AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BWF World Championships: ಫೈನಲ್​ಗೆ ಲಗ್ಗೆಯಿಟ್ಟು ಐತಿಹಾಸಿಕ ಸಾಧನೆ ಮಾಡಿದ ಶ್ರೀಕಾಂತ್ ಕಿಡಂಬಿ

Kidambi Srikanth: ವಿಶ್ವಚಾಂಪಿಯನ್​​ಶಿಪ್​ನಲ್ಲಿ ಫೈನಲ್​ ಪ್ರವೇಶ ಪಡೆದುಕೊಂಡಿರುವ ಮೊದಲ ಪುರುಷರ ಆಟಗಾರನೆಂಬ ಕೀರ್ತಿಗೆ ಇದೀಗ ಶ್ರೀಕಾಂತ್​ ಭಾಜನರಾಗಿದ್ದು, ಫೈನಲ್​​​ನಲ್ಲಿ ಸೋಲು ಕಂಡರೂ ಕೂಡ ಬೆಳ್ಳಿ ಪದಕ ತಮ್ಮದಾಗಿಸಿಕೊಳ್ಳಲಿದ್ದಾರೆ.

BWF World Championships: ಫೈನಲ್​ಗೆ ಲಗ್ಗೆಯಿಟ್ಟು ಐತಿಹಾಸಿಕ ಸಾಧನೆ ಮಾಡಿದ ಶ್ರೀಕಾಂತ್ ಕಿಡಂಬಿ
kidambi srikanth
TV9 Web
| Edited By: |

Updated on: Dec 19, 2021 | 9:22 AM

Share

ವಿಶ್ವ ಬ್ಯಾಡ್ಮಿಂಟನ್​ ಚಾಂಪಿಯನ್​ಶಿಪ್​​​​​​ (BWF World Championships) ಸೆಮಿಫೈನಲ್​ನ ಪುರುಷರ ಸಿಂಗಲ್ಸ್​​​​ ಸ್ಪರ್ಧೆಯಲ್ಲಿ ಭಾರತದ ಆಟಗಾರ ಲಕ್ಷ್ಯಸೇನ್ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಕಿಡಂಬಿ ಶ್ರೀಕಾಂತ್ (Kidambi Srikanth)​ ಐತಿಹಾಸಿಕ ದಾಖಲೆ ಜೊತೆಗೆ ಫೈನಲ್​ಗೆ ಲಗ್ಗೆ ಹಾಕಿದ್ದಾರೆ. ಶ್ರೀಕಾಂತ್ ಹಾಗೂ ಲಕ್ಷ್ಯ ಸೇನ್ (Lakshya Sen) ನಡುವೆ ನಡೆದ ರೋಚಕ ಸೆಮಿ ಫೈನಲ್ (Semi Final) ಹಣಾಹಣಿಯಲ್ಲಿ ಮೊದಲ ಗೇಮ್ ಅನ್ನು ಲಕ್ಷ್ಯ ಸೇನ್ ಗೆದ್ದುಕೊಂಡರೆ ಎರಡನೇ ಗೇಮ್ ಶ್ರೀಕಾಂತ್ ಗೆದ್ದುಕೊಂಡರು. ಮೂರನೇ ಹಾಗೂ ನಿರ್ಣಾಯಕ ಗೇಮ್ ಅನ್ನು 20-17 ಅಂತರದಿಂದ ಗೆದ್ದುಕೊಂಡ  ಶ್ರೀಕಾಂತ್ ಫೈನಲ್ ಗೆ ಲಗ್ಗೆ ಇಟ್ಟರು.

ಶನಿವಾರ ನಡೆದ ಪುರುಷರ ಸಿಂಗಲ್ಸ್ ಸೆಮಿ ಫೈನಲ್ ನಲ್ಲಿ 20ರ ಹರೆಯದ ಕಿರಿಯ ಆಟಗಾರ ಸೇನ್ ಮೊದಲ ಗೇಮ್ ಅನ್ನು ಕೇವಲ 17 ನಿಮಿಷಗಳಲ್ಲಿ 21-17 ಅಂತರದಿಂದ ಗೆದ್ದುಕೊಂಡು ಶ್ರೀಕಾಂತ್ ಗೆ ಶಾಕ್ ನೀಡಿದರು. ಮೊದಲ ಗೇಮ್ ಸೋಲಿನ ಶಾಕ್ ನಿಂದ ಬೇಗನೆ ಚೇತರಿಸಿಕೊಂಡ ಮಾಜಿ ವಿಶ್ವ ನಂ.1 ಆಟಗಾರ ಶ್ರೀಕಾಂತ್ 2ನೇ ಗೇಮ್ ಅನ್ನು 21-14 ಅಂತರದಿಂದ ಗೆದ್ದುಕೊಂಡು ಪಂದ್ಯವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ದರು.

ಮೂರನೇ ಗೇಮ್‌ನಲ್ಲಿ, ಮೊದಲ ಎಂಟು ಪಾಯಿಂಟ್‌ಗಳವರೆಗೆ ಹೋರಾಟ ನೇರ ನೇರವಾಗಿತ್ತು, ಲಕ್ಷ್ಯ 3 ಪಾಯಿಂಟ್‌ಗಳಿಂದ ಮುನ್ನಡೆ ಸಾಧಿಸಿದರು.ಅವರು ಪಂದ್ಯದ ಮಧ್ಯಂತರದಲ್ಲಿ 11-8 ರಿಂದ ಮುನ್ನಡೆ ಸಾಧಿಸಿದರು. 43-ಶಾಟ್‌ಗಳ ರ್ಯಾಲಿಯನ್ನು ಗೆಲ್ಲಲು ಲಕ್ಷ್ಯ ಉತ್ತಮವಾಗಿ ಆಡಿದರು. ವಿರಾಮದ ನಂತರ ಕಿಡಂಬಿ ಭರ್ಜರಿ ಕಮ್​ಬ್ಯಾಕ್ ಮಾಡಿದರು. ಮೂರನೇ ಗೇಮ್​ನಲ್ಲಿ ಮುನ್ನಡೆ ಸಾಧಿಸಲು ಅವರು ಬಹಳಷ್ಟು ಶ್ರಮವಹಿಸಿ ಅಂತಿಮವಾಗಿ 20-17 ಅಂತರದಿಂದ ಗೆದ್ದುಕೊಂಡರು.

ಈ ಮೂಲಕ ವಿಶ್ವಚಾಂಪಿಯನ್​​ಶಿಪ್​ನಲ್ಲಿ ಫೈನಲ್​ ಪ್ರವೇಶ ಪಡೆದುಕೊಂಡಿರುವ ಮೊದಲ ಪುರುಷರ ಆಟಗಾರನೆಂಬ ಕೀರ್ತಿಗೆ ಇದೀಗ ಶ್ರೀಕಾಂತ್​ ಭಾಜನರಾಗಿದ್ದು, ಫೈನಲ್​​​ನಲ್ಲಿ ಸೋಲು ಕಂಡರೂ ಕೂಡ ಬೆಳ್ಳಿ ಪದಕ ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಮೂಲಕ ಭಾರತದ ಬ್ಯಾಡ್ಮಿಂಟನ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಪುರುಷರ ವಿಭಾಗದಲ್ಲಿ ಬೆಳ್ಳಿ ಪದಕ ದೇಶಕ್ಕೆ ಸಿಗಲಿದೆ. ವಿಶೇಷವೆಂದರೆ 1983ರಲ್ಲಿ ಪ್ರಕಾಶ್ ಪಡುಕೋಣೆ ಮತ್ತು 2019ರಲ್ಲಿ ಸಾಯಿ ಪ್ರಣೀತ್ ಮಾತ್ರ ಈ ಟೂರ್ನಿಯಲ್ಲಿ ಕಂಚು ಗೆದ್ದ ಸಾಧನೆ ಮಾಡಿದ್ದಾರೆ.

India Tour of SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಯಾವಾಗ ಪ್ರಕಟ?: ಯಾರಿಗೆ ಚಾನ್ಸ್?

Akash Chopra: ಏಕದಿನ ಸರಣಿಗೆ ಈತನನ್ನು ಕೈಬಿಡಬಾರದು, ಅದು ಒಳ್ಳೆಯ ನಿರ್ಧಾರವಲ್ಲ ಎಂದ ಆಕಾಶ್ ಚೋಪ್ರಾ

(BWF World Championships Kidambi Srikanth become the first Indian to make the World Championship finals)

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ