AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Norway Chess Open: ನಾರ್ವೆ ಚೆಸ್ ಚಾಂಪಿಯನ್​ಶಿಪ್ ಪ್ರಶಸ್ತಿ ಗೆದ್ದ 16 ವರ್ಷದ ಜೂ. ಚೆಸ್​ ಮಾಸ್ಟರ್​ ಆರ್ ಪ್ರಗ್ನಾನಂದ

Norway Chess Open: ಚದುರಂಗದ ಜೂನಿಯರ್ ಸೂಪರ್​ಸ್ಟಾರ್ ಆರ್ ಪ್ರಗ್ನಾನಂದ ಶುಕ್ರವಾರ ನಡೆದ ನಾರ್ವೆ ಚೆಸ್ ಗ್ರೂಪ್ ಎ ಓಪನ್ ಚೆಸ್ ಪಂದ್ಯಾವಳಿಯ ಒಂಬತ್ತು ಸುತ್ತುಗಳಲ್ಲಿ 7.5 ಅಂಕಗಳಿಸಿ ಚಾಂಪಿಯನ್ ಪಟ್ಟಕ್ಕೇರಿದ್ದಾರೆ.

Norway Chess Open: ನಾರ್ವೆ ಚೆಸ್ ಚಾಂಪಿಯನ್​ಶಿಪ್ ಪ್ರಶಸ್ತಿ ಗೆದ್ದ 16 ವರ್ಷದ ಜೂ. ಚೆಸ್​ ಮಾಸ್ಟರ್​ ಆರ್ ಪ್ರಗ್ನಾನಂದ
ಆರ್ ಪ್ರಗ್ನಾನಂದ
TV9 Web
| Updated By: ಪೃಥ್ವಿಶಂಕರ|

Updated on:Jun 11, 2022 | 6:14 PM

Share

ಚದುರಂಗದ ಜೂನಿಯರ್ ಸೂಪರ್​ಸ್ಟಾರ್ ಆರ್ ಪ್ರಗ್ನಾನಂದ (R Praggnanandhaa) ಶುಕ್ರವಾರ ನಡೆದ ನಾರ್ವೆ ಚೆಸ್ ಗ್ರೂಪ್ ಎ ಓಪನ್ (Norway Chess Open) ಚೆಸ್ ಪಂದ್ಯಾವಳಿಯ ಒಂಬತ್ತು ಸುತ್ತುಗಳಲ್ಲಿ 7.5 ಅಂಕಗಳಿಸಿ ಚಾಂಪಿಯನ್ ಪಟ್ಟಕ್ಕೇರಿದ್ದಾರೆ. ತಡರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಪ್ರಗ್ನಾನಂದ, ಒಂಬತ್ತು ಸುತ್ತುಗಳಲ್ಲಿ ಅಜೇಯರಾಗಿ ಉಳಿಯುವ ಮೂಲಕ ತಮ್ಮ ಸಹ ಭಾರತೀಯ ಆಟಗಾರ ಮಾಸ್ಟರ್ ವಿ. ಪ್ರಣೀತ್ (V Praneeth) ವಿರುದ್ಧ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಮುಗಿಸಿದರು. ಪ್ರಗ್ನಾನಂದ ಎರಡನೇ ಸ್ಥಾನದಲ್ಲಿರುವ IM ಮಾರ್ಸೆಲ್ ಎಫ್ರೊಯಿಮ್ಸ್ಕಿ ಮತ್ತು IM ಜಂಗ್ ಮಿನ್ ಸಿಯೊ ಅವರಗಿಂತ ಪೂರ್ಣ ಅಂಕವನ್ನು ಗಳಿಸಿದರು.

ಆರು ಪಾಯಿಂಟ್‌ಗಳೊಂದಿಗೆ ಪ್ರಣೀತ್ ಜಂಟಿಯಾಗಿ ಮೂರನೇ ಸ್ಥಾನದಲ್ಲಿದ್ದರು ಆದರೆ ಕೆಳಮಟ್ಟದ ಟೈ-ಬ್ರೇಕ್ ಸ್ಕೋರ್‌ನಿಂದ ಆರನೇ ಸ್ಥಾನ ಪಡೆದರು. ಪ್ರಣೀತ್ ಅವರನ್ನು ಸೋಲಿಸುವುದರ ಹೊರತಾಗಿ, ಪ್ರಗ್ನಾನಂದ ವಿಕ್ಟರ್ ಮಿಖಲೆವ್ಸ್ಕಿ ಅವರನ್ನು 8ನೇ ಸುತ್ತಿನಲ್ಲಿ, ವಿಟಾಲಿ ಕುನಿನ್ ಅವರನ್ನು 6ನೇ ಸುತ್ತಿನಲ್ಲಿ, ಮುಖಮ್ಮದ್ಜೋಖಿದ್ ಸುಯರೋವ್ ಅವರನ್ನು 4ನೇ ಸುತ್ತಿನಲ್ಲಿ, ಸೆಮೆನ್ ಮುಟುಸೊವ್ 2ನೇ ಸುತ್ತಿನಲ್ಲಿ ಮತ್ತು ಮಥಿಯಾಸ್ ಉನ್ನೆಲ್ಯಾಂಡ್ ವಿರುದ್ಧ 1ನೇ ಸುತ್ತಿನಲ್ಲಿ ಗೆಲುವು ಸಾಧಿಸಿದರು. ಪ್ರಗ್ನಾನಂದ ತಮ್ಮ ಇತರ ಮೂರು ಪಂದ್ಯಗಳನ್ನು ಡ್ರಾ ಮಾಡಿಕೊಂಡರು.

ಇದನ್ನೂ ಓದಿ
Image
ENG vs NZ: ಆಂಗ್ಲರ ವಿರುದ್ಧ ಸತತ ಎರಡನೇ ಶತಕ ಸಿಡಿಸಿದ ಕಿವೀಸ್ ಬ್ಯಾಟರ್ ಮಿಚೆಲ್..!
Image
IND vs SA 2nd T20 Playing 11: ಭಾರತ ತಂಡದಲ್ಲಿ ಬೌಲಿಂಗ್‌ ಬದಲಾವಣೆ? ಎರಡೂ ತಂಡಗಳ ಆಡುವ XI

ಇದನ್ನೂ ಓದಿ:Chessable Masters: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್​ರನ್ನು ಸೋಲಿಸಿದ 16 ವರ್ಷದ ಭಾರತೀಯ ಚೆಸ್ ಗ್ರ್ಯಾಂಡ್‌ಮಾಸ್ಟರ್

ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಗೆಲುವು

16 ವರ್ಷದ ಯಂಗ್​ಸ್ಟಾರ್ ಪ್ರಗ್ನಾನಂದ ಇತ್ತೀಚಿನ ದಿನಗಳಲ್ಲಿ ಅದ್ಭುತ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಜೊತೆಗೆ ಚೆಸ್ಸಬಲ್ ಮಾಸ್ಟರ್ ಆನ್‌ಲೈನ್ ಈವೆಂಟ್‌ನಲ್ಲಿ ಎರಡನೇ ಬಾರಿಗೆ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಸೋಲಿಸಿದರು. ನಂತರ ಚೀನಾದ ಡಿಂಗ್ ಲಿರೆನ್‌ ವಿರುದ್ಧದ ಫೈನಲ್​ ಪಂದ್ಯದಲ್ಲಿ ತೀರ ಹತ್ತಿರಕ್ಕೆ ಬಂದು ಸೋತರು. ಮುಂದಿನ ತಿಂಗಳು ಚೆನ್ನೈನಲ್ಲಿ ನಡೆಯಲಿರುವ 44ನೇ ಚೆಸ್ ಒಲಿಂಪಿಯಾಡ್‌ನ ಮುಕ್ತ ಸ್ಪರ್ಧೆಯಲ್ಲಿ ಅವರು ಭಾರತ ಬಿ ತಂಡದ ಭಾಗವಾಗಲಿದ್ದಾರೆ.

ಅಭಿನಂದಿಸಿದ ಕೋಚ್ ಆರ್ ಬಿ ರಮೇಶ್

ಗೆಲುವಿನ ನಂತರ ಮಾತನಾಡಿದ ಕೋಚ್ ಆರ್.ಬಿ. ರಮೇಶ್ ಅವರು ಪ್ರಗ್ನಾನಂದರನ್ನು ಅಭಿನಂದಿಸಿದರು. ಪ್ರಗ್ನಾನಂದ ಅವರು ಅಗ್ರ ಶ್ರೇಯಾಂಕದ ಆಟಗಾರ, ಆದ್ದರಿಂದ ಅವರು ಪಂದ್ಯಾವಳಿಯನ್ನು ಗೆದ್ದರೂ ಆಶ್ಚರ್ಯವಿಲ್ಲ. ಪ್ರಗ್ನಾನಂದ ಉತ್ತಮವಾಗಿ ಆಡಿದರು, ಕಪ್ಪು ಕಾಯಿಗಳೊಂದಿಗೆ ಮೂರು ಪಂದ್ಯಗಳನ್ನು ಡ್ರಾ ಮಾಡಿಕೊಂಡು, ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರು. ಇದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ರಮೇಶ್ ಹೇಳಿಕೊಂಡಿದ್ದಾರೆ.

Published On - 5:52 pm, Sat, 11 June 22

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?