AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ಗೆ ಮೊಟ್ಟಮೊದಲ ಟೆಸ್ಟ್ ಗೆದ್ದುಕೊಟ್ಟ ಜಾನ್ ರೀಡ್ ಇನ್ನಿಲ್ಲ

1956ರಲ್ಲಿ ನ್ಯೂಜಿಲೆಂಡ್​ಗೆ ಪ್ರಪ್ರಥಮ ಟೆಸ್ಟ್ ಗೆಲುವು ದೊರಕಿಸಿಕೊಟ್ಟ ಮತ್ತು ಆ ದೇಶದ ಶ್ರೇಷ್ಠ ಕ್ರಿಕೆಟರ್​ಗಳಲ್ಲಿ ಒಬ್ಬರೆನಿಸಿಕೊಂಡಿದ್ದ ಜಾನ್ ರೀಡ್ ತಮ್ಮ 92ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಸುದೀರ್ಘ ಅವಧಿಯಿಂದ ಅವರು ದೊಡ್ಡ  ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ತಾವಾಡಿದ 58 ಟೆಸ್ಟ್ ಪಂದ್ಯಗಳ ಪೈಕಿ 34 ರಲ್ಲಿ ನಾಯಕತ್ವ ವಹಿಸಿದ್ದ ರೀಡ್ 1959ರಲ್ಲಿ ವಿಸ್ಡನ್ ಕ್ರಿಕೆಟರ್ ಆಫ್ ದಿ ಈಯರ್ ಗೌರವಕ್ಕೆ ಪಾತ್ರರಾಗಿದ್ದರು. ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ 26 ವರ್ಷಗಳ ನಂತರ ತನ್ನ ಮೊದಲ ಟೆಸ್ಟ್ […]

ನ್ಯೂಜಿಲೆಂಡ್​ಗೆ ಮೊಟ್ಟಮೊದಲ ಟೆಸ್ಟ್ ಗೆದ್ದುಕೊಟ್ಟ ಜಾನ್ ರೀಡ್ ಇನ್ನಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 14, 2020 | 10:33 PM

Share

1956ರಲ್ಲಿ ನ್ಯೂಜಿಲೆಂಡ್​ಗೆ ಪ್ರಪ್ರಥಮ ಟೆಸ್ಟ್ ಗೆಲುವು ದೊರಕಿಸಿಕೊಟ್ಟ ಮತ್ತು ಆ ದೇಶದ ಶ್ರೇಷ್ಠ ಕ್ರಿಕೆಟರ್​ಗಳಲ್ಲಿ ಒಬ್ಬರೆನಿಸಿಕೊಂಡಿದ್ದ ಜಾನ್ ರೀಡ್ ತಮ್ಮ 92ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಸುದೀರ್ಘ ಅವಧಿಯಿಂದ ಅವರು ದೊಡ್ಡ  ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದರು.

ತಾವಾಡಿದ 58 ಟೆಸ್ಟ್ ಪಂದ್ಯಗಳ ಪೈಕಿ 34 ರಲ್ಲಿ ನಾಯಕತ್ವ ವಹಿಸಿದ್ದ ರೀಡ್ 1959ರಲ್ಲಿ ವಿಸ್ಡನ್ ಕ್ರಿಕೆಟರ್ ಆಫ್ ದಿ ಈಯರ್ ಗೌರವಕ್ಕೆ ಪಾತ್ರರಾಗಿದ್ದರು. ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ 26 ವರ್ಷಗಳ ನಂತರ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ರೀಡ್ ನಾಯಕತ್ವದಲ್ಲಿ ಗೆದ್ದಿತ್ತು.

ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಹೊಡೆತಗಳ ಆಟಗಾರನಾಗಿದ್ದ ರೀಡ್ 1959ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. 1965ರವರೆಗೆ ಅವರು ತಮ್ಮ ದೇಶವನ್ನು 58 ಬಾರಿ ಪ್ರತಿನಿಧಿಸಿ, 6 ಶತಕಗಳೊಂದಿಗೆ 33.28 ಸರಾಸರಿಯಲ್ಲಿ 3,428 ರನ್ ಗಳಿಸಿದರು. ಮಧ್ಯಮ ವೇಗದ ಬೌಲರ್ ಸಹ ಆಗಿದ್ದ ಅವರು 85 ವಿಕೆಟ್​ಗಳನ್ನು ಪಡೆದಿದ್ದರು.

ರೀಡ್ ನಾಯಕತ್ವ ಎಷ್ಟು ಪ್ರಭಾವಶಾಲಿಯಾಗಿತ್ತೆಂದರೆ 1965 ರಲ್ಲಿ ಅವರನ್ನು ಇಂಗ್ಲೆಂಡ್ ವಿರುದ್ಧ ಎರಡು ಪಂದ್ಯಗಳನ್ನಾಡಿದ ಇತರ ವಿಶ್ವ ತಂಡಕ್ಕೆ ನಾಯಕನನ್ನಾಗಿ ಮಾಡಲಾಗಿತ್ತು. ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಅವರ ಸ್ಮರಣಾರ್ಥ ಪಂದ್ಯವೊಂದನ್ನು ಆಯೋಜಿಸಲು ನಿಶ್ಚಯಿಸಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್