AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರರಿಗೆ ಕೊರೊನಾ ಸೋಂಕು, ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ಒಡಿಐ ಸರಣಿ ಮುಂದೂಡಿಕೆ

ಕೆಲ ಆಟಗಾರರು ಮತ್ತು ಅವರು ಕೇಪ್​ಟೌನ್​ನಲ್ಲಿ ತಂಗಿದ್ದ ಹೊಟೆಲ್ ಸಿಬ್ಬಂದಿ ವರ್ಗದ ಇಬ್ಬರಿಗೆ ಕೊವಿಡ್-19 ಸೋಂಕು ತಾಕಿರುವುದು ದೃಢಪಟ್ಟಿರುವುದರಿಂದ ದಕ್ಷಿಣ ಆಫ್ರಿಕ ಮತ್ತು ಪ್ರವಾಸಿ ಇಂಗ್ಲೆಂಡ್​ ನಡುವೆ ಜಾರಿಯಲ್ಲಿದ್ದ ಒಂದು ದಿನ ಪಂದ್ಯಗಳ ಸರಣಿಯನ್ನು ಮುಂದೂಡಲಾಗಿದೆ.

ಆಟಗಾರರಿಗೆ ಕೊರೊನಾ ಸೋಂಕು, ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ಒಡಿಐ ಸರಣಿ ಮುಂದೂಡಿಕೆ
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 07, 2020 | 9:30 PM

Share

ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕ ಆಟಗಾರರು

ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮಧ್ಯೆ ದಕ್ಷಿಣ ಆಫ್ರಿಕಾದಲ್ಲಿ ಜಾರಿಯಲ್ಲಿದ್ದ ಒಂದು ದಿನದ ಪಂದ್ಯಗಳ ಸರಣಿಯನ್ನು ಕೊವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಈಸಿಬಿ) ಎರಡೂ ಕ್ರಿಕೆಟ್​ ಮಂಡಳಿಗಳ ಪರಸ್ಪರ ಒಪ್ಪಿಗೆಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆಯೆಂದು ತಿಳಿಸಿದೆ.

ಟಾಮ್ ಹ್ಯಾರಿಸನ್

ಜೈವಿಕ-ಸುರಕ್ಷತೆ ಶಿಷ್ಟಾಚಾರ ಪಾಲಿಸುವಲ್ಲಿ ಅಗಿರುವ ಉಲ್ಲಂಘನೆಯಿಂದಾಗಿ ಅಟಗಾರರು ಮತ್ತು ಅವರು ಕೇಪ್​ಟೌನ್​ನಲ್ಲಿ ಉಳಿದುಕೊಂಡಿರುವ ಹೊಟೆಲ್ ಸಿಬ್ಬಂದಿ ಪೈಕಿ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾದ ನಂತರ ಸರಣಿಯನ್ನು ಮುಂದೂಡಲಾಗಿದೆಯೆಂದು ಈಸಿಬಿ ಪ್ರಕಟಣೆ ತಿಳಿಸಿದೆ.

ಮೂಲಗಳ ಪ್ರಕಾರ ಅತಿಥೇಯ ತಂಡದ ಒಬ್ಬ ಆಟಗಾರನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೆಯೇ ಪ್ರವಾಸಿ ಇಂಗ್ಲೆಂಡ್ ತಂಡದ ಇಬ್ಬರು ಆಟಗಾರರಲ್ಲಿ ಖಚಿತವಲ್ಲದ ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿದೆ.

‘‘ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಹಾಗೂ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್​ಎ) ಪರಸ್ಪರ ಒಪ್ಪಿಕೊಂಡು ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿದ್ದ ಪುರುಷರ ಒಂದು ದಿನದ ಪಂದ್ಯಗಳ ಸರಣಿಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಎರಡು ಮಂಡಳಿಗಳಿಗೂ ತಮ್ಮ ತಮ್ಮ ಟೀಮಿನ ಆಟಗಾರರ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ಸರಣಿಯು ಐಸಿಸಿ ಪುರುಶರ ಕ್ರಿಕೆಟ್​ ಸೂಪರ್ ಲೀಗ್​ನ ಭಾಗವಾಗಿರುವುದರಿಂದ, ಸರಣಿಯನ್ನು ಯಾವಾಗ ಆಯೋಜಿಲಾಗುವುದೆಂದು ಮುಂಬರುವ ದಿನಗಳಲ್ಲಿ ತಿಳಿಸಲಾಗುತ್ತದೆ,’’ ಎಂದು ಈಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕುಗಂಡ್ರಿ ಗೊವೆಂಡರ್

‘‘ಆಟಗಾರರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯೆನ್ನುವುದನ್ನು ಈಸಿಬಿ ಯಾವಾಗಲೂ ಪ್ರತಿಪಾದಿಸಿದೆ. ಅಲ್ಲಿನ ವಿದ್ಯಮಾನಗಳು ಆಟಗಾರರ ಮೇಲೆ ತೀವ್ರ ಸ್ವರೂಪದ ಪರಿಣಾಮವನ್ನು ಬೀರಬಹುದು. ವಿಷಯದ ಗಂಭೀರತೆಯನ್ನು ಗ್ರಹಿಸಿಕೊಂಡು ಸರಣಿ ಮುಂದೂಡುವ ನಮ್ಮ ಮನವಿಗೆ ಸ್ಪಂದಿಸಿದ ಸಿಎಸ್​ಎಗೆ ನಾವು ಆಭಾರಿಯಾಗಿದ್ದೆವೆ,’’ ಎಂದು ಈಸಿಬಿ ಮುಖ್ಯ ನಿರ್ವಹಣಾಧಿಕಾರಿ ಟಾಮ್ ಹ್ಯಾರಿಸನ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಸ್ಎ ಹಂಗಾಮಿ ಸಿಈಒ ಕುಗಂಡ್ರಿ ಗೊವೆಂಡರ್, ಈಸಿಬಿ ತಮ್ಮ ಮಂಡಳಿಯೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯಕ್ಕಾಗಿ ಧನ್ಯವಾದಗಳನ್ನು ಹೇಳುತ್ತಾ, ಸರಣಿಯನ್ನು ಆದಷ್ಟು ಬೇಗನೆ ಆಯೋಜನೆಗೊಳ್ಳುವ ಬಗ್ಗೆ ತಮ್ಮ ಮಂಡಳಿ ನಿರೀಕ್ಷೆಯಿಟ್ಟುಕೊಂಡಿದೆ ಎಂದು ಹೇಳಿದ್ದಾರೆ.

Published On - 9:26 pm, Mon, 7 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ