AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ಗೆ ಮೊಟ್ಟಮೊದಲ ಟೆಸ್ಟ್ ಗೆದ್ದುಕೊಟ್ಟ ಜಾನ್ ರೀಡ್ ಇನ್ನಿಲ್ಲ

1956ರಲ್ಲಿ ನ್ಯೂಜಿಲೆಂಡ್​ಗೆ ಪ್ರಪ್ರಥಮ ಟೆಸ್ಟ್ ಗೆಲುವು ದೊರಕಿಸಿಕೊಟ್ಟ ಮತ್ತು ಆ ದೇಶದ ಶ್ರೇಷ್ಠ ಕ್ರಿಕೆಟರ್​ಗಳಲ್ಲಿ ಒಬ್ಬರೆನಿಸಿಕೊಂಡಿದ್ದ ಜಾನ್ ರೀಡ್ ತಮ್ಮ 92ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಸುದೀರ್ಘ ಅವಧಿಯಿಂದ ಅವರು ದೊಡ್ಡ  ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ತಾವಾಡಿದ 58 ಟೆಸ್ಟ್ ಪಂದ್ಯಗಳ ಪೈಕಿ 34 ರಲ್ಲಿ ನಾಯಕತ್ವ ವಹಿಸಿದ್ದ ರೀಡ್ 1959ರಲ್ಲಿ ವಿಸ್ಡನ್ ಕ್ರಿಕೆಟರ್ ಆಫ್ ದಿ ಈಯರ್ ಗೌರವಕ್ಕೆ ಪಾತ್ರರಾಗಿದ್ದರು. ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ 26 ವರ್ಷಗಳ ನಂತರ ತನ್ನ ಮೊದಲ ಟೆಸ್ಟ್ […]

ನ್ಯೂಜಿಲೆಂಡ್​ಗೆ ಮೊಟ್ಟಮೊದಲ ಟೆಸ್ಟ್ ಗೆದ್ದುಕೊಟ್ಟ ಜಾನ್ ರೀಡ್ ಇನ್ನಿಲ್ಲ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 14, 2020 | 10:33 PM

Share

1956ರಲ್ಲಿ ನ್ಯೂಜಿಲೆಂಡ್​ಗೆ ಪ್ರಪ್ರಥಮ ಟೆಸ್ಟ್ ಗೆಲುವು ದೊರಕಿಸಿಕೊಟ್ಟ ಮತ್ತು ಆ ದೇಶದ ಶ್ರೇಷ್ಠ ಕ್ರಿಕೆಟರ್​ಗಳಲ್ಲಿ ಒಬ್ಬರೆನಿಸಿಕೊಂಡಿದ್ದ ಜಾನ್ ರೀಡ್ ತಮ್ಮ 92ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಸುದೀರ್ಘ ಅವಧಿಯಿಂದ ಅವರು ದೊಡ್ಡ  ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದರು.

ತಾವಾಡಿದ 58 ಟೆಸ್ಟ್ ಪಂದ್ಯಗಳ ಪೈಕಿ 34 ರಲ್ಲಿ ನಾಯಕತ್ವ ವಹಿಸಿದ್ದ ರೀಡ್ 1959ರಲ್ಲಿ ವಿಸ್ಡನ್ ಕ್ರಿಕೆಟರ್ ಆಫ್ ದಿ ಈಯರ್ ಗೌರವಕ್ಕೆ ಪಾತ್ರರಾಗಿದ್ದರು. ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ 26 ವರ್ಷಗಳ ನಂತರ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ರೀಡ್ ನಾಯಕತ್ವದಲ್ಲಿ ಗೆದ್ದಿತ್ತು.

ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಹೊಡೆತಗಳ ಆಟಗಾರನಾಗಿದ್ದ ರೀಡ್ 1959ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. 1965ರವರೆಗೆ ಅವರು ತಮ್ಮ ದೇಶವನ್ನು 58 ಬಾರಿ ಪ್ರತಿನಿಧಿಸಿ, 6 ಶತಕಗಳೊಂದಿಗೆ 33.28 ಸರಾಸರಿಯಲ್ಲಿ 3,428 ರನ್ ಗಳಿಸಿದರು. ಮಧ್ಯಮ ವೇಗದ ಬೌಲರ್ ಸಹ ಆಗಿದ್ದ ಅವರು 85 ವಿಕೆಟ್​ಗಳನ್ನು ಪಡೆದಿದ್ದರು.

ರೀಡ್ ನಾಯಕತ್ವ ಎಷ್ಟು ಪ್ರಭಾವಶಾಲಿಯಾಗಿತ್ತೆಂದರೆ 1965 ರಲ್ಲಿ ಅವರನ್ನು ಇಂಗ್ಲೆಂಡ್ ವಿರುದ್ಧ ಎರಡು ಪಂದ್ಯಗಳನ್ನಾಡಿದ ಇತರ ವಿಶ್ವ ತಂಡಕ್ಕೆ ನಾಯಕನನ್ನಾಗಿ ಮಾಡಲಾಗಿತ್ತು. ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಅವರ ಸ್ಮರಣಾರ್ಥ ಪಂದ್ಯವೊಂದನ್ನು ಆಯೋಜಿಸಲು ನಿಶ್ಚಯಿಸಿದೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!