AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಅವರ ಧೃಡ ನಿರ್ಧಾರವಾಗಿದೆ; ಡಿವಿಲಿಯರ್ಸ್ ಪುನರಾಗಮನದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಕ್ರಿಕೆಟ್ ದಕ್ಷಿಣ ಆಫ್ರಿಕಾ

AB De Villiers: ಎಬಿ ಡಿವಿಲಿಯರ್ಸ್ ನಿವೃತ್ತರಾಗಿದ್ದಾರೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ಗೆ ಹಿಂದಿರುಗುವುದಿಲ್ಲ ಎಂದು ಹೇಳಿಕೆ ತಿಳಿಸಿದೆ.

ಇದು ಅವರ ಧೃಡ ನಿರ್ಧಾರವಾಗಿದೆ; ಡಿವಿಲಿಯರ್ಸ್ ಪುನರಾಗಮನದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಕ್ರಿಕೆಟ್ ದಕ್ಷಿಣ ಆಫ್ರಿಕಾ
ಎಬಿ ಡಿವಿಲಿಯರ್ಸ್
ಪೃಥ್ವಿಶಂಕರ
|

Updated on: May 19, 2021 | 3:32 PM

Share

ದಕ್ಷಿಣ ಆಫ್ರಿಕಾದ ಹಿರಿಯ ಕ್ರಿಕೆಟಿಗ ಆರ್ಸಿಬಿ ಆಪತ್ಭಾಂದವ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಕ್ರಿಕೆಟ್ ದಕ್ಷಿಣ ಆಫ್ರಿಕಾ ಈ ಎಲ್ಲಾ ವದಂತಿಗಳಿಗೂ ತೆರೆ ಎಳೆದಿದೆ. ಎಬಿ ಡಿವಿಲಿಯರ್ಸ್ ನಿವೃತ್ತರಾಗಿದ್ದಾರೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ಗೆ ಹಿಂದಿರುಗುವುದಿಲ್ಲ ಎಂದು ಹೇಳಿಕೆ ತಿಳಿಸಿದೆ. ಕ್ರಿಕೆಟ್ ಮಂಡಳಿಯ ಪ್ರಕಾರ, ಈ ವಿಷಯದ ಬಗ್ಗೆ ಡಿವಿಲಿಯರ್ಸ್ ಅವರನ್ನು ಸಂಪರ್ಕಿಸಲಾಗಿದೆ. ಡಿವಿಲಿಯರ್ಸ್ ಅವರ ನಿವೃತ್ತಿ ಅಂತಿಮ ನಿರ್ಧಾರವಾಗಿದೆ ಮತ್ತು ಅದು ಬದಲಾಗುವುದಿಲ್ಲ ಎಂದು ಹೇಳಿದ್ದಾರಂತೆ. ಅಂದರೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಹಿಂತಿರುಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಡಿವಿಲಿಯರ್ಸ್ 114 ಟೆಸ್ಟ್, 224 ಏಕದಿನ ಮತ್ತು 78 ಟಿ 20 ಐ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾವನ್ನು ಪ್ರತಿನಿಧಿಸಿದ್ದಾರೆ. ಅವರು ಕ್ರಮವಾಗಿ 8,765, 9,577 ಮತ್ತು 1,672 ರನ್ ಗಳಿಸಿದ್ದಾರೆ. ಅವರು ಟೆಸ್ಟ್‌ನಲ್ಲಿ 22 ಶತಕಗಳನ್ನು ಮತ್ತು 46 ಅರ್ಧಶತಕಗಳನ್ನು ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅವರು 25 ಶತಕ ಮತ್ತು 53 ಅರ್ಧಶತಕಗಳನ್ನು ಗಳಿಸಿದ್ದಾರೆ. ಡಿವಿಲಿಯರ್ಸ್‌ಗೆ ಪ್ರಸ್ತುತ 37 ವರ್ಷವಾಗಿದೆ.

ತಂಡಕ್ಕೆ ಮರಳುವ ಬಗ್ಗೆ ಚರ್ಚೆಗಳು ಪ್ರಾರಂಭ ಡಿವಿಲಿಯರ್ಸ್ ಅವರು 2018 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು. ಕೆಲಸದ ಹೊರೆಯಿಂದಾಗಿ ನಾನು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಬರುತ್ತಿದ್ದೇನೆ ಎಂದು ಅವರು ಆ ಸಮಯದಲ್ಲಿ ಹೇಳಿದ್ದರು. ಆದರೆ ವಿಶ್ವದಾದ್ಯಂತ ಟಿ 20 ಲೀಗ್‌ಗಳಲ್ಲಿ ಅವರ ಅದ್ಭುತ ಪ್ರದರ್ಶನಗಳ ನಂತರ, ಡಿವಿಲಿಯರ್ಸ್ ತಂಡಕ್ಕೆ ಮರಳುವ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದ್ದವು. ದಕ್ಷಿಣ ಆಫ್ರಿಕಾದ ಕ್ರಿಕೆಟ್ ತಂಡದ ಪ್ರಸ್ತುತ ಕಳಪೆ ಪ್ರದರ್ಶನದ ನಂತರ ಡಿವಿಲಿಯರ್ಸ್ ಅವರನ್ನು ವಾಪಸ್ ತಂಡಕ್ಕೆ ಕರೆಸಿಕೊಳ್ಳಬೇಕೆಂದು ಕ್ರಿಕೆಟ್ ಅಭಿಮಾನಿಗಳು ಒತ್ತಾಯಿಸುತ್ತಿದ್ದರು.

ಎಬಿ ಡಿವಿಲಿಯರ್ಸ್ ಹಿಂದಿರುಗುವ ಸೂಚನೆ ನೀಡಿದರು 2018 ರಲ್ಲಿ 15 ವರ್ಷಗಳ ಕಾಲ ದಕ್ಷಿಣ ಆಫ್ರಿಕಾ ಪರ ಕ್ರಿಕೆಟ್ ಆಡಿದ ನಂತರ ನಿವೃತ್ತರಾದ ಎಬಿ ಡಿವಿಲಿಯರ್ಸ್ ಮತ್ತೊಮ್ಮೆ ಅಂತರರಾಷ್ಟ್ರೀಯ ಪಿಚ್‌ಗೆ ಇಳಿಯಬಹುದು. ಇದಕ್ಕೆ ಸಂಬಂಧಿಸಿದ ಸೂಚನೆಗಳನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾ ನಿರ್ದೇಶಕ ಗ್ರೇಮ್ ಸ್ಮಿತ್ ನೀಡಿದ್ದಾರೆ. ಆದರೆ, ಈ ಸೂಚನೆಯನ್ನು ಕಳೆದ ತಿಂಗಳು ಹೆಡ್ ಕೋಚ್ ಮಾರ್ಕ್ ಬೌಚರ್ ಕೂಡ ನೀಡಿದ್ದರು. ಟಿ 20 ವಿಶ್ವಕಪ್‌ಗೆ ಎಬಿ ಡಿವಿಲಿಯರ್ಸ್ ಹಿಂದಿರುಗುವ ಸೂಚನೆ ನೀಡಿದರು. 37 ವರ್ಷದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಸ್ವತಃ ಐಪಿಎಲ್ 2021 ರ ಪೋಸ್ಟ್‌ಮ್ಯಾಚ್ ಪ್ರಸ್ತುತಿಯಲ್ಲಿ, ದಕ್ಷಿಣ ಆಫ್ರಿಕಾ ಪರ ಮತ್ತೊಮ್ಮೆ ಆಡುವುದು ಒಳ್ಳೆಯದು ಎಂದು ಹೇಳಿದರು. ಕಳೆದ ವರ್ಷ ನಾನು ಮಾರ್ಕ್ ಬೌಚರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದಲ್ಲದೆ ದೇಶದ ಪರ ಕ್ರಿಕೆಟ್​ ಆಡುವ ಇಂಗಿತವನ್ನು ಸಹ ವ್ಯಕ್ತಪಡಿಸಿದ್ದರು.

ಬೌಚರ್ ನಂತರ ಸ್ಮಿತ್ ಅಭಿಪ್ರಾಯ ಮಾರ್ಕ್ ಬೌಚರ್ ಹೇಳಿಕೆ ನೀಡಿದ ಒಂದು ತಿಂಗಳ ನಂತರ, ಗ್ರೇಮ್ ಸ್ಮಿತ್ ಎಬಿ ಡಿವಿಲಿಯರ್ಸ್ ಹಿಂದಿರುಗುವ ಬಗ್ಗೆ ಸುಳಿವು ನೀಡಿದ್ದಾರೆ. ಎಬಿ ಡಿವಿಲಿಯರ್ಸ್ ಅವರಲ್ಲದೆ, ಇಮ್ರಾನ್ ತಾಹಿರ್ ಮತ್ತು ಕ್ರಿಸ್ ಮೋರಿಸ್ ಹಿಂದಿರುಗುವ ಬಗ್ಗೆಯೂ ಅವರು ಸುಳಿವು ನೀಡಿದರು. ಈ ಆಟಗಾರರು ಮರಳುವ ಮೂಲಕ ದಕ್ಷಿಣ ಆಫ್ರಿಕಾದ ತಂಡವು ಬಲಗೊಳ್ಳುತ್ತದೆ ಎಂದು ಸ್ಮಿತ್​ ಹೇಳಿದರು.

ಇದನ್ನೂ ಓದಿ:IPL 2021: ಎಬಿಡಿ ಆರ್ಸಿಬಿ ಆಸ್ತಿ.. ಪಡಿಕ್ಕಲ್ ಯಾರನ್ನ ಹೆಚ್ಚಾಗಿ ಇಷ್ಟಪಡ್ತಾನೋ ಗೊತ್ತಿಲ್ಲ, ಆದ್ರೆ ನಿನ್ನನ್ನ ಮಾತ್ರ ಇಷ್ಟಪಡೋದಿಲ್ಲ: ಕೊಹ್ಲಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ