ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಬಂದ ವಿಜೇಂದರ್ ಸಿಂಗ್​​ಗೂ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಕುಸ್ತಿಪಟುಗಳು

ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು" ಎಂದು ವಿಜೇಂದರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆಗೆ ಬಂದ ವಿಜೇಂದರ್ ಸಿಂಗ್​​ಗೂ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ ಕುಸ್ತಿಪಟುಗಳು
ಪ್ರತಿಭಟನೆಯಲ್ಲಿ ಭಾಗಿಯಾದ ಬಾಕ್ಸರ್ ವಿಜೇಂದರ್ ಸಿಂಗ್Image Credit source: Vijender Singh Twitter Handle
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 20, 2023 | 8:49 PM

ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಕುಸ್ತಿ ಫೆಡರೇಶನ್ ಇಂಡಿಯಾ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ (Brij Bhushan Saran Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಒಲಿಂಪಿಯನ್ ಬಾಕ್ಸರ್, ಕಾಂಗ್ರೆಸ್ಸಿಗ ವಿಜೇಂದರ್ ಸಿಂಗ್ ಬೆಂಬಲ ಸೂಚಿಸಿದ್ದಾರೆ. ಎಎನ್‌ಐ ವರದಿಯ ಪ್ರಕಾರ, ಪ್ರತಿಭಟನೆಯ ಸಮಯದಲ್ಲಿ ಕುಸ್ತಿಪಟುಗಳು ಈ ವಿಷಯವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲವಾದ್ದರಿಂದ ವೇದಿಕೆಯಿಂದ ವಿಜೇಂದರ್ ಸಿಂಗ್ ಅವರಲ್ಲಿ ವೇದಿಕೆಯಿಂದ ಕೆಳಗಿಳಿಯುವಂತೆ ಹೇಳಿದ್ದಾರೆ. ಜಂತರ್ ಮಂತರ್ ಪ್ರತಿಭಟನಾ ಸ್ಥಳದ ದೃಶ್ಯಗಳು 2008 ರ ಬೀಜಿಂಗ್ ಒಲಿಂಪಿಕ್ ಕಂಚಿನ ಪದಕ ವಿಜೇತ ಸಿಂಗ್, ವೇದಿಕೆಯ ಕೆಳಗಿನ ನೆಲದ ಮೇಲೆ ಕುಳಿತಿರುವುದನ್ನು ತೋರಿಸಿದೆ.ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ವಿಜೇಂದರ್ ಒತ್ತಾಯಿಸಿದ್ದಾರೆ.

“ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು” ಎಂದು ವಿಜೇಂದರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಗುರುವಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸ್ಥಳಕ್ಕೆ ಆಗಮಿಸಿದ ಸಿಪಿಐ (ಎಂ) ನ ಬೃಂದಾ ಕಾರಟ್‌ಗೆ ವೇದಿಕೆಯಿಂದ ಕೆಳಗಿಳಿಯುವಂತೆ ಕುಸ್ತಿಪಟುಗಳು ಮನವಿ ಮಾಡಿದ್ದರು.

ಇದನ್ನೂ ಓದಿ: Pee-Gate: ಏರ್ ಇಂಡಿಯಾಗೆ ₹30 ಲಕ್ಷ ದಂಡ, ಪೈಲಟ್ ಪರವಾನಗಿ 3 ತಿಂಗಳವರೆಗೆ ಅಮಾನತು ಮಾಡಿದ ಡಿಜಿಸಿಎ

ರಾಜೀನಾಮೆ ನೀಡಲ್ಲ: ಬ್ರಿಜ್ ಭೂಷಣ್ ಸರಣ್ ಸಿಂಗ್

ಆಪಾದಿತ ಲೈಂಗಿಕ ಕಿರುಕುಳದ (ವಿರುದ್ಧ ಪ್ರತಿಭಟಿಸುವ ಕುಸ್ತಿಪಟುಗಳು ತಮ್ಮ ರಾಜೀನಾಮೆಯ ಬೇಡಿಕೆಯ ಮೇಲೆ ದೃಢವಾಗಿ ಉಳಿದುಕೊಂಡಿರುವಂತೆಯೇ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್  ನಾನು ಹೇಳಿಕೆ ನೀಡಿದರೆ ಸುನಾಮಿ ಉಂಟಾಗುತ್ತದೆ. ನಾನು ಯಾರ ಸಹಾಯಾರ್ಥವಾಗಿ ಇಲ್ಲಿಲ್ಲ. ನಾನು ಚುನಾಯಿತ ಪ್ರತಿನಿಧಿ ಎಂದಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಪ್ರಸಿದ್ಧ ಭಾರತೀಯ ಕುಸ್ತಿಪಟುಗಳು ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು,ಭಾರತ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು #MeToo ಆರೋಪ ಹೊರಿಸಿದ್ದು, ತಮಗೆ ಜೀವ ಭಯವಿದೆ ಎಂದಿದ್ದಾರೆ. ಮೀಟೂ ಆರೋಪ ಹೊಂದಿರುವ ಸಿಂಗ್ ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಸ್ಥಾನದಿಂದ ತಕ್ಷಣವೇ ವಜಾಗೊಳಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸುತ್ತಿದ್ದಾರೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಪ್ರಧಾನಿ ಕಾರ್ಯಾಲಯ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Fri, 20 January 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?