AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿಗೆ ಇಂತ ಅವಮಾನವಾ! ಸಭ್ಯರೆನಿಸಿಕೊಂಡಿದ್ದ ನ್ಯೂಜಿಲೆಂಡಿಗರು ಮಾಡಿದ್ದು ಎಂತ ನೀಚ ಕೆಲಸ ಗೊತ್ತಾ?

Virat Kohli: ಈ ಚಿತ್ರದಲ್ಲಿರುವ ಹುಡುಗಿಯನ್ನು ಕೈಲ್ ಜಾಮಿಸನ್ ಎಂದು ವಿವರಿಸಲಾಗಿದ್ದು, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕುತ್ತಿಗೆಗೆ ಪಟ್ಟಿ ಕಟ್ಟಿಕೊಂಡಿರುವ ವ್ಯಕ್ತಿ ಎಂಬಂತೆ ಬಿಂಬಿಸಲಾಗಿ

Virat Kohli: ಕೊಹ್ಲಿಗೆ ಇಂತ ಅವಮಾನವಾ! ಸಭ್ಯರೆನಿಸಿಕೊಂಡಿದ್ದ ನ್ಯೂಜಿಲೆಂಡಿಗರು ಮಾಡಿದ್ದು ಎಂತ ನೀಚ ಕೆಲಸ ಗೊತ್ತಾ?
ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Jun 25, 2021 | 2:50 PM

Share

ಕ್ರಿಕೆಟ್ ಜಗತ್ತಿನಲ್ಲಿ, ನ್ಯೂಜಿಲೆಂಡ್ ಕ್ರಿಕೆಟಿಗರನ್ನು ಸಭ್ಯಸ್ಥರು ಎಂಬುದು ಸಾಕಷ್ಟು ಬಾರಿ ಸಾಭೀತಾಗಿದೆ. ಸೌತಾಂಪ್ಟನ್‌ನಲ್ಲಿ ಆಡಿದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಶೀರ್ಷಿಕೆ ಪಂದ್ಯ ಪ್ರಾರಂಭವಾಗುವ ಮೊದಲೇ ಭಾರತದ ನಾಯಕ ವಿರಾಟ್ ಕೊಹ್ಲಿಗೆ ಇದರ ಬಗ್ಗೆ ಪ್ರಶ್ನೆ ಕೇಳಲಾಯಿತು. ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆಟಗಾರರು ಅತ್ಯಂತ ಸಭ್ಯ ಸ್ವಭಾವದವರಾಗಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಕೊಹ್ಲಿ ಕೂಡ ಉತ್ತರಿಸಿದ್ದರು. ಆದರೆ ನ್ಯೂಜಿಲೆಂಡ್​ನ ವೆಬ್‌ಸೈಟ್​ಗೆ ಈ ಮಾತು ಅನ್ವಹಿಸುವುದಿಲ್ಲ. ತನ್ನ ವಿಜಯದ ಬಗ್ಗೆ ಹೆಮ್ಮೆಪಡುತ್ತಿರುವ ಅವರು ಮುಜುಗರದ ಎಲ್ಲ ಮಿತಿಗಳನ್ನು ದಾಟಿದ್ದಾರೆ. ಫೈನಲ್‌ನಲ್ಲಿ ನ್ಯೂಜಿಲೆಂಡ್‌ನ ವಿಜಯದ ನಂತರ ನ್ಯೂಜಿಲೆಂಡ್‌ನ ವೆಬ್‌ಸೈಟ್ ಎಸಿಸಿಎನ್​ಝಡ್ (accnz)ಭಾರತೀಯ ಕ್ರಿಕೆಟರ್​ಗೆ ಅವಮಾನಿಸುವಂತಹ ಚಿತ್ರವನ್ನು ಪೋಸ್ಟ್ ಮಾಡಿದೆ.

ಕೊಹ್ಲಿಗೆ ಮಹಾ ಅವಮಾನ ವಾಸ್ತವವಾಗಿ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಎಂಟು ವಿಕೆಟ್‌ಗಳಿಂದ ಸೋತಿದೆ. ಇದರ ನಂತರ, ಈ ನ್ಯೂಜಿಲೆಂಡ್ ವೆಬ್‌ಸೈಟ್ ತನ್ನ ಇನ್ಸ್ಟಾಗ್ರಾಮ್ ಪುಟದಲ್ಲಿ ಅಂತಹ ಚಿತ್ರವನ್ನು ಪೋಸ್ಟ್ ಮಾಡಿದೆ. ಇದರಲ್ಲಿ ಹುಡುಗಿಯೊಬ್ಬಳು ಪುರುಷನ ಕುತ್ತಿಗೆಗೆ ದಾರವನ್ನು ಕಟ್ಟಿ ಅದನ್ನು ತನ್ನ ಕೈನಲ್ಲಿ ಹಿಡಿದುಕೊಂಡಿದ್ದಾಳೆ. ಈ ಚಿತ್ರದಲ್ಲಿರುವ ಹುಡುಗಿಯನ್ನು ಕೈಲ್ ಜಾಮಿಸನ್ ಎಂದು ವಿವರಿಸಲಾಗಿದ್ದು, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕುತ್ತಿಗೆಗೆ ಪಟ್ಟಿ ಕಟ್ಟಿಕೊಂಡಿರುವ ವ್ಯಕ್ತಿ ಎಂಬಂತೆ ಬಿಂಬಿಸಲಾಗಿದೆ.

ಫೈನಲ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ವಿರಾಟ್, ಜಾಮಿಸನ್​ಗೆ ಬಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ವೇಗದ ಬೌಲರ್ ಜಾಮಿಸನ್, ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಿದ್ದಾರೆ ಎಂದು ಈ ಕಳಪೆ ಚಿತ್ರ ಸೂಚಿಸುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಬಿಜೆ ವಾಟ್ಲಿಂಗ್ ವಿಕೆಟ್‌ನ ಹಿಂದೆ ಕ್ಯಾಚ್ ಹಿಡಿದು ಕೊಹ್ಲಿಯನ್ನು ಪೆವಿಲಿಯನ್‌ಗೆ ಕಳುಹಿಸಿದರು. ಈ ಪಂದ್ಯದಲ್ಲಿ, ಜಾಮಿಸನ್ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬರು ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ದಾರಿ ತೋರಿಸಿದರು. ಹೀಗಾಗಿ ಜಾಮಿಸನ್​ಗೆ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಒಲಿಯಿತು. ಸಹಜವಾಗಿ, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಿದೆ, ಆದರೆ ಇದರ ಹೊರತಾಗಿಯೂ, ನ್ಯೂಜಿಲೆಂಡ್‌ನ ಈ ವೆಬ್‌ಸೈಟ್‌ನ ಈ ಅಸಹ್ಯಕರ ಕೃತ್ಯವನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಈ ವೆಬ್‌ಸೈಟ್ ಇನ್‌ಸ್ಟಾಗ್ರಾಮ್‌ನಲ್ಲಿ 45 ಸಾವಿರ ಅನುಯಾಯಿಗಳನ್ನು ಹೊಂದಿದೆ.

Published On - 2:50 pm, Fri, 25 June 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ