AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಓವರ್​ನಲ್ಲಿ ಕಿಷನ್​ರನ್ನು ಕಳಿಸಲಾರದ್ದು ದೊಡ್ಡ ಬ್ಲಂಡರ್: ಕೆಪಿ, ಗವಾಸ್ಕರ್

ಸೋಮವಾರದಂದು ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವೆ ಸೂಪರ್ ಓವರ್​ನಲ್ಲಿ ಕೊನೆಗೊಂಡ ಪಂದ್ಯ ನಿಸ್ಸಂದೇಹವಾಗಿಯೂ ಇಂಡಿಯನ್ ಪ್ರಿಮೀಯರ್ ಲೀಗ್ ಎಲ್ಲ ಆವೃತಿಗಳಲ್ಲಿ ಅತ್ಯಂತ ರೋಮಾಂಚಕಾರಿಯಾಗಿ ಕೊನೆಗೊಂಡ ಕೆಲವು ಪಂದ್ಯಗಳಲ್ಲೊಂದು. ಹಾಲಿ ಮತ್ತು ಮಾಜಿ ಆಟಗಾರರೆಲ್ಲ ಇಶಾನ್ ಕಿಷನ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನ ಗುಣಗಾನ ಮಾಡುತ್ತ್ತಿದ್ದಾರೆ. ಈ ಆವೃತಿಗಾಗಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿರುವ ಕೆವಿನ್ ಪೀಟರ್ಸನ್ ಮತ್ತು ಸುನಿಲ್ ಗವಾಸ್ಕರ್ ಅವರು ಕಿಷನ್ ಮೇಲೆ ಪ್ರಶಂಸೆಯ ಸುರಿಮಳೆಗೈಯುತ್ತಲೇ ಅವರು ಸೂಪರ್ ಓವರ್​ನಲ್ಲಿ ಆಡಲು ಬಾರದಿರುವ ಅಥವಾ ಟೀಮ್ ಮ್ಯಾನೇಜ್​ಮಂಟ್ […]

ಸೂಪರ್ ಓವರ್​ನಲ್ಲಿ ಕಿಷನ್​ರನ್ನು ಕಳಿಸಲಾರದ್ದು ದೊಡ್ಡ ಬ್ಲಂಡರ್: ಕೆಪಿ, ಗವಾಸ್ಕರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 29, 2020 | 8:33 PM

Share

ಸೋಮವಾರದಂದು ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವೆ ಸೂಪರ್ ಓವರ್​ನಲ್ಲಿ ಕೊನೆಗೊಂಡ ಪಂದ್ಯ ನಿಸ್ಸಂದೇಹವಾಗಿಯೂ ಇಂಡಿಯನ್ ಪ್ರಿಮೀಯರ್ ಲೀಗ್ ಎಲ್ಲ ಆವೃತಿಗಳಲ್ಲಿ ಅತ್ಯಂತ ರೋಮಾಂಚಕಾರಿಯಾಗಿ ಕೊನೆಗೊಂಡ ಕೆಲವು ಪಂದ್ಯಗಳಲ್ಲೊಂದು. ಹಾಲಿ ಮತ್ತು ಮಾಜಿ ಆಟಗಾರರೆಲ್ಲ ಇಶಾನ್ ಕಿಷನ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನ ಗುಣಗಾನ ಮಾಡುತ್ತ್ತಿದ್ದಾರೆ.

ಈ ಆವೃತಿಗಾಗಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿರುವ ಕೆವಿನ್ ಪೀಟರ್ಸನ್ ಮತ್ತು ಸುನಿಲ್ ಗವಾಸ್ಕರ್ ಅವರು ಕಿಷನ್ ಮೇಲೆ ಪ್ರಶಂಸೆಯ ಸುರಿಮಳೆಗೈಯುತ್ತಲೇ ಅವರು ಸೂಪರ್ ಓವರ್​ನಲ್ಲಿ ಆಡಲು ಬಾರದಿರುವ ಅಥವಾ ಟೀಮ್ ಮ್ಯಾನೇಜ್​ಮಂಟ್ ಕಳಿಸದಿರುವ ಬಗ್ಗೆ ಆಶ್ವರ್ಯ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸೂಪರ್ ಓವರ್​ನಲ್ಲಿ ಕೊನೆಗೊಂಡ ಇದೇ ಆವೃತಿಯ ಮತ್ತೊಂದು ಮ್ಯಾಚ್​ನಲ್ಲಿ ಕಿಂಗ್ಸ್ ಎಲೆವೆನ್ ತಂಡದ ಥಿಂಕ್​ಟ್ಯಾಂಕ್ ಮಾಡಿದ ತಪ್ಪನ್ನೇ ಮುಂಬೈನವರು ಮಾಡಿದರು ಎಂದು ಇಬ್ಬರು ಆಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ ಸೂಪರ್ ಓವರ್​ನಲ್ಲಿ ಆಗಷ್ಟೇ 89 ರನ್ ಗಳಿಸಿ ಔಟಾಗಿ ಬಂದಿದ್ದ ಮಾಯಾಂಕ್ ಅಗರ್​ವಾಲ್ ಅವರನ್ನು ಕಳಿಸುವ ಬದಲು ನಿಕೊಲಾಸ್ ಪೂರನ್ ಅವರನ್ನು ಕಳಿಸಲಾಗಿತ್ತು.

‘‘ಹೌದು, ಅತೀವವಾಗಿ ದಣಿದಿದ್ದ ಮತ್ತು ನಿತ್ರಾಣಗೊಂಡಿದ್ದ ಕಿಷನ್, ಸೂಪರ್ ಓವರ್​ನಲ್ಲಿ ಆಡಲು ಬರಲಿಲ್ಲ. ಮುಂಬೈನ ಲೆಕ್ಕಾಚಾರ ತಪ್ಪಿದ್ದೇ ಅಲ್ಲಿ. ಇದನ್ನು ನಾನು ವಿಷಾದದಿಂದಲೇ ಹೇಳುತ್ತಿದ್ದೇನೆ, ಚಿಕ್ಕ ಬೌಂಡರಿಗಳ ಮೈದಾನಲ್ಲಿ ಎರಡು ನಿಮಿಷಗಳಷ್ಟು ಆಡುವುದು ದೊಡ್ಡ ಸಂಗತಿಯೇನಲ್ಲ. ನಾನು ಕಿಷನ್​ರನ್ನು ಆಡಲು ಕಳಿಸದಿರುವ ನಿರ್ಧಾರದ ಬಗ್ಗೆ ಕಾಮೆಂಟ್ ಮಾಡುತ್ತಿದ್ದೆನೆಯೇ ಹೊರತು ಕಿಷನ್ ಬಗ್ಗೆಯಲ್ಲ. ಮತ್ತೊಂದು ಪಂದ್ಯದಲ್ಲಿ (ಪಂಜಾಬ್ VS ಡಿಸಿ) ಮಾಯಾಂಕ್ ಅಗರ್​ವಾಲ್​ ಅವರನ್ನು ಕಳಿಸದೆ ತಪ್ಪು ಮಾಡಿದ ಪಂಜಾಬ್ ಆ ಗೇಮ್ ಸೋತಿದ್ದು ಎಲ್ಲರಿಗೂ ಗೊತ್ತಿದೆ,’’ ಎಂದು ಪೀಟರ್ಸನ್ ಕಾಮೆಂಟ್ರಿ ಮಾಡುವಾಗ ಹೇಳಿದರು.

ಗವಾಸ್ಕರ್ ಸಹ ಕಿಷನ್ ಸೂಪರ್ ಓವರ್​ನಲ್ಲಿ ಬ್ಯಾಟ್ ಮಾಡಲು ಬರಬೇಕಿತ್ತೆಂದು ಹೇಳಿದರು.

‘‘ಸೂಪರ್ ಓವರ್​ನಲ್ಲಿ ಹೇಗೆ ಆಡುವುದೆಂದು ಪ್ಲ್ಯಾನ್ ಮಾಡಲು ಸಮಯವೇ ಇರೋದಿಲ್ಲ. ಇದು 40-ಓವರ್​ಗಳ ಪಂದ್ಯವಾಗಿದ್ದರೂ ಕಿಷನ್ ಪುನಃ ಕ್ರೀಸಿಗೆ ಹೋಗಿ ಬ್ಯಾಟ್ ಮಾಡಲು ಇಚ್ಛಿಸುತ್ತಿದ್ದರು, ಯಾಕೆಂದರೆ ಫಾರ್ಮ್ ಅನ್ನೋದು ಬಹಳ ವಿಚಿತ್ರವಾದದ್ದು, ಅದು ಬಂದ ಹಾಗೆ ಹೋಗಿಯೂ ಬಿಟ್ಟಿರುತ್ತದೆ. ಆದರೆ ಒಂದು ಮಾತಂತೂ ನಿಜ, ಅದು ಕೇವಲ 6 ಎಸೆತಗಳ ವಿಷಯವಾಗಿದ್ದರಿಂದ ಅವರು (ಕಿಷನ್) ಬ್ಯಾಟ್ ಮಾಡಲು ಬರಬೇಕಿತ್ತೆಂದು ನಾನು ಭಾವಿಸುತ್ತೇನೆ,’’ ಗವಾಸ್ಕರ್ ಹೇಳಿದರು.

ಮ್ಯಾಚ್ ನಂತರ ನಡೆದ ಪ್ರಸೆಂಟೇಷನ್ ಕಾರ್ಯಕ್ರಮದಲ್ಲಿ ಮಾತಾಡಿದ ಮುಂಬೈ ಟೀಮಿನ ನಾಯಕ ರೋಹಿತ್ ಶರ್ಮ, ಕಿಷನ್ ತುಂಬಾ ದಣಿದಿದ್ದರು ಮತ್ತು ತೊಂದರೆಪಡುತ್ತಿರುವಂತೆ ಭಾಸವಾಗಿದ್ದರಿಂದ ಮಾನೇಜ್ಮೆಂಟ್ ಅವರನ್ನು ಕಳಿಸಿದಿರುವ ನಿರ್ಧಾರ ತೆಗೆದುಕೊಂಡಿತು, ಅಂದರು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ