AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: IPL ನಷ್ಟ ಸರಿದೂಗಿಸಲು ಖಾಲಿ ಮೈದಾನದಲ್ಲಿ ಆಡಿಸ್ತಾರಾ!?

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯದೇ ಇದ್ರೆ, ಬಿಸಿಸಿಐಗಾಗೋ ನಷ್ಟ ಎಷ್ಟು ಅಂತಾ, ಒಬ್ಬೊಬ್ಬರು ಒಂದೊಂದು ಲೆಕ್ಕ ಹಾಕಿ ಹೇಳುತ್ತಿದ್ರು. ಆದ್ರೀಗ ಸ್ವತಃ ಬಿಸಿಸಿಐ ಬಿಗ್​ಬಾಸ್ ಸೌರವ್ ಗಂಗೂಲಿಯೇ, ಈ ಬಾರಿಯ ಐಪಿಎಲ್ ಸೀಸನ್ ನಡೆಯದೇ ಹೋದ್ರೆ, ಬಿಸಿಸಿಐಗಾಗೋ ನಷ್ಟ ಎಷ್ಟು ಅನ್ನೋದನ್ನ ಬಾಯ್ಬಿಟ್ಟಿದ್ದಾರೆ. ಐಪಿಎಲ್​​ನಿಂದ ಬಿಸಿಸಿಐಗೆ ಎಷ್ಟು ನಷ್ಟ? ಕೊರೊನಾ ವೈರಸ್ ಕೋಲಾಹಲದ ಹಿನ್ನೆಲೆಯಲ್ಲಿ ಮಾರ್ಚ್ 29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್ 13ನೇ ಆವೃತ್ತಿಯನ್ನ, ಮುಂದಿನ ಆದೇಶದವರೆಗೆ ರದ್ದು ಪಡಿಸಲಾಗಿದೆ. ಏನೇ ಮಾಡಿದ್ರೂ ಈ ಬಾರಿಯ […]

ಕೊರೊನಾ ಸಂಕಷ್ಟ: IPL ನಷ್ಟ ಸರಿದೂಗಿಸಲು ಖಾಲಿ ಮೈದಾನದಲ್ಲಿ ಆಡಿಸ್ತಾರಾ!?
ಸಾಧು ಶ್ರೀನಾಥ್​
|

Updated on:May 16, 2020 | 10:14 AM

Share

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯದೇ ಇದ್ರೆ, ಬಿಸಿಸಿಐಗಾಗೋ ನಷ್ಟ ಎಷ್ಟು ಅಂತಾ, ಒಬ್ಬೊಬ್ಬರು ಒಂದೊಂದು ಲೆಕ್ಕ ಹಾಕಿ ಹೇಳುತ್ತಿದ್ರು. ಆದ್ರೀಗ ಸ್ವತಃ ಬಿಸಿಸಿಐ ಬಿಗ್​ಬಾಸ್ ಸೌರವ್ ಗಂಗೂಲಿಯೇ, ಈ ಬಾರಿಯ ಐಪಿಎಲ್ ಸೀಸನ್ ನಡೆಯದೇ ಹೋದ್ರೆ, ಬಿಸಿಸಿಐಗಾಗೋ ನಷ್ಟ ಎಷ್ಟು ಅನ್ನೋದನ್ನ ಬಾಯ್ಬಿಟ್ಟಿದ್ದಾರೆ.

ಐಪಿಎಲ್​​ನಿಂದ ಬಿಸಿಸಿಐಗೆ ಎಷ್ಟು ನಷ್ಟ? ಕೊರೊನಾ ವೈರಸ್ ಕೋಲಾಹಲದ ಹಿನ್ನೆಲೆಯಲ್ಲಿ ಮಾರ್ಚ್ 29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್ 13ನೇ ಆವೃತ್ತಿಯನ್ನ, ಮುಂದಿನ ಆದೇಶದವರೆಗೆ ರದ್ದು ಪಡಿಸಲಾಗಿದೆ. ಏನೇ ಮಾಡಿದ್ರೂ ಈ ಬಾರಿಯ ಐಪಿಎಲ್ ನಡೆಯೋದೇ ಅನುಮಾನ. ಹೀಗಾಗಿ ಬಿಗ್​ಬಾಸ್ ಸೌರವ್ ಗಂಗೂಲಿ ಐಪಿಎಲ್​​ನಿಂದ ಬಿಸಿಸಿಐ ಸಹಸ್ರಾರು ಕೋಟಿ ನಷ್ಟವಾಗಲಿದೆ ಎಂದಿದ್ದಾರೆ.

ಕಳವಳ ವ್ಯಕ್ತಪಡಿಸಿದ ಗಂಗೂಲಿ: ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, 13ನೇ ಆವೃತ್ತಿ ಈ ವರ್ಷ ರದ್ದಾದ್ರೆ, ಬಿಸಿಸಿಐಗೆ ಬರೋಬ್ಬರಿ 4 ಸಾವಿರ ಕೋಟಿ ರೂಪಾಯಿಗಳ ನಷ್ಟ ಸಂಭವಿಸಲಿದೆ ಎಂದಿದ್ದಾರೆ. ಹಣಕಾಸಿನ ಸ್ಥಿತಿಯನ್ನು ಗಮನಿಸುತ್ತಿದ್ದೇವೆ. ನಮ್ಮಲ್ಲಿ ಎಷ್ಟು ಹಣವಿದೆ ಎಂದು ತಿಳಿದು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಐಪಿಎಲ್‌ ಟೂರ್ನಿಯನ್ನು ಈ ಬಾರಿ ಆಯೋಜಿಸದೇ ಇದ್ದರೆ ಅದರಿಂದ 4,000 ಕೋಟಿ ರೂಪಾಯಿಗಳ ಭಾರಿ ನಷ್ಟ ಸಂಭವಿಸಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

IPL ನಡೆಯದಿದ್ರೆ ಆಟಗಾರರ ವೇತನಕ್ಕೆ ಕತ್ತರಿ? ಇದಕ್ಕೂ ಮುಂಚೆ, ಒಂದು ವೇಳೆ ಐಪಿಎಲ್‌ ನಡೆದ್ರೆ ನಾವು ಆಟಗಾರರ ವೇತನಕ್ಕೆ ಕತ್ತರಿ ಹಾಕದೆ ಎಲ್ಲವನ್ನು ನಿಭಾಯಿಸಲಿದ್ದೇವೆ. ಐಪಿಎಲ್ ನಡೆಯದೇ ಇದ್ದರೆ ಆಟಗಾರರ ವೇತನ ಕಡಿತಗೊಳಿಸೋದಾಗಿ ಗಂಗೂಲಿ ಪರೋಕ್ಷವಾಗಿ ಸುಳಿವು ನೀಡಿದ್ದರು. ಆದರೆ ಆಟಗಾರರ ವೇತನ ಕಡಿತವನ್ನು ತಳ್ಳಿಹಾಕಿರುವ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್, ಆಟಗಾರರ ವೇತನ ಕಡಿತಗೊಳಿಸುವ ಬಗ್ಗೆ ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ಒಟ್ನಲ್ಲಿ ಗಂಗೂಲಿ ಮಾತಿನ ಅರ್ಥ.. ಹೇಗಾದ್ರೂ ಮಾಡಿ ಐಪಿಎಲ್ ನಡೆಸೋದಾಗಿದೆ. ಯಾಕಂದ್ರೆ ಖಾಲಿ ಮೈದಾನದಲ್ಲಿ ಐಪಿಎಲ್ ಆಯೋಜಿಸಿದ್ರೂ ಬಿಸಿಸಿಐ ನಷ್ಟದಿಂದ ಪಾರಾಗಲಿದೆ. ಹೀಗಾಗಿ ದಾದಾ ಪದೇ ಪದೆ ಬಿಸಿಸಿಐಗೆ ಅಷ್ಟು ಕೋಟಿ ನಷ್ಟವಾಗುತ್ತೆ, ಇಷ್ಟು ಕೋಟಿ ನಷ್ಟವಾಗುತ್ತೆ ಅಂತಾ ಒತ್ತಿ ಒತ್ತಿ ಹೇಳುತ್ತಿದ್ದಾರೆ.

Published On - 6:59 am, Sat, 16 May 20

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!