AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೇಲೋ ಇಂಡಿಯಾದಲ್ಲಿ ಮಿಂಚಲು ಬಡತನ ಅಡ್ಡಿ: ಬಾಲಕಿಗೆ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಟಿವಿ9ಗೆ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಬಡತನದಿಂದ ತನ್ನ ಸಾಧನೆಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅಳಲು ತೋಡಿಕೊಂಡಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಪ್ರತಿಕ್ರಿಯಿಸಿ ನೆರವಿನ ಭರವಸೆ ನೀಡಿದ್ದಾರೆ.

ಖೇಲೋ ಇಂಡಿಯಾದಲ್ಲಿ ಮಿಂಚಲು ಬಡತನ ಅಡ್ಡಿ: ಬಾಲಕಿಗೆ ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 09, 2021 | 12:10 PM

Share

ಬೆಂಗಳೂರು (ಸೆ. 09): ಮಾಧ್ಯಮ ಲೋಕದ ಇತಿಹಾಸದಲ್ಲೇ ಟಿವಿ9 ವಿಶಿಷ್ಟ ಪ್ರಯತ್ನ ನಡೆಸಿದ್ದು, ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಅಲ್ಲೇ ಪರಿಹಾರ ಕಲ್ಪಿಸಲು ಕಾಮನ್ ಮ್ಯಾನ್​ಗೂ-CMಗೂ ಟಿವಿ9 ವೇದಿಕೆ ಸೃಷ್ಟಿಸಿದೆ. ಇದು ಮಾಧ್ಯಮ ಲೋಕದ ಇತಿಹಾಸದಲ್ಲೇ ವಿಶಿಷ್ಟ ಪ್ರಯತ್ನವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಟಿವಿ9 (Tv9) ಸ್ಟುಡಿಯೋದಲ್ಲಿ ಕಾಮನ್​ಮ್ಯಾನ್ ಜೊತೆ ಮುಕ್ತವಾಗಿ ಮಾತನಾಡುತ್ತಿದ್ದಾರೆ. ನೇರವಾಗಿ ಜನರ ಸಮಸ್ಯೆ ನೇರವಾಗಿ ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡುವ ವ್ಯವಸ್ಥೆಗೆ ಟಿವಿ9 ವೇದಿಕೆ ಕಲ್ಪಿಸಿಕೊಟ್ಟಿದೆ. ಟಿವಿ9 ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವೀಕ್ಷಕರು ಮುಕ್ತ ಮಾತುಕತೆ ನಡೆಸಿದ್ದಾರೆ. ವಿಪಕ್ಷಗಳ ಟೀಕೆಗೂ ಉತ್ತರ ನೀಡುತ್ತಾ, ತಜ್ಞರ ಸಲಹೆಗೂ ಮನ್ನಣೆ ನೀಡುತ್ತಾ CM ಸ್ಪೀಕಿಂಗ್ ಇದೀಗ ಟಿವಿ9ನಲ್ಲಿ ನಡೆದಿದೆ.

ಈವೇಳೆ ಟಿವಿ9ಗೆ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಬಡತನದಿಂದ ತನ್ನ ಸಾಧನೆಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅಳಲು ತೋಡಿಕೊಂಡಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಪ್ರತಿಕ್ರಿಯಿಸಿ ನೆರವಿನ ಭರವಸೆ ನೀಡಿದ್ದಾರೆ.

ಸಾಧನೆ ಶಿಖರವೇರಲು ಹೊರಟ ಛಲಗಾರ್ತಿ ಪವಿತ್ರಾ ಕುರ್ತಕೋಟಿ ಅವರಿಗೆ ಬಡತನ ಶಾಪವಾಗಿ ಪರಿಣಮಿಸಿದೆ. ಇವರಿಗೆ ಖೇಲೋ ಇಂಡಿಯಾದಲ್ಲಿ ಮಿಂಚಲು ತುಂಬಾನೆ ಆಸೆ. ಹೀಗಾಗಿ ಮುಖ್ಯಮಂತ್ರಿ ಬಳಿ ಸೈಕಲ್ ಕೊಡಿಸಿ ಸಾಧನೆಗೆ ಕೈಜೋಡಿ ಎಂದು ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಲಕಿಗೆ ಸೈಕಲ್​ ಕೊಡಿಸುವ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಕ್ರೀಡಾ ಇಲಾಖೆಯವರೊಂದಿಗೆ ಚರ್ಚಿಸಿ ಹಣಕಾಸು ನೆರವು ನೀಡುತ್ತೇವೆ. ನಿಮಗೆ ಯಾವ ಮಾಡೆಲ್ ಬೇಕೆಂದು ಕೇಳಿ ಸೈಕಲ್ ಕೊಡಿಸ್ತೇವೆ.  ಕೇವಲ ಸೈಕಲ್ ಮಾತ್ರವಲ್ಲ, ಎಲ್ಲ ಸೌಲಭ್ಯ ಒದಗಿಸುತ್ತೇವೆ ಎಂದು ಟಿವಿ9 ಸ್ಟುಡಿಯೋದಲ್ಲಿ ಸಿಎಂ ಹೇಳಿದ್ದಾರೆ.

ಇನ್ನೂ ಇದೇವೇಳೆ ಸಿಎಂ ಪರಿಹಾರ ನಿಧಿ ಬಾಬತ್ತಿನಲ್ಲಿ 2019ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಪರಿಹಾರ ಚೆಕ್​ ಅನ್ನು ತಹಸೀಲ್ದಾರ್ ಚಾಮರಸ ಪಾಟೀಲ್​ ಅವರು ಫಲಾನುಭವಿಗೆ ನೀಡದೆ ಕಾಟಕೊಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನ ಸೆಳೆದಾಗ ಇದು ದುರದೃಷ್ಟಕರ ಸಂಗತಿ. ಅಧಿಕಾರಿಯಿಂದ ಲೋಪವಾಗಿದೆ. ರಾಯಚೂರು ಜಿಲ್ಲಾಧಿಕಾರಿಗೆ ಮಾತನಾಡಿ 24 ಗಂಟೆಯಲ್ಲಿ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ. ಚೆಕ್​ ಲ್ಯಾಪ್ಸ್​  ​ಆಗಿದ್ದರೆ ಹೊಸದಾಗಿ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿರುವೆ ಎಂದು ಭರವಸೆ ನೀಡಿದರು. ಇದೇ ವೇಳೆ ಫಲಾನುಭವಿ ಜೊತೆಯೂ ಮಾತನಾಡಿದರು.

CM Bommai Interview LIVE: ಟಿವಿ9 ಸ್ಟುಡಿಯೋದಲ್ಲಿ ಸಿಎಂ ಬೊಮ್ಮಾಯಿ; ಕಾಮನ್​ಮ್ಯಾನ್ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ