AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಸ್9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾಗವಹಿಸುವುದು ಹೇಗೆ? ಬಹುಮಾನದ ಮೊತ್ತವೆಷ್ಟು?

News9 Corporate Badminton Championship 2025: ನ್ಯೂಸ್9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ 2025 ಮೇ 9-11 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ. ಪುರುಷರ ಸಿಂಗಲ್ಸ್ ಮತ್ತು ಮಿಶ್ರ ಡಬಲ್ಸ್‌ನಲ್ಲಿ ಕಾರ್ಪೊರೇಟ್ ತಂಡಗಳು ಭಾಗವಹಿಸಬಹುದು. ಮುಕ್ತ ವಿಭಾಗವು ಪುರುಷರು, ಮಹಿಳೆಯರು ಮತ್ತು ಮಿಶ್ರ ಡಬಲ್ಸ್ ಅನ್ನು ಒಳಗೊಂಡಿದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುವುದು. www.news9corporatecup.com ಅಥವಾ corporatecup@tv9.com ಮೂಲಕ ಮೇ 6 ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ನ್ಯೂಸ್9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾಗವಹಿಸುವುದು ಹೇಗೆ? ಬಹುಮಾನದ ಮೊತ್ತವೆಷ್ಟು?
Badminton Championship 2025
Follow us
ಪೃಥ್ವಿಶಂಕರ
|

Updated on:May 05, 2025 | 10:38 PM

ನ್ಯೂಸ್9 ಮತ್ತು ಟಿವಿ9 ನೆಟ್‌ವರ್ಕ್, ಮಾಧ್ಯಮ ಸಮೂಹವಾಗಿ ಸಾಮಾಜಿಕ ಸಮಸ್ಯೆಗಳನ್ನು ಎತ್ತಿ ತೋರಿಸುವುದಲ್ಲದೆ, ಸಾಮಾಜಿಕ ಜಾಗೃತಿಯನ್ನು ಸಹ ಮೂಡಿಸುವ ಕೆಲಸವನ್ನು ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ. ಇದರ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಕೊಡುಗೆ ನೀಡುತ್ತ ಬಂದಿರುವ ಟಿವಿ9 ನೆಟ್‌ವರ್ಕ್ ಈ ಹಿಂದೆ ಕಾರ್ಪೊರೇಟ್ ಫುಟ್ಬಾಲ್ ಕಪ್ (Football) ಹಾಗೂ ಇಂಡಿಯನ್ ಟೈಗರ್ಸ್ ಮತ್ತು ಟೈಗ್ರೆಸ್ (Indian Tigers and Tigresses) ಫುಟ್ಬಾಲ್ ಟೂರ್ನಮೆಂಟ್ ಕ್ರೀಡಾಕೂಟವನ್ನು ಆಯೋಜಿಸಿ ಯಶಸ್ವಿಯಾಗಿತ್ತು. ಈ ಸ್ಪರ್ಧೆಯು ಅನೇಕ ಸೌಲಭ್ಯ ವಂಚಿತ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಹೊರಹಾಕಲು ಒಂದು ವೇದಿಕೆಯನ್ನು ಸೃಷ್ಟಿಸಿತ್ತು. ಇದೀಗ ನ್ಯೂಸ್9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ 2025 ಅನ್ನು ಆಯೋಜಿಸಿದ್ದು, ಈ ಕ್ರೀಡಾಕೂಟದಲ್ಲಿ ಹಲವು ಪ್ರಸಿದ್ಧ ಕಾರ್ಪೊರೇಟ್ ಕಂಪನಿಗಳು ಭಾಗವಹಿಸುತ್ತಿವೆ. ಹೀಗಾಗಿ ಈ ಸ್ಪರ್ಧೆಯ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿವರಗಳು ಇಲ್ಲಿವೆ.

ಈ ಸ್ಪರ್ಧೆಯಲ್ಲಿ ಭಾಗವಹಿಸುವುದು ಹೇಗೆ?

ಪಂದ್ಯಾವಳಿಯನ್ನು ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುತ್ತದೆ. ಅಂದರೆ ಪ್ರತಿ ನೋಂದಾಯಿತ ತಂಡವು ಇತರ ಪ್ರತಿಯೊಂದು ತಂಡದೊಂದಿಗೆ ಆಡುತ್ತದೆ. ಪೂರ್ವ-ನೋಂದಣಿ ಅಗತ್ಯವಿದ್ದು, ಕುತೂಹಲಕಾರಿ ಸಂಗತಿಯೆಂದರೆ, ಎರಡು ಕಾರ್ಪೊರೇಟ್ ಕಂಪನಿಗಳು ಒಟ್ಟಾಗಿ ಸೇರಿ ಸಂಯೋಜಿತ ತಂಡವನ್ನು ರಚಿಸಬಹುದು. ಈ ಕ್ರೀಡಾಕೂಟವು ಪುರುಷರ ಸಿಂಗಲ್ಸ್ ಮತ್ತು ಮಿಶ್ರ ಡಬಲ್ಸ್ ಅನ್ನು ಒಳಗೊಂಡಿರುತ್ತದೆ.

ಅಲ್ಲದೆ, ಮುಕ್ತ ವಿಭಾಗದಲ್ಲಿ, ಪುರುಷರ ಸಿಂಗಲ್ಸ್, ಮಹಿಳೆಯರ ಸಿಂಗಲ್ಸ್ ಮತ್ತು ಮಿಶ್ರ ಡಬಲ್ಸ್ ಪಂದ್ಯಗಳು ನಡೆಯಲಿವೆ. ಪುರುಷರ ವಿಭಾಗದ ಅಡಿಯಲ್ಲಿ, 3 ರಿಂದ ಐದು ಆಟಗಾರರ ತಂಡವನ್ನು ರಚಿಸಬಹುದಾಗಿದ್ದು, ಪ್ರತಿ ಕಾರ್ಪೊರೇಟ್ ಸಂಸ್ಥೆಯು ಬಹು ತಂಡಗಳನ್ನು ನೋಂದಾಯಿಸಲು ಸ್ವಾಗತಾರ್ಹವಾಗಿದೆ. ಈ ಪಂದ್ಯಾವಳಿಯನ್ನು ಮೇ 9 ರಿಂದ 11 ರವರೆಗೆ ಹೈದರಾಬಾದ್‌ನ ಪಿ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಬ್ಯಾಡ್ಮಿಂಟನ್ ಅಕಾಡೆಮಿಯ ಅನುಭವಿಗಳಿಂದ ತರಬೇತಿ ನೀಡಲಾಗುವುದು.

ನ್ಯೂಸ್9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಪ್ರಸಿದ್ಧ ಕಾರ್ಪೊರೇಟ್‌ ಕಂಪನಿಗಳು ಭಾಗಿ

ಬಹುಮಾನದ ಹಣ ಎಷ್ಟು?

ಪುರುಷ ವಿಭಾಗದಲ್ಲಿ ಅಗ್ರ 3 ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಅದರಂತೆ ಮೊದಲ ಸ್ಥಾನ ಪಡೆದವರಿಗೆ 1.5 ಲಕ್ಷ ರೂ., ಎರಡನೇ ಸ್ಥಾನ ಪಡೆದವರಿಗೆ ಅಂದರೆ ರನ್ನರ್ ಅಪ್ ಆದವರಿಗೆ 1 ಲಕ್ಷ ರೂ. ಬಹುಮಾನ ದೊರೆಯಲಿದೆ. ಮೂರನೇ ಸ್ಥಾನ ಪಡೆದ ಆಟಗಾರರಿಗೆ 50 ಸಾವಿರ ರೂಪಾಯಿ ಬಹುಮಾನ ಸಿಗಲಿದೆ. ಹಾಗೆಯೇ ಮುಕ್ತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 25,000 ರೂ., ಎರಡನೇ ಸ್ಥಾನ ಪಡೆದವರಿಗೆ 15,000 ರೂ., ಮೂರನೇ ಸ್ಥಾನ ಪಡೆದವರಿಗೆ 5,000 ರೂ. ನಗದು ಬಹುಮಾನ ನೀಡಲಾಗುವುದು.

ನೋಂದಾಯಿಸಿಕೊಳ್ಳುವುದು ಹೇಗೆ?

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಕಾರ್ಪೊರೇಟ್‌ ಕಂಪನಿಗಳು www.news9corporatecup.com ಮತ್ತು corporatecup@tv9.com ಮೂಲಕ ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ ಕೊನೆಯ ದಿನಾಂಕ ಮೇ 6.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 pm, Mon, 5 May 25

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ