AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಜನಾಂಗೀಯ ನಿಂದನೆಗೆ ಬೇಸತ್ತು ಸೋಷಿಯಲ್ ಮೀಡಿಯಾ ತೊರೆದ ಖ್ಯಾತ ಫುಟ್ಬಾಲ್ ಆಟಗಾರ! ಬೇಸರದಿಂದ ಹೇಳಿದ್ದೇನು?

ಈ ಅಸಹ್ಯಕರ ಸಂಗತಿಗಳು ಪ್ರತಿದಿನ ನನ್ನ ಫೋನ್‌ನಲ್ಲಿ ಸಂದೇಶದಂತೆ ಬರುತ್ತವೆ. ಇದು ನನಗೆ ತುಂಬಾ ನೋವುಂಟು ಮಾಡಿದೆ. ಅದರ ಬಗ್ಗೆ ಮಾತನಾಡಲು ತುಂಬಾ ನೋವಾಗುತ್ತದೆ.

ನೆಟ್ಟಿಗರ ಜನಾಂಗೀಯ ನಿಂದನೆಗೆ ಬೇಸತ್ತು ಸೋಷಿಯಲ್ ಮೀಡಿಯಾ ತೊರೆದ ಖ್ಯಾತ ಫುಟ್ಬಾಲ್ ಆಟಗಾರ! ಬೇಸರದಿಂದ ಹೇಳಿದ್ದೇನು?
ವಿಲ್ಲೋಕ್
TV9 Web
| Edited By: |

Updated on: Aug 19, 2021 | 6:22 PM

Share

ಇತ್ತೀಚೆಗೆ ಆರ್ಸೆನಲ್ ಬಿಟ್ಟು ನ್ಯೂ ಕ್ಯಾಸಲ್ ಯುನೈಟೆಡ್ ತಂಡ ಸೇರಿದ ವಿಲ್ಲೋಕ್ ಈ ದಿನಗಳಲ್ಲಿ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ವರ್ಗಾವಣೆಯಲ್ಲ ಬದಲಾಗಿ ಸೋಷಿಯಲ್ ಮೀಡಿಯಾಕ್ಕೆ ಗುಡ್​ಬೈ ಹೇಳಿರುವುದು. ಮಾಜಿ ಆರ್ಸೆನಲ್ ಮಿಡ್‌ಫೀಲ್ಡರ್ ಅಭಿಮಾನಿಗಳ ಜನಾಂಗೀಯ ಟೀಕೆಗಳಿಂದ ಅಸಮಾಧಾನಗೊಂಡ ನಂತರ ಸೋಷಿಯಲ್ ಮೀಡಿಯಾ ಬಿಡಲು ನಿರ್ಧರಿಸಿದ್ದಾರೆ. ಇದನ್ನು ಅವರು ಬಿಬಿಸಿ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಜೋ 2017-18ರಲ್ಲಿ ಆರ್ಸೆನಲ್‌ಗೆ ಪಾದಾರ್ಪಣೆ ಮಾಡಿದರು. ಅವರು ಆರ್ಸೆನಲ್‌ ಪರ 78 ಪಂದ್ಯಗಳಲ್ಲಿ 11 ಗೋಲುಗಳನ್ನು ಗಳಿಸಿದರು. ಇದರ ನಂತರ ಅವರು ನ್ಯೂ ಕ್ಯಾಸಲ್ ಯುನೈಟೆಡ್‌ಗೆ ಸೇರ್ಪಡೆಗೊಂಡರು. ಈ ಅವಧಿಯಲ್ಲಿ ಅವರು 14 ಪಂದ್ಯಗಳಲ್ಲಿ ಎಂಟು ಗೋಲುಗಳನ್ನು ಗಳಿಸಿದರು.

ಸೋಷಿಯಲ್ ಮೀಡಿಯಾಕ್ಕೆ ಗುಡ್​ಬೈ ಜೋ ಸೋಷಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಜನಾಂಗೀಯ ಟೀಕೆಗಳನ್ನು ಎದುರಿಸುತ್ತಿದ್ದರು, ಈ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾವನ್ನು ತೊರೆದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ದಿನಗಳಲ್ಲಿ ನಾವು ವಿಷಯಗಳನ್ನು ನಿರ್ಲಕ್ಷಿಸಬಹುದು ಮತ್ತು ಅವುಗಳನ್ನು ಬಿಟ್ಟುಬಿಡಬಹುದು ಎಂದು ನಾನು ಭಾವಿಸುತ್ತೇನೆ. ಈ ಅಸಹ್ಯಕರ ಸಂಗತಿಗಳು ಪ್ರತಿದಿನ ನನ್ನ ಫೋನ್‌ನಲ್ಲಿ ಸಂದೇಶದಂತೆ ಬರುತ್ತವೆ. ಇದು ನನಗೆ ತುಂಬಾ ನೋವುಂಟು ಮಾಡಿದೆ. ಅದರ ಬಗ್ಗೆ ಮಾತನಾಡಲು ತುಂಬಾ ನೋವಾಗುತ್ತದೆ. ಸೋಷಿಯಲ್ ಮೀಡಿಯಾವನ್ನು ತೊರೆಯುವ ಮೂಲಕ, ನನ್ನನ್ನು ತುಂಬಾ ಪ್ರೀತಿಸುವ ನನ್ನ ಅಭಿಮಾನಿಗಳಿಂದ ನಾನು ದೂರವಿರುತ್ತೇನೆ ಎಂದು ನನಗೆ ತಿಳಿದಿದೆ ಎಂದಿದ್ದಾರೆ.

ಯೂರೋ ಕಪ್‌ನಲ್ಲಿ ಆಟಗಾರರು ಜನಾಂಗೀಯ ಟೀಕೆಗಳಿಗೆ ಬಲಿಯಾಗಿದ್ದಾರೆ ಯುರೋಪಿಯನ್ ಫುಟ್ಬಾಲ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದಲ್ಲಿ, ಅನೇಕ ಆಟಗಾರರು ಜನಾಂಗೀಯ ಟೀಕೆಗಳನ್ನು ಎದುರಿಸಬೇಕಾಯಿತು. ಇಟಲಿಯ ವಿರುದ್ಧ ಪೆನಾಲ್ಟಿ ಶೂಟೌಟ್ ತಪ್ಪಿಸಿಕೊಂಡ ಇಂಗ್ಲೆಂಡ್‌ನ ಎಲ್ಲಾ ಮೂವರು ಕಪ್ಪು ಆಟಗಾರರು ಸಾಮಾಜಿಕ ಮಾಧ್ಯಮದಲ್ಲಿ ಜನಾಂಗೀಯ ಟೀಕೆಗಳನ್ನು ಎದುರಿಸಿದರು. ಇದರ ನಂತರ, ಇಂಗ್ಲೆಂಡ್ ಫುಟ್ಬಾಲ್ ಅಸೋಸಿಯೇಷನ್ ​​(FA) ತನ್ನ ಆಟಗಾರರನ್ನು ಬೆಂಬಲಿಸುವ ಅಧಿಕೃತ ಹೇಳಿಕೆಯನ್ನು ನೀಡಿತು ಮತ್ತು ಈ ಅಸಭ್ಯ ಕಾಮೆಂಟ್ಗಳಿಗಾಗಿ ಅಭಿಮಾನಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿತ್ತು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ