AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wimbledon 2021: 30ನೇ ಗ್ರ್ಯಾನ್‌ಸ್ಲ್ಯಾಮ್‌ ಫೈನಲ್‌ಗೆ ಲಗ್ಗೆಯಿಟ್ಟ ನೊವಾಕ್ ಜೊಕೋವಿಕ್

ಫೈನಲ್‌ನಲ್ಲಿ ಜೊಕೋವಿಕ್ ಗೆದ್ದರೆ 6ನೇ ವಿಂಬಲ್ಡನ್‌, 20ನೇ ಗ್ರ್ಯಾನ್‌ಸ್ಲ್ಯಾಮ್‌ ವಿಜಯ ಸಾಧಿಸಿದ ವಿಶೇಷ ದಾಖಲೆ ನಿರ್ಮಾಣ ಮಾಡಲಿದ್ದಾರೆ.

Wimbledon 2021: 30ನೇ ಗ್ರ್ಯಾನ್‌ಸ್ಲ್ಯಾಮ್‌ ಫೈನಲ್‌ಗೆ ಲಗ್ಗೆಯಿಟ್ಟ ನೊವಾಕ್ ಜೊಕೋವಿಕ್
Novak Djokovic
TV9 Web
| Edited By: |

Updated on: Jul 10, 2021 | 1:10 PM

Share

ಹಾಲಿ ಚಾಂಪಿಯನ್, ಸರ್ಬಿಯಾ ಬಲಿಷ್ಠ ನೊವಾಕ್ ಜೊಕೋವಿಕ್ (Novak Djokovic) ತನ್ನ ವೃತ್ತಿ ಜೀವನದ 30ನೇ ಗ್ರ್ಯಾನ್‌ಸ್ಲ್ಯಾಮ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ 30ನೇ ಗ್ರ್ಯಾನ್‌ಸ್ಲಾಮ್ ಫೈನಲ್ ಸಾಧನೆ ಮಾಡಿರುವ ಜೊಕೊವಿಕ್, ದಾಖಲೆಯ 20ನೇ ಕಿರೀಟದ ಹುಡುಕಾಟದಲ್ಲಿದ್ದಾರೆ.

ನಿನ್ನೆ ಜುಲೈ 9 ರಂದು ನಡೆದ ವಿಂಬಲ್ಡನ್ ಸೆಮಿಫೈನಲ್‌ ಕಾದಾಟದಲ್ಲಿ ಕೆನಡಾದ ಡೆನಿಸ್ ಶಪೋವೊಲೊವ್ ಅವರನ್ನು ಸೋಲಿಸುವ ಮೂಲಕ ಜೊಕೋವಿಕ್ ಈ ವಿಶೇಷ ಸಾಧಾನೆ ಮಾಡಿದ್ದಾರೆ.

ಸೆಮಿಫೈನಲ್‌ನಲ್ಲಿ ಜೊಕೋವಿಕ್ ಅವರು ಡೆನಿಸ್ ಶಪೋವೊಲೊವ್ ವಿರುದ್ಧ 7-6 (7/3), 7-5, 7-5ರ ಜಯ ಗಳಿಸಿದರು. ವಿಶ್ವ ನಂ. 1 ಜೊಕೋವಿಕ್‌ಗೆ ಇದು 7ನೇ ವಿಂಬಲ್ಡನ್ ಫೈನಲ್‌ ಪಂದ್ಯ. ವಿಂಬಲ್ಡನ್‌ನಲ್ಲಿ ಜೊಕೋವಿಕ್ ಒಟ್ಟು ಐದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ಫೈನಲ್‌ನಲ್ಲಿ ಜೊಕೋವಿಕ್ ಗೆದ್ದರೆ 6ನೇ ವಿಂಬಲ್ಡನ್‌, 20ನೇ ಗ್ರ್ಯಾನ್‌ಸ್ಲ್ಯಾಮ್‌ ವಿಜಯ ಸಾಧಿಸಿದ ವಿಶೇಷ ದಾಖಲೆ ನಿರ್ಮಾಣ ಮಾಡಲಿದ್ದಾರೆ. 20 ಗ್ರ್ಯಾನ್‌ಸ್ಲ್ಯಾಮ್‌ ಗೆದ್ದರೆ ಈ ದಾಖಲೆ ಪಟ್ಟಿಯಲ್ಲಿರುವ ದಂತಕತೆಗಳಾದ ರೋಜರ್ ಫೆಡರರ್, ರಾಫೆಲ್ ನಡಾಲ್ ಸಾಲಿಗೆ ಜೊಕೋವಿಕ್ ಕೂಡ ಸೇರಿಕೊಳ್ಳಲಿದ್ದಾರೆ.

ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಬೆರೆಟಿನಿ ಅವರು ಪೋಲೆಂಡ್‌ನ ಹುಬರ್ತ್ ಹುರ್ಕಾಜ್ ಎದುರು 6–3, 6–0, 6–7 (3/7), 6–4ರಲ್ಲಿ ಗೆಲುವು ಸಾಧಿಸಿದರು. ಭಾನುವಾರ ನಡೆಯುವ ಫೈನಲ್‌ನಲ್ಲಿ ಜೊಕೋವಿಕ್ ಅವರು ಮ್ಯಾಟಿಯೊ ಬೆರೆಟಿನಿ ಸವಾಲು ಸ್ವೀಕರಿಸಲಿದ್ದಾರೆ.

IPL 2022 ರಲ್ಲಿ ಧೋನಿ ಆಡದಿದ್ರೆ ನಾನೂ ಕಣಕ್ಕಿಳಿಯಲ್ಲ ಎಂದ CSKಯ ಸ್ಟಾರ್ ಆಟಗಾರ

ಸಿಕ್ಸ್ ಲೈನ್ ಬಳಿ ಸೂಪರ್ ಮ್ಯಾನ್​ನಂತೆ ಹಾರಿದ ಟೀಮ್ ಇಂಡಿಯಾ ಮಹಿಳಾ ಆಟಗಾರ್ತಿ: ರೋಚಕ ವಿಡಿಯೋ ಇಲ್ಲಿದೆ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ