AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬುದನ್ನು ಊಹಿಸಲಾಗುತ್ತಿಲ್ಲ.. ಬಡ ಜನರಿಗೆ ನನ್ನ ನೆರವು; ಹನುಮಾ ವಿಹಾರಿ

ನಾನು ನನ್ನನ್ನು ಹೊಗಳಿಕೊಳಲ್ಲು ಬಯಸುವುದಿಲ್ಲ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯದ ಅಗತ್ಯವಿರುವ ಬಡ ಜನರಿಗೆ ಸಹಾಯ ಮಾಡಲು ನಾನು ಈ ಕೆಲಸವನ್ನು ಮಾಡುತ್ತಿದ್ದೇನೆ.

ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂಬುದನ್ನು ಊಹಿಸಲಾಗುತ್ತಿಲ್ಲ.. ಬಡ ಜನರಿಗೆ ನನ್ನ ನೆರವು; ಹನುಮಾ ವಿಹಾರಿ
ಹನುಮಾ ವಿಹಾರಿ
ಪೃಥ್ವಿಶಂಕರ
|

Updated on: May 14, 2021 | 7:38 PM

Share

ಕೊರೊನಾ ವೈರಸ್​ನ ಎರಡನೇ ಅಲೆಯಿಂದ ಭಾರತ ಸಂಪೂರ್ಣವಾಗಿ ನಲುಗಿ ಹೋಗಿದೆ. ಈ ಸಾಂಕ್ರಾಮಿಕ ರೋಗದಿಂದ ಪ್ರತಿದಿನ ಹಲವಾರು ಸಾವಿರ ಜನರು ಸೋಂಕಿಗೆ ಒಳಗಾಗುತ್ತಿದ್ದಾರೆ. ಅಗತ್ಯ ಔಷಧಿಗಳು ಮತ್ತು ಆಮ್ಲಜನಕದ ಕೊರತೆಯಿಂದ ಈ ಬಿಕ್ಕಟ್ಟು ಉಲ್ಬಣಗೊಂಡಿದೆ. ಈ ಕಾರಣದಿಂದಾಗಿ, ಪ್ರತಿದಿನ ಸಾವಿರಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಜನರಿಗೆ ಸಹಾಯ ಮಾಡಲು ಅನೇಕ ಜನರು ಮುಂದೆ ಬಂದಿದ್ದಾರೆ. ಕ್ರೀಡಾ ಜಗತ್ತಿನಲ್ಲಿ ಹಲವಾರು ಆಟಗಾರರು ತಮ್ಮ ಸಾಮಥ್ರ್ಯಕ್ಕೆ ತಕ್ಕಂತೆ ಸಹಾಯ ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಭಾರತದ ಬ್ಯಾಟ್ಸ್‌ಮನ್ ಹನುಮಾ ವಿಹಾರಿ ಕೂಡ ಅವರಲ್ಲಿ ಒಬ್ಬರು ವಿಹಾರಿ ಬಡ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ಇಂಗ್ಲಿಷ್ ಕೌಂಟಿ ವಾರ್ವಿಕ್‌ಷೈರ್ ಪರ ಆಡಲು ವಿಹಾರಿ ಏಪ್ರಿಲ್ ಆರಂಭದಲ್ಲಿ ಇಂಗ್ಲೆಂಡ್‌ಗೆ ತೆರಳಿದ್ದರು. ಅದೇ ಸಮಯದಲ್ಲಿ, ಭಾರತದಲ್ಲಿ ಕೊರೊನಾ ಪ್ರಕರಣಗಳು ಸಹ ಕ್ರಮೇಣ ಹೆಚ್ಚಾಗಲು ಪ್ರಾರಂಭಿಸಿದವು. ಹನುಮಾ ವಿಹಾರಿ ತನ್ನ ಟ್ವಿಟ್ಟರ್ ಹ್ಯಾಂಡಲ್ ಸಹಾಯದಿಂದ 100 ಸ್ವಯಂಸೇವಕರ ತಂಡವನ್ನು ಸಿದ್ಧಪಡಿಸಿದ್ದಾರೆ. ಇವರಲ್ಲಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಸ್ನೇಹಿತರು ಸೇರಿದ್ದಾರೆ. ನಾನು ನನ್ನನ್ನು ಹೊಗಳಿಕೊಳಲ್ಲು ಬಯಸುವುದಿಲ್ಲ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯದ ಅಗತ್ಯವಿರುವ ಬಡ ಜನರಿಗೆ ಸಹಾಯ ಮಾಡಲು ನಾನು ಈ ಕೆಲಸವನ್ನು ಮಾಡುತ್ತಿದ್ದೇನೆ. ಇದು ಪ್ರಾರಂಭ ಮಾತ್ರ ಎಂದು ವಿಹಾರಿ ಹೇಳಿದ್ದಾರೆ.

ದೇಶದ ಪರಿಸ್ಥಿತಿಯಿಂದ ಆಘಾತಕ್ಕೊಳಗಾಗಿದ್ದೇನೆ ಕೊರೊನಾದ ಎರಡನೇ ಅಲೆಯಲ್ಲಿ, ಜನರು ಆಸ್ಪತ್ರೆಯಲ್ಲಿ ಹಾಸಿಗೆ ಪಡೆಯಲು ಕಷ್ಟವಾಗುತ್ತಿದೆ. ಎರಡನೇ ಅಲೆ ಎಷ್ಟು ಪ್ರಬಲವಾಗಿದೆ ಎಂದರೆ ಆಸ್ಪತ್ರೆಯಲ್ಲಿ ಹಾಸಿಗೆ ಪಡೆಯುವುದು ತುಂಬಾ ಕಷ್ಟಕರವಾಗುತ್ತಿದೆ. ಅದಕ್ಕಾಗಿಯೇ ನಾನು ಹೆಚ್ಚು ಹೆಚ್ಚು ಜನರಿಗೆ ಸಹಾಯ ಮಾಡಲು ನನ್ನ ಅನುಯಾಯಿಗಳನ್ನು ಸ್ವಯಂಸೇವಕರಾಗಿ ಬಳಸುತ್ತಿದ್ದೇನೆ. ವಿಶೇಷವಾಗಿ ಪ್ಲಾಸ್ಮಾ, ಹಾಸಿಗೆ ಅಥವಾ ಅಗತ್ಯವಾದ ಔಷಧಿಗಳನ್ನು ಪಡೆಯಲು ಸಾಧ್ಯವಾಗದವರನ್ನು ತಲುಪುವುದು ನನ್ನ ಗುರಿ. ಆದರೆ ಇದು ಸಾಕಾಗುವುದಿಲ್ಲ. ಭವಿಷ್ಯದಲ್ಲಿ ಹೆಚ್ಚಿನ ಸೇವೆಗಳನ್ನು ಮಾಡಲು ನಾನು ಬಯಸುತ್ತೇನೆ ಎಂದರು.

ಹನುಮಾ ವಿಹಾರಿ ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧ ಭಾರತದ ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ವಿಹಾರಿ ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ. ಐದು ಟೆಸ್ಟ್ ಸರಣಿಯ ಸಮಯದಲ್ಲಿ ಇನ್ನಿಂಗ್ಸ್ ಪ್ರಾರಂಭಿಸಲು ನಾನು ಸಿದ್ದ ಎಂದು ವಿಹಾರಿ ಹೇಳಿದರು. ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್‌ನಲ್ಲಿ ಗಾಯಗೊಂಡಿದ್ದರೂ ಮೂರೂವರೆ ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ ವಿಹಾರಿ, ತಂಡವು ನನಗೆ ವಹಿಸುವ ಯಾವುದೇ ಪಾತ್ರವನ್ನು ನಿರ್ವಹಿಸಲು ನಾನು ಸಿದ್ಧನಾಗುತ್ತೇನೆ ಎಂದು ಹೇಳಿದರು. ನಾನು ಹೆಚ್ಚಿನ ಸಮಯ ಟಾಪ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಮಾಡಿದ್ದೇನೆ, ಆದ್ದರಿಂದ ಈ ಸವಾಲಿನ ಬಗ್ಗೆ ನನಗೆ ತಿಳಿದಿದೆ ಎಂದರು.

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು