೊರೆಸುವ ತಂತ್ರ, ಹುಶಾರಾಗಿರಬೇಕಷ್ಟೆ!’ ಎಂದು ಮಂಜುನಾಥ್ ಪಾಪಣ್ಣ ಕೂ ಮಾಡಿದ್ದಾರೆ.

‘ಆನ್ಲೈನ್ ಜೂಜಿನ ಜಾಹೀರಾತು ಮಾಡುವವರ ಮೇಲೆ ಹೋರಾಟಗಾರರು ಮುರಕೊಂಡು ಬೀಳೋರು, ಅವರ ಉದ್ದೇಶವೂ ಸರಿಯಾಗಿತ್ತು. ಈಗ ಸರ್ಕಾರದ ಈ ನಿರ್ಧಾರ ಭೇಷ್ ಎನ್ನಿಸಿಕೊಳ್ಳುವಂತಿದೆ’ ಎಂದು ಸುನಿಲ್ ಎನ್ನುವರು ಹೇಳಿದ್ದಾರೆ.

‘ಮಹಾಭಾರತಕ್ಕೆ ಕಾರಣವು ಜೂಜೆ ಎಷ್ಟೋ ಜನರ ಜೀವನ ಹಾಳಾಗುವುದಕ್ಕೆ ಕಾರಣ ಜೂಜು. ಸರ್ಕಾರ ಆನ್ಲೈನ್ ಜೂಜು ನಿಷೇದ ಮಾಡಿರುವುದು ಒಳ್ಳೆಯ ವಿಚಾರ. ನನ್ನ ಸ್ನೇಹಿತನನ್ನು ಈ ಜೂಜಿನಿಂದ ಕಳೆದುಕೊಂಡಿದ್ದೇನೆ. ಆದ್ದರಿಂದ ಈ ನಿರ್ಧಾರ ತುಂಬಾ ಖುಷಿ ತಂದಿದೆ. ಇದು ಇನ್ನಷ್ಟೇ ತರಹದ ಜೂಜಿನ ಮೇಲೆ ಇದು ಅನ್ವಯವಾಗಲಿ’ ಎಂದು ಕಾರ್ತಿಕ್ ಎನ್ನುವವರು ಆಶಯ ವ್ಯಕ್ತಪಡಿಸಿದ್ದಾರೆ.

‘ಕರ್ನಾಟಕದಲ್ಲಿ ತನ್ನ ಕಾರ್ಯಾಚರಣೆಯನ್ನು ಫ್ಯಾಂಟಸಿ ಗೇಮ್ ಸಂಸ್ಥೆ ಡ್ರೀಮ್ 11 ಸ್ಥಗಿತಗೊಳಿಸಿದೆ. ಮುಂಬೈ ಮೂಲದ ಡ್ರೀಮ್‌ 11 ಸಂಸ್ಥೆ ಕರ್ನಾಟಕದಲ್ಲಿ ಜಾರಿಯಾಗಿರುವ ಆನ್‌ಲೈನ್‌ ಜೂಜು ನಿಷೇಧ ಕಾಯ್ದೆಯನ್ನು ಉಲ್ಲಂಘಿಸುತ್ತಿದೆ ಅನ್ನೋ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಡ್ರೀಮ್‌ 11 ಕನ್ನಡಿಗರಿಗೆ ನಿರ್ಬಂಧ ವಿಧಿಸಿದೆ. ಕರ್ನಾಟಕದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರುವ ಬಳಕೆದಾರರು ಡ್ರೀಮ್ 11 ನಲ್ಲಿ ನಗದು ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ಮೇಘಶ್ರೀ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ