AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಬಂದ ವಿಜೇಂದರ್ ಸಿಂಗ್​​ಗೂ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಕುಸ್ತಿಪಟುಗಳು

ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು" ಎಂದು ವಿಜೇಂದರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಬಂದ ವಿಜೇಂದರ್ ಸಿಂಗ್​​ಗೂ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಕುಸ್ತಿಪಟುಗಳು
ಪ್ರತಿಭಟನೆಯಲ್ಲಿ ಭಾಗಿಯಾದ ಬಾಕ್ಸರ್ ವಿಜೇಂದರ್ ಸಿಂಗ್Image Credit source: Vijender Singh Twitter Handle
TV9 Web
| Edited By: |

Updated on:Jan 20, 2023 | 8:49 PM

Share

ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಕುಸ್ತಿ ಫೆಡರೇಶನ್ ಇಂಡಿಯಾ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ (Brij Bhushan Saran Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಯನ್ ಬಾಕ್ಸರ್, ಕಾಂಗ್ರೆಸ್ಸಿಗ ವಿಜೇಂದರ್ ಸಿಂಗ್ ಬೆಂಬಲ ಸೂಚಿಸಿದ್ದಾರೆ. ಎಎನ್‌ಐ ವರದಿಯ ಪ್ರಕಾರ, ಪ್ರತಿಭಟನೆಯ ಸಮಯದಲ್ಲಿ ಕುಸ್ತಿಪಟುಗಳು ಈ ವಿಷಯವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲವಾದ್ದರಿಂದ ವೇದಿಕೆಯಿಂದ ವಿಜೇಂದರ್ ಸಿಂಗ್ ಅವರಲ್ಲಿ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ. ಜಂತರ್ ಮಂತರ್ ಪ್ರತಿಭಟನಾ ಸ್ಥಳದ ದೃಶ್ಯಗಳು 2008 ರ ಬೀಜಿಂಗ್ ಒಲಿಂಪಿಕ್ ಕಂಚಿನ ಪದಕ ವಿಜೇತ ಸಿಂಗ್, ವೇದಿಕೆಯ ಕೆಳಗಿನ ನೆಲದ ಮೇಲೆ ಕುಳಿತಿರುವುದನ್ನು ತೋರಿಸಿದೆ.ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ವಿಜೇಂದರ್ ಒತ್ತಾಯಿಸಿದ್ದಾರೆ.

“ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು” ಎಂದು ವಿಜೇಂದರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಗುರುವಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸ್ಥಳಕ್ಕೆ ಆಗಮಿಸಿದ ಸಿಪಿಐ (ಎಂ) ನ ಬೃಂದಾ ಕಾರಟ್‌ಗೆ ವೇದಿಕೆಯಿಂದ ಕೆಳಗಿಳಿಯುವಂತೆ ಕುಸ್ತಿಪಟುಗಳು ಮನವಿ ಮಾಡಿದ್ದರು.

ಇದನ್ನೂ ಓದಿ: Pee-Gate: ಏರ್ ಇಂಡಿಯಾಗೆ ₹30 ಲಕ್ಷ ದಂಡ, ಪೈಲಟ್ ಪರವಾನಗಿ 3 ತಿಂಗಳವರೆಗೆ ಅಮಾನತು ಮಾಡಿದ ಡಿಜಿಸಿಎ

ರಾಜೀನಾಮೆ ನೀಡಲ್ಲ: ಬ್ರಿಜ್ ಭೂಷಣ್ ಸರಣ್ ಸಿಂಗ್

ಆಪಾದಿತ ಲೈಂಗಿಕ ಕಿರುಕುಳದ (ವಿರುದ್ಧ ಪ್ರತಿಭಟಿಸುವ ಕುಸ್ತಿಪಟುಗಳು ತಮ್ಮ ರಾಜೀನಾಮೆಯ ಬೇಡಿಕೆಯ ಮೇಲೆ ದೃಢವಾಗಿ ಉಳಿದುಕೊಂಡಿರುವಂತೆಯೇ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್  ನಾನು ಹೇಳಿಕೆ ನೀಡಿದರೆ ಸುನಾಮಿ ಉಂಟಾಗುತ್ತದೆ. ನಾನು ಯಾರ ಸಹಾಯಾರ್ಥವಾಗಿ ಇಲ್ಲಿಲ್ಲ. ನಾನು ಚುನಾಯಿತ ಪ್ರತಿನಿಧಿ ಎಂದಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಪ್ರಸಿದ್ಧ ಭಾರತೀಯ ಕುಸ್ತಿಪಟುಗಳು ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು,ಭಾರತ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು #MeToo ಆರೋಪ ಹೊರಿಸಿದ್ದು, ತಮಗೆ ಜೀವ ಭಯವಿದೆ ಎಂದಿದ್ದಾರೆ. ಮೀಟೂ ಆರೋಪ ಹೊಂದಿರುವ ಸಿಂಗ್ ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಸ್ಥಾನದಿಂದ ತಕ್ಷಣವೇ ವಜಾಗೊಳಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸುತ್ತಿದ್ದಾರೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಪ್ರಧಾನಿ ಕಾರ್ಯಾಲಯ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Fri, 20 January 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ